24 ವರ್ಷದಿಂದ ಕಚೇರಿಗೆ ನಿವೃತ್ತ ಶಿಕ್ಷಕನ ಅಲೆದಾಟ!


Team Udayavani, Feb 1, 2023, 11:51 AM IST

tdy-9

ಮಾಗಡಿ: ಮುಖ್ಯ ಶಿಕ್ಷಕರಾಗಿದ್ದ ಎಚ್‌.ಸಿದ್ದಲಿಂಗಪ್ಪ ಅವರು ನಿವೃತ್ತಿಯಾಗಿ 24 ವರ್ಷ ಕಳೆದರೂ ಇನ್ನೂ ಸಹ ಅವರಿಗೆ ಸೇರಬೇಕಾದ ಸೇವಾ ಅವಧಿಯ ಹಣಬಂದಿಲ್ಲ. ಜತೆಗೆ ಅವರಿಗೆ ಸಿಗಬೇಕಾಗಿದ್ದ ಮುಂಬಡ್ತಿ ವೇತನವೂ ಸಿಕ್ಕಿಲ್ಲ, ಇದಕ್ಕಾಗಿ 24 ವರ್ಷದಿಂದ ಬಿಇಒಕಚೇರಿಗೆ ಅಲೆದು ಅಲೆದು 24 ಜತೆ ಚಪ್ಪಲಿಸವೆಸಿದರೂ ಸೌಲಭ್ಯದ ನ್ಯಾಯ ಸಿಕ್ಕಿಲ್ಲ ಎಂದು ಅವರ ಪುತ್ರ ಮಹೇಶ್ವರಯ್ಯ ಅವರು ಬಿಇಒ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.

ನಿರ್ಲಕ್ಷ್ಯ ಧೋರಣೆ: ತಾಲೂಕಿನ ಕಣನೂರು ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ಎಚ್‌.ಸಿದ್ದಲಿಂ ಗಪ್ಪ32 ವರ್ಷ ಸೇವೆ ಸಲ್ಲಿಸಿ, ಜೌಡೇಬೇಗೂರಿ ನಲ್ಲಿಯೇ1999ರಲ್ಲಿ ನಿವೃತ್ತಿಯಾಗಿದ್ದಾರೆ. 1992ರ ಜೂನ್‌ನವೇತನ ಬಂದಿಲ್ಲ, 1993ರಿಂದ 1999ರ ವರೆಗೂ ಹೈದರಾಬಾದ್‌ ವೇತನದ ಬಾಕಿ, ವಾರ್ಷಿಕ ಬಡ್ತಿ , 1974ರ ಕನ್ನಡ ಭಾಷೆಗೆ ಸಂಬಂಧಿಸಿದ ಮುಂಬಡ್ತಿನೀಡಿಲ್ಲ. ಗಳಿಕೆ ರಜಾದ ವೇತನವಾಗಲಿ, ಸ್ಟಾಗ್ನಷೇನ ಇಂಕ್ರೀಮೆಂಟ್‌ ನೀಡಿಲ್ಲ. 1960-1967 ರವರೆಗೆ ಸಿದ್ಧ ಗಂಗಾ ಪ್ರಾಕ್ಟಿಸಿಂಗ್‌ ಎಲಿಮೆಂಟರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದು, ಸದರಿ ವೇತನ ಪರಿಗಣಿಸಿಲ್ಲ, ಬಿಇಒ ಅವರನ್ನು ಪ್ರಶ್ನಿಸಿದರೆ ಸೇವಾನಿರತ (ಎಸ್‌.ಆರ್‌) ಪುಸ್ತಕ ವೇ ಕಳೆದುಹೋ ಗಿದೆ. ಈ ಸಂಬಂಧ ಕೇಸ್‌ ವರ್ಕರ್‌ಗೆ ನೋಟಿಸ್‌ ನೀಡಿಡಿದ್ದೇವೆ ಎನ್ನುತ್ತಿದ್ದು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆ ವಿರುದ್ಧ ಮಹೇಶ್ವರಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಾನು 1 ತಿಂಗಳಿನಿಂದ ಕಚೇರಿಗೆ ಅಲೆಯುತ್ತಿದ್ದೇನೆ. ನಮ್ಮ ತಂದೆಗೆ ಈಗ 86 ವರ್ಷ ವಯಸ್ಸು. ನಾನು ದುಡಿದ ಹಣ ನನಗೆ ಬರಲಿಲ್ಲವಲ್ಲ ಎಂದು ನೊಂದಿದ್ದಾರೆ. ತನ್ನ ತಂದೆ ಸಾವಿಗೆ ಶಿಕ್ಷಣ ಇಲಾಖೆಯೇ ನೇರ ಹೊಣೆ ಆಗಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆಗೆ ದೂರು ಪತ್ರ ಬರೆಯಲಾಗಿದೆ. – ಮಹೇಶ್ವರಯ್ಯ, ಸಿದ್ದಲಿಂಗಪ್ಪ(ನಿವೃತ್ತ ಶಿಕ್ಷಕರು) ಪುತ್ರ

ನಿವೃತ್ತ ಮುಖ್ಯ ಶಿಕ್ಷಕ ಎಚ್‌.ಸಿದ್ದಲಿಂಗಯ್ಯ ಅವರ ಸೇವಾ ಅವಧಿ ದಾಖಲೆ ಪುಸ್ತಕಗಳು ಸಿಗುತ್ತಿಲ್ಲ. ಇಲಾಖೆಯ ಈಹಿಂದಿನ ಸಿಬ್ಬಂದಿ ಖಾನ್‌ ಅವರು ಏಕೆ ಸೌಲಭ್ಯಕೊಟ್ಟಿಲ್ಲ ಎಂಬುದರ ಬಗ್ಗೆ ಗೊತ್ತಿಲ್ಲ ಎಂದು ಪ್ರಶ್ನಿಸಿ ನೋಟಿಸ್‌ ಜಾರಿ ಮಾಡಲಾಗಿದೆ. ಬೇಕಿದ್ದರೆ ಅವರಿಗೆ ಹಿಂಬರಹ ಕೊಡಲಿದ್ದೇವೆ. -ನಾಗೇಶ್‌ಕುಮಾರ್‌, ವ್ಯವಸ್ಥಾಪಕರು ಬಿಇಒ ಕಚೇರಿ ಮಾಗಡಿ

-ಟಿ.ಎಂ.ಶ್ರೀನಿವಾಸ್‌

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.