![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Feb 21, 2020, 3:07 PM IST
ಕನಕಪುರ: ಹೈಕೋರ್ಟ್ ಆದೇಶ ಪಾಲಿಸಿರುವ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡುವುದು ಅಸಂಬದ್ಧ ಎಂದು ಬಿಜೆಪಿ ನಗರ ಅಧ್ಯಕ್ಷ ನಾಗಾನಂದ್ ಕಾಂಗ್ರೆಸ್ ಕಾರ್ಯಕರ್ತರ ಪರೋಕ್ಷವಾಗಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಕಸಬಾ ಹೋಬಳಿಯ ಬರಡನಹಳ್ಳಿ ಗ್ರಾಮದ ಸರ್ವೆ ನಂ.40ರಲ್ಲಿ ಬೈರೇಗೌಡ ಎಂಬುವರ ಕುಟುಂಬಕ್ಕೆ ಅಕ್ರಮವಾಗಿ 5 ಎಕರೆ ಜಮೀನು ನೀಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಹ ಶೀಲ್ದಾರ್ ವಿರುದ್ಧ ಪ್ರತಿಭಟನೆ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೈಕೋರ್ಟ್ ಆದೇಶದಂತೆ ರೈತರಿಗೆ ನೀಡಿರುವ ಸರ್ಕಾರಿ ಗೋಮಾಳದ ಖಾತೆ ವಜಾಗೋಳಿಸಬಾರದು ಎಂದು ತಾಲೂಕು ಕಚೇರಿ ಆವರಣದಲ್ಲಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಅವರು, ಬರಡನಹಳ್ಳಿ ಸರ್ವೆ ನಂ.40 ರಲ್ಲಿ ಸರ್ಕಾರಿ ಗೋಮಾಳದಲ್ಲಿ 1962 ರಿಂದ ಸಾಗುವಳಿ ಮಾಡುತ್ತಿದ್ದ ಬೈರೇ ಗೌಡ ಅವರನ್ನು ಹೊರತುಪಡಿಸಿ ಹಲವು ರೈತರಿಗೆ ಸಾಗುವಳಿ ಮಂಜೂರಾಗಿತ್ತು. ಸಾಗುವಳಿಯಿಂದ ವಂಚಿತರಾದ ಬೈರೆ ಗೌಡರ ಕುಟುಂಬ 2015 ರಲ್ಲಿ ಜಿಲ್ಲಾಧಿಕಾರಿಗಳಿಗೆ ಸಾಗುವಳಿ ನೀಡು ವಂತೆ ಮನವಿ ಸಲ್ಲಿಸಿತ್ತು. ಅಧಿಕಾರಿಗಳು ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 2019 ರಲ್ಲಿ ಬೈರೇಗೌಡರ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಪರಿಶೀಲಿಸಿದ ನ್ಯಾಯಾ ಲಯ ಭೈರೇಗೌಡ ಅವರ ಸೊಸೆ ಪಾರ್ವತಮ್ಮ ಅವರಿಗೆ ಸಾಗುವಳಿ ನೀಡುವಂತೆ ಅಧಿಕಾರಿಗಳಿಗೆ ಆದೇ ಶಿಸಿತ್ತು. ಅದರಂತೆ ತಹಶೀಲ್ದಾರ್ ಖಾತೆ ಮಾಡಿಕೊಟ್ಟಿದ್ದಾರೆ. ಆದರೆ ಕೆಲ ವರು ರಾಜಕೀಯ ದುರುದ್ದೇಶದಿಂದ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಆಕ್ರಮ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಅಧಿಕಾರಿಗಳ ವಿರುದ್ದ ಪ್ರತಿಭಟಿಸಿದ್ದಾರೆ ಎಂದರು.
ಈ ವೇಳೆ ಬಿಜೆಪಿ ಮುಖಂಡರಾದ ಬದ್ರಿ ಮೋಹನ್, ಕೋಟೆ ಮಂಜು, ಶೇಖರ್, ಭಗತ್ರಾಂ, ಶಿವಶಂಕರ್, ಗೋಪಿ ಉಪಸ್ಥಿತರಿದ್ದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.