ಕಂದಾಯ ಭವನ ಇನ್ಮುಂದೆ ಜಿಲ್ಲಾಸ್ಪತ್ರೆ

ಟ್ರಾಮಾ ಕೇರ್‌, ಸೂಪರ್‌ ಸ್ಪೆಷಾಲಿಟಿ ಸೇವೆಗೆ ಚಿಂತನೆ

Team Udayavani, Jul 17, 2020, 5:22 PM IST

ಕಂದಾಯ ಭವನ ಇನ್ಮುಂದೆ ಜಿಲ್ಲಾಸ್ಪತ್ರೆ

ರಾಮನಗರ: ನಗರದ ಕಂದಾಯ ಭವನ ಇನ್ನು ಮುಂದೆ ಶಾಶ್ವತವಾಗಿ ಜಿಲ್ಲಾಸ್ಪತ್ರೆ ವಿಸ್ತರಿತ ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆಯೆ? ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಿಂತನೆ ಹಾಗೂ ಜಿಲ್ಲಾಡಳಿತಕ್ಕೆ ನೀಡಿರುವ ಸಲಹೆ, ಸೂಚನೆಗಳು ಅದಕ್ಕೆ ಪೂರಕವಾಗಿದೆ.

ನಗರದ ಬೆಂಗಳೂರು-ಮೈಸೂರು ಹೆದ್ದಾರಿ ಪಿಡಬ್ಲ್ಯೂಡಿ ವೃತ್ತದ ಕಂದಾಯ ಭವನ ತಾತ್ಕಾಲಿಕವಾಗಿ ಕೋವಿಡ್‌-19 ರೆಫ‌ರಲ್‌ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡದ ಪಕ್ಕದಲ್ಲೇ ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಪೂರ್ಣ ಹಂತದಲ್ಲಿದೆ. ಜಿಲ್ಲಾಸ್ಪತ್ರೆಯ ವಿಸ್ತೃತ ಕಟ್ಟಡವಾಗಿ ಕಂದಾಯ ಭವನ ಅಭಿವೃದ್ಧಿ ಪಡಿಸುವ ಇಂಗಿತ ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತದೊಂದಿಗೆ ಚರ್ಚೆ: ಗುರುವಾರ ಡಿಸಿಎಂ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಕಂದಾಯ ಭವನವನ್ನು ಜಿಲ್ಲಾಸ್ಪತ್ರೆ ವಿಸ್ತೃತ ಕಟ್ಟಡವನ್ನಾಗಿ ಬಳಸಿಕೊಳ್ಳಲು ಚರ್ಚೆಗಳು ನಡೆದಿದೆ. ಕಂದಾಯ ಭವನವನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ಕೊಟ್ಟಿದ್ದಾರೆ. ತುರ್ತು ನಿರ್ವಹಣೆ ಕೇಂದ್ರ, ಅಪಘಾತ ಚಿಕಿತ್ಸೆ ವಿಭಾಗ, ಟ್ರಾಮಾ ಕೇರ್‌, ಕ್ಯಾನ್ಸರ್‌ ಆಸ್ಪತ್ರೆ ಸೇರಿದಂತೆ ಸೂಪರ್‌ ಸ್ಪೆಷಾಲಿಟಿ ವ್ಯವಸ್ಥೆ ಕಲ್ಪಿಸುವುದು ಅವರ ಚಿಂತನೆ. ಪಕ್ಕದಲ್ಲೇ ಜಿಲ್ಲಾಸ್ಪತ್ರೆಯೂ ಇರಲಿದ್ದು, ಜಿಲ್ಲೆಯ ರೋಗಿಗಳಿಗೆ ಒಂದೇ ಕಡೆ ಉತ್ತಮ ವೈದ್ಯಕೀಯ ಸೇವೆ ಲಭ್ಯವಾಗಿಸುವ ಈ ಚಿಂತನೆ ಎಷ್ಟು ಸಾಕಾರವಾಗಲಿದೆ ಎಂಬುದನ್ನು ಕಾದು ನೋಡಬೇಕು.

ಕಂದಾಯ ಭವನ: ಎಚ್‌ಡಿಕೆ ಕನಸು: ರಾಮನಗರ ಶಾಸಕರಾಗಿ, 2006ರಲ್ಲಿ ಪ್ರಥಮ ಬಾರಿಗೆ ಸಿಎಂ ಗಾದಿಗೇರಿದ ಎಚ್‌. ಡಿ.ಕುಮಾರಸ್ವಾಮಿ, ತಮ್ಮ ಆಡಳಿತಾವಧಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ರಾಮನಗರ, ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ತಾಲೂಕು ಬೇರ್ಪಡಿಸಿ ರಾಮನಗರ ಜಿಲ್ಲೆ ನಿರ್ಮಿಸಿದರು. ಸುಗಮ ಮತ್ತು ಪರಿಣಾಮಕಾರಿ ಆಡಳಿತ ನೀಡುವುದು ಅವರ ಉದ್ದೇಶವಾಗಿತ್ತು. ಅದಕ್ಕೆ ಪೂರಕವಾಗಿ ಕಂದಾಯ ಭವನ, ಪೊಲೀಸ್‌ ಭವನ ಮತ್ತು ಜಿಪಂ ಬೃಹತ್‌ ಭವನ ನಿರ್ಮಿಸಿದರು. ಕಾರ್ಪೋರೇಟ್‌ ಸಂಸ್ಥೆಗಳ ಕಟ್ಟಡಗಳಂತೆ ಈ ಕಟ್ಟಡಗಳು ನಿರ್ಮಾಣವಾಗಿವೆ. ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳೆಲ್ಲ, ಒಂದೇ ಕಡೆ ನಾಗರಿಕರಿಗೆ ಸಿಗಬೇಕು ಎಂಬ ಉದ್ದೇಶಕ್ಕೆ ಗೌಸೀಯಾ ಕಾಲೇಜಿನ ಎದುರು ವಿಧಾನಸೌಧ ಮಾದರಿಯಲ್ಲೇ ಮತ್ತೂಂದು ಕಟ್ಟಡ ನಿರ್ಮಾಣವಾಗಿದೆ. ಕಂದಾಯ ಭವನದಲ್ಲಿದ್ದ ಡೀಸಿ ಕಚೇರಿ ಸೇರಿದಂತೆ ಎಲ್ಲಾ ಕಚೇರಿಗಳು ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣಕ್ಕೆ ಸ್ಥಳಾಂತರವಾಗಿದೆ. ಕಂದಾಯ ಭವನವನ್ನು ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ನೀಡಲಾಗಿತ್ತು. ಆದರೆ ವಿವಿ ಕಚೇರಿ ಇಲ್ಲಿಗೆ ಬರಲಿಲ್ಲ. ಕೋವಿಡ್‌-19 ರೆಫ‌ರಲ್‌ ಆಸ್ಪತ್ರೆಯಾಗಿ ಕಂದಯ ಭವನ ಪರಿವರ್ತನೆಯಾಗಿದೆ. ಇದೀಗ ಡಿಸಿಎಂ ಅವರ ಚಿಂತನೆ ಸಾಕಾರವಾದರೆ ಕಂದಾಯ ಭವನ ಇನ್ನು ಮುಂದೆ ಶಾಶ್ವತವಾಗಿ ಜಿಲ್ಲಾಸ್ಪತ್ರೆಯ ವಿಸ್ತರಿತ ಕಟ್ಟಡವಾಗಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.