ತಾಲೂಕು ಕಚೇರಿ ಕಡತ ದುರುಪಯೋಗ


Team Udayavani, Jun 4, 2022, 3:38 PM IST

ತಾಲೂಕು ಕಚೇರಿ ಕಡತ ದುರುಪಯೋಗ

ಚನ್ನಪಟ್ಟಣ: ತಾಲೂಕಿನ ಕಚೇರಿಯ ಕಡತವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ದ್ವಿತೀಯ ದರ್ಜೆ ನೌಕರ ಅಮಾನತು ಗೊಂಡಿರುವ ಘಟನೆ ನಡೆದಿದೆ.

ಚನ್ನಪಟ್ಟಣ ತಾಲೂಕಿನಲ್ಲಿ ಸರ್ಕಾರಿ ಜಮೀನುಗಳ ಕಡತ ವಿಲೇವಾರಿ ವಿಚಾರವಾಗಿ ವ್ಯಾಪಕ ಗೋಲ್‌ ಮಾಲ್‌ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಲೆ ಇತ್ತು. ಈ ಅಕ್ರಮಕ್ಕೆ ದ್ವಿತೀಯ ದರ್ಜೆ ನೌಕರ ಅಮಾ  ನತು ಗೊಂಡು ಶಿಕ್ಷೆಗೆ ಒಳಗಾಗಿದ್ದಾನೆ. ತಾಲೂಕು ಕಚೇರಿಯ ಮಂಜೂರಾತಿ ವಿಭಾಗದ ದ್ವಿತೀಯ ದರ್ಜೆ ಸಹಾ  ಯಕ ಬಿ.ಕೆ. ಹರೀಶ್‌ ಅಮಾನತುಗೊಂಡಿದ್ದು, ಕೆಲಸದಲ್ಲಿ ಬೇಜವಾಬ್ದಾರಿ ಹಾಗೂ ಅಶ್ರದ್ಧೆ ತೋರಿದ ಆರೋಪದ ಮೇರೆಗೆ ಜಿಲ್ಲಾಧಿಕಾರಿ ಡಾ. ಅನಾಶ್‌ ಮೆನನ್‌ ರಾಜೇಂದ್ರನ್‌ ಅಮಾನತು ಆದೇಶ ಹೊರಡಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಯಾವಾಗ!: ಚನ್ನಪಟ್ಟಣ ತಾಲೂಕು ಕಚೇರಿಯ ಕಡತವನ್ನು ದುರುಪಯೋಗ ನಡೆಯುತ್ತಿತ್ತು. ಸಾಕ್ಷಿ ಸಮೇತ ಸಿಕ್ಕಿಕೊಂಡ ಈತನ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಹಾಗೂ ಶಿಸ್ತುಕ್ರಮ ಕೈಗೊಳ್ಳುವಂತೆ ಚನ್ನಪಟ್ಟಣ ತಹಶ್ರೀಲ್ದಾರ್‌ ಹರ್ಷವರ್ಧನ್‌ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ವರದಿ ಆದರಿಸಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ನಕಲಿ ಸಾಗುವಳಿ ದಾಖಲೆ ಸೃಷ್ಟಿ: ತಾಲೂಕಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಗೋಮಾಳ ಜುಮೀನು ಇದ್ದು, ಹಲವು ಮಂದಿ ಈಗಾಗಲೇ ಸಾಗುವಳಿ ನಡೆಸುತ್ತಿದ್ದಾರೆ. ಅದರಂತೆ ಅನೇಕ ವರ್ಷಗಳ ಹಿಂದೆ ಕೆಲ ರೈತರಿಗೆ ಸಾಗುವಳಿ ಚೀಟಿ ಪಡೆದುಕೊಂಡು ವ್ಯವಸಾಯ

ಮಾಡುತ್ತಿದ್ದಾರೆ. ಬಹಳಷ್ಟು ಮಂದಿಗೆ ಸಾಗುವಳಿ ಚೀಟಿಯೂ ಸಿಗದೇ, ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇದ್ದು, ಪೋಡಿ ದುರಸ್ತಿಯೂ ಆಗದೆ ಮತ್ತೆ ಕೆಲವರು ಸಾಗುವಳಿ ನಡೆಸುತ್ತಿದ್ದಾರೆ. ಈ ಮಧ್ಯೆ ಕಂದಾಯ ಇಲಾಖೆ ಕೆಲವು ಅಧಿಕಾರಿಗಳು ಭೂ ಮಾಫಿಯಾ ದವರೊಂದಿಗೆ ಕೈಜೋಡಿಸಿ ನಕಲಿ ಸಾಗುವಳಿ ಪತ್ರ ಸೃಷ್ಟಿಸುವ ಆರೋಪ ಇತ್ತು. ಇದಲ್ಲದೇ ಈಗಾಗಲೇ ಸಾಗುವಳಿ ಮಾಡುತ್ತಿರುವ ರೈತರ ಮೂಲ ದಾಖಲೆ ಗಳನ್ನು ಕಡತದಿಂದ ತೆಗೆದು, ನಕಲಿ ಸಾಗುವಳಿದಾರರಿಗೆ ದಾಖಲೆ ಸೃಷ್ಟಿಸುವ ಕೆಲಸ ಕೂಡ ನಡೆಸು ಆರೋಪ ಮಾಡಲಾಗುತ್ತಿತ್ತು.

ಈ ದುರುಪಯೋಗದ ಪ್ರಕರಣದಲ್ಲಿ ಕಂದಾಯ ಇಲಾಖೆ ನೌಕರನೊಬ್ಬ ಸದ್ಯಕ್ಕೆ ಸಿಕ್ಕಿಕೊಂಡಿದ್ದಾನೆ. ಈ ಪ್ರಕರಣದ ಹಿಂದೆ ಸೂಕ್ಷ್ಮವಾಗಿ ತನಿಖೆ ನಡೆಸಿದರೆ, ಇಲಾಖೆಯ ಹಲವಾರು ನೌಕರರು ಸಿಕ್ಕಿ ಹಾಕಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ!: ಅಮಾನತಾಗಿರುವ ಬಿ.ಕೆ. ಹರೀಶ್‌ ಕುಮಾರ್‌ ಚನ್ನಪಟ್ಟಣ ತಾಲೂಕು ಕಚೇರಿ ಭೂ ಮಂಜೂರಾತಿಯ ಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿ ಕೆಲಸನಿರ್ವಹಿಸುತ್ತಿದ್ದನು. ಈತ ಮಳೂರು ಹೋಬಳಿ ಕೋಲೂರು ಗ್ರಾಮದ ಸರ್ವೆ ನಂ.118ರ ಮೂಲ ಮಂಜೂರು ಕಡತವನ್ನ ಮೇಲಧಿಕಾರಿಗಳ ಹಾಗೂ ಶಾಖೆಯ ವಿಷಯ ನಿರ್ವಾಹಕರ ಅನುಮತಿ ಇಲ್ಲದೇ ಇದೇ ಮೇ 27ರಂದು ಕಚೇರಿಯಿಂದ ತೆಗೆದುಕೊಂಡು ಹೋಗಿ, ಮೇ 30ಕ್ಕೆ ಈ ಕಡತವನ್ನು ಕಚೇರಿಗೆ ಹಿಂದುರಿಗಿಸಿದ್ದನು. ಈ ಬಗ್ಗೆ ಮಾಹಿತಿ ತಿಳಿದು ಬಂದ ತಹಶೀಲ್ದಾರ್‌ ಈ ಕಡತಗಳನ್ನು ಪರಿಶೀಲಿಸಿದಾಗಮೂಲ ಕಡಕದ ಪುಟಗಳನ್ನು ತೆಗೆದು ನಕಲಿ ದಾಖಲೆಗಳನ್ನು ಆ ಜಾಗಕ್ಕೆ ಸೇರಿಸಲಾಗಿತ್ತು. ಕಚೇರಿಯ ಕಡತವನ್ನು ದುರುಪಯೋಗ ಪಡಿಸಿಕೊಂಡು ಅಕ್ರಮ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈತನ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಆಧರಿಸಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.