ಜಲಪಾತದಂತಾದ ರಸ್ತೆ ಮಾರ್ಗ: ಸಂಚಾರ ಅಸ್ತವ್ಯಸ್ತ


Team Udayavani, Aug 27, 2022, 11:29 PM IST

ಜಲಪಾತದಂತಾದ ರಸ್ತೆ ಮಾರ್ಗ: ಸಂಚಾರ ಅಸ್ತವ್ಯಸ್ತ

ರಾಮನಗರ: ಜಿಲ್ಲಾದ್ಯಂತ ಸುರಿಯಲಾರಂಭಿಸಿರುವ ಮಳೆಗೆ ನಿಜಕ್ಕೂ ಜನತೆ ಹೈರಾಣಾಗಿದ್ದಾರೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರ ಪ್ರದೇಶಗಳಲ್ಲೇ ಮನೆಗೆ ನೀರು ನುಗ್ಗಲಾರಂಬಿಸಿದ್ದು ಹಲವೆಡೆ ಅವಾಂತರಗಳನ್ನ ಸೃಷ್ಟಿಸಿದೆ. ಅಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ಯಂತೂ ಮಳೆಗೆ ಕೆರೆಯಂತಾಗಿ ರೂಪುಗೊಂಡಿದೆ.

ನಗರದ ಟಿಪ್ಪುನಗರದಲ್ಲಿ ಬ್ರಿಡ್ಜ್ ಕಟ್ಟಿಕೊಂಡಿದ್ದು, ನೀರಿನ ಹರಿವು ಕಷ್ಟವಾಗಿದ್ದು, ಸುರಿದ ಧಾರಾಕಾರ ಮಳೆಗೆ ನೀರು ಮನೆಗಳಿಗೆ ನುಗ್ಗಲಾರಂಭಿಸಿದೆ. 23ನೇ ವಾರ್ಡ್‌ ಟಿಪ್ಪುನಗರದಲ್ಲಿ ಬರುವ ಸೀರಳ್ಳ ತುಂಬಿ ಹರಿಯುತ್ತಿದ್ದು, ಆ ಭಾಗದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನತೆ ರಾತ್ರಿ ನಿದ್ರೆ ಇಲ್ಲದೆ ನೀರು ಮನೆಗೆ ನುಗ್ಗದಂತೆ ನೋಡಿಕೊಳ್ಳುವುದೇ ಆಗಿತ್ತು. ಅಲ್ಲದೆ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿಟ್ಟಿದ್ದ ಪಡಿತರ ಸೇರಿದಂತೆ ಆಹಾರ ಸಾಮಗ್ರಿ ಹಾಗೂ ಬಟ್ಟೆ ಬರೆ ಎಲ್ಲವೂ ನೀರಿನಲ್ಲಿ ತೋಯ್ದು ಕೆಲವು ಕಡೆ ಕೊಚ್ಚಿಕೊಂಡು ಹೋದ ದೃಶ್ಯ ಸಾಮಾನ್ಯವಾಗಿತ್ತು.

ಮನೆಗಳಿಗೆ ನುಗ್ಗಿದ ನೀರು: ವಾರ್ಡ್‌ ನಂ 21ರ ಅರ್ಕೇ ಶ್ವರ ಕಾಲೋನಿಯಲ್ಲಿ ನೀರು ಮನೆಗಳಿಗೆ ನುಗ್ಗಿದ್ದು, ಸೇತುವೆಯ ಕೆಳಭಾಗ ನೀರು ತುಂಬಿ ಹುಣಸನಹಳ್ಳಿ, ಕೊತ್ತಿಪುರ ಸೇರಿದಂತೆ ಇತರ ಮಾರ್ಗದ ಕೆಳ ಸೇತುವೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಅಲ್ಲದೆ, ನಗರದ ಕೊಳಚೆ ನೀರು ಮನೆಗಳಿಗೆ ಹೆಚ್ಚಾಗಿ ನುಗ್ಗಿದ್ದು ದುರ್ನಾತ ಹೊಡೆ ಯಲಾರಂಭಿಸಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿ ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿ ದ್ದಾರೆ. ಚನ್ನಮಾನಹಳ್ಳಿ ಬಳಿಯ ಕೆರೆ ಕೋಡಿ ಹೊಡೆದು ನೀರು ಕನಕಪುರ ರಸ್ತೆಯತ್ತ ನುಗ್ಗಿದೆ. ಇದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅರ್ಚಕಹಳ್ಳಿ ಬಳಿಯ ರಂಗರಾಯರದೊಡ್ಡಿ ಕೆರೆ ಕೋಡಿ ಹೊಡೆದ ಪರಿಣಾಮ ಬೆಂಗಳೂರು-ಮೈಸೂರು ರಸ್ತೆಗೆ ನೀರು ನುಗ್ಗಿದ್ದು, ಕೆಲ ಕಾಲ ಪ್ರವಾಹದಂತ ಅನುಭವ ನೀಡಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ
ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು ನಿಂತು ಕೆರೆಯಂತಾಗಿದ್ದರಿಂದ ಜೀವ ಕೈಯಲ್ಲಿಡಿದು ವಾಹನ ಚಾಲಕರು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನರಿತ ಜಿಲ್ಲಾಡಳಿತ ಬೆಂಗಳೂರು ಮತ್ತು ಮೈಸೂರು ನಡುವಣ ಸಂಚಾರಕ್ಕೆ ರಸ್ತೆ ಬಳಸದಂತೆ ಎಚ್ಚರಿಕೆ ನೀಡಿದ್ದು, ಪರ್ಯಾಯ ಮಾರ್ಗವಾಗಿ ಕನಕಪುರ ಮಾರ್ಗ ಅಥವಾ ಮಾಗಡಿ ಮಾರ್ಗದ ರಸ್ತೆಗಳಲ್ಲಿ ಸಂಚಾರಕ್ಕೆ ಬಳಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ವಿಶೇಷವಾಗಿ ಬೆಂಗಳೂರಿನಿಂದ-ಮೈಸೂರಿಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅವೈಜ್ಞಾನಿಕ ಕಾಮಗಾರಿಯಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳಪೆ ಕಾಮಗಾರಿಯಾಗಿದ್ದು, ರಸ್ತೆ ನಿರ್ಮಾಣದ ವೇಳೆ ಬಿದ್ದ ನೀರು ಮೋರಿ ಅಥವಾ ರಾಜಕಾಲುವೆಗೆ ನೇರವಾಗಿ ಹೋಗುವಂತೆ ಕಾಮಗಾರಿ ನಿರ್ಮಿಸುವಲ್ಲಿ ವಿಫಲವಾಗಿದ್ದೆ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.