ಸಂವಿಧಾನದಲ್ಲಿ ವಿವಿಧ ಸಂಸ್ಕೃತಿ ಆಚರಣೆಗೆ ಅವಕಾಶ


Team Udayavani, Nov 28, 2022, 2:30 PM IST

tdy-8

ರಾಮನಗರ: ಭಾರತ ಸಂವಿಧಾನ ರಚನೆಯ ಸ್ವರೂಪವೇ ಎಲ್ಲರನ್ನೂ ಒಳ್ಳಗೊಳ್ಳುವಮೌಲ್ಯವನ್ನು ಆಧರಿಸಿದೆ. ಇದು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಸಂವಿಧಾನ ಜನರಆಚಾರ, ವಿಚಾರ, ಸಂಸ್ಕೃತಿ ಆಚರಣೆಗೆಅಡ್ಡಿಪಡಿಸುವುದಿಲ್ಲ ಎಂದು ದಲಿತ ಹಿರಿಯ ಮುಖಂಡ ಚೆಲುವರಾಜು ತಿಳಿಸಿದರು.

ನಗರದ ಜೂನಿಯರ್‌ ಕಾಲೇಜು ರಸ್ತೆಯಅಂಬೇಡ್ಕರ್‌ ವೃತ್ತದಲ್ಲಿ ದಲಿತ ಸಂಘಟನೆಗಳ ಮಹಾಒಕ್ಕೂಟದಿಂದ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣ ದಿನಾಚರಣೆಯಲ್ಲಿ ಮಾತನಾಡಿದಅವರು, ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮುದಾಯಿಕ ಬದುಕಿಗೆ ಧಕ್ಕೆಯಾಗದ ಹಾಗೆ ನಿರ್ವಹಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಎಲ್ಲರಿಗೂ ನೀಡಿದೆ.

ಕಾಲದ ಅಗತ್ಯಕ್ಕೆ ತಕ್ಕಂತೆ ತಿದ್ದುಪಡಿ ಮಾಡಿಕೊಳ್ಳುವ ಅವಕಾಶವನ್ನು ಸಂವಿಧಾನ ಒಳಗೊಂಡಿದೆ. ದೇಶದಪ್ರಜಾಪ್ರಭುತ್ವ ನಿಂತಿರುವುದು ಸಾಂವಿಧಾನಿಕ ಚೌಕಟ್ಟಿನಲ್ಲಿ ಎಂಬುದನ್ನು ಗ್ರಹಿಸಬೇಕಿದೆ ಎಂದರು.

ವರ್ತಮಾನದಲ್ಲಿ ನಮ್ಮ ಸಂವಿಧಾನ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಅವುಗಳಲ್ಲಿ ಬಹಳಮುಖ್ಯವಾದ ಸಮಸ್ಯೆ ಒಟ್ಟು ಪ್ರಜಾಪ್ರಭುತ್ವವನ್ನುಚುನಾವಣೆಗಳಿಗೆ, ರಾಜಕೀಯ ಪಕ್ಷಗಳ ಚಟುವಟಿಗಳಿಗೆ ಸೀಮಿತಗೊಳಿಸಿ ವಿಶ್ಲೇಷಿಸುತ್ತಿರುವುದು ಬಹಳಅಪಾಯಕಾರಿ ಬೆಳೆವಣಿಗೆ. ಸಂವಿಧಾನದ ಮೂಲಕಲಭಿಸಿರುವ ಪ್ರಜಾಪ್ರಭುತ್ವ ವ್ಯಕ್ತಿ, ಪಕ್ಷ, ಧರ್ಮ, ಜಾತಿಎಲ್ಲವನ್ನೂ ಮೀರಿದ ಮೌಲ್ಯವಾಗಿದೆ ಎಂಬ ಅರಿವು ಯುವ ತಲೆಮಾರಿಗೆ ದಾಟಿಸುವ ಕೆಲಸವನ್ನು ವಿಶ್ವವಿದ್ಯಾಲಯಗಳು ಮಾಡಬೇಕು ಎಂದರು.

ಧಾರ್ಮಿಕ ತಾರತಮ್ಯ: ಹಿರಿಯ ದಲಿತ ಮುಖಂಡ ಶಿವಶಂಕರ್‌ ಮಾತನಾಡಿ, ಜಗತ್ತಿನ ಯಾವ ದೇಶದಸಂವಿಧಾನ ಕತೃìಗಳು ಎದುರಿಸದ ಒಂದುಸಮಸ್ಯೆಯನ್ನು ನಮ್ಮ ದೇಶದ ಸಂವಿಧಾನರಚನಾಕಾರರು ಎದುರಿಸಿದರು. ಇಲ್ಲಿನ ಜಾತಿ,ಲಿಂಗಾಧಾರಿತ ಮತ್ತು ಧಾರ್ಮಿಕ ತಾರತಮ್ಯವನ್ನು ಕಾನೂನಿನ ಮೂಲಕ ಮೀರುವ ಸವಾಲು ಇವುಗಳನ್ನು ನಿವಾರಿಸಿ ಸಮಾನತೆ ಮತ್ತು ಸಹೋದರತ್ವ ಸ್ಥಾಪಿಸದ ಹೊರತು ನಾವು ಒಂದು ದೇಶವಾಗಿ ಯಶಸ್ವಿ

ಯಾಗಲು ಸಾಧ್ಯವಿಲ್ಲ ಎಂಬ ಅರಿವು ಡಾ. ಅಂಬೇಡ್ಕರ್‌ ಅವರಿಗೆ ಸ್ಪಷ್ಟವಾಗಿ ಇತ್ತು. ಆ ಕಾರಣಕ್ಕೆ ಭಾರತ ಸಂವಿಧಾನ ಮಹಿಳೆ, ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಎಲ್ಲಾ ಸಮುದಾಯ ಗಳನ್ನು ಒಳಗೊಳ್ಳುವ ಒಂದು ಕಾರ್ಯಸೂಚಿ ಯಾಗಿದೆ ಎಂದರು.

ಸಂವಿಧಾನ ಬದಲಾವಣೆ ಹುನ್ನಾರ: ದಲಿತ ಸಂಘಟನೆಗಳ ಮಹಾಒಕ್ಕೂಟ ಅಧ್ಯಕ್ಷ ಎಂ. ಜಗದೀಶ್‌ ಮಾತನಾಡಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಬೇಕಾದರೆ ನಮ್ಮ ಸಂವಿಧಾನವೇ ಕಾರಣ.ಸ್ವಾತಂತ್ರ್ಯ ಸಮಾನತೆ ಹಾಗೂ ಭ್ರಾತೃತ್ವದ ತತ್ವಗಳು ಅನುಮಾನಾಸ್ಪದವಾಗಿ ಕಾಡುತ್ತಿವೆ. ಇಂದಿಗೂ ಸಂವಿಧಾನದ ಆಶಯ ಅನುಷ್ಠಾನಗೊಳಿಸದೆ, ಬದಲಾವಣೆಯ ಹುನ್ನಾರದ ಮಾತುಕೇಳುತ್ತಿದ್ದೇವೆ. ಇದು ಅಪಾಯಕಾರಿ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.

ಶಿವಪ್ರಕಾಶ್‌, ಜಿಲ್ಲಾ ಜಾಗೃತಿ ಉಪ ಸಮಿತಿ ಸದಸ್ಯಗುಡ್ಡೆ ವೆಂಕಟೇಶ್‌, ಕೆಪಿಸಿಸಿ ಎಸ್ಸಿ, ಎಸ್ಟಿ ವಿಭಾಗ ಸದಸ್ಯಶಿವಲಿಂಗಯ್ಯ, ಭಾರತೀಯ ಬೌದ್ಧ ಮಹಾ ಸೊಸೈಟಿಯ ಜಿಲ್ಲಾಧ್ಯಕ್ಷ ಚಿಕ್ಕವೆಂಕಟಯ್ಯ, ಯುವಮುಖಂಡ ಗೋಪಿ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಕೋತ್ತಿಪುರ ಗೋವಿಂದ, ಎಸ್ಸಿ, ಎಸ್ಟಿಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷ ಎಚ್‌.ವೆಂಕಟೇಶ್‌, ಪೌರ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಲಿಂಗರಾಜು,ಸಫಾಯಿ ಕರ್ಮದ ಸಂಘದ ಮಾಜಿ ಅಧ್ಯಕ್ಷದೇವೆಂದ್ರ,ವನವಾಸಿ ಸಂಘದ ಅಧ್ಯಕ್ಷ ರಾಜು,ಮುಖಂಡ ರಮೇಶ್‌, ಡಿಫೋ ವೆಂಕಟೇಶ್‌, ಯುವಉದ್ಯಮಿ ಜನಾರ್ಧನ್‌, ದಲಿತ ಮುಖಂಡ ಬನ್ನಿಕುಪ್ಪೆ ರಮೇಶ್‌, ಆಟೋ ಶಿವರಾಜು, ಲಿಂಗರಾಜು ಗಾಂಧಿನಗರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.