ಸಿಎಂ ಕ್ಷೇತ್ರದಲ್ಲಿ ಚರಂಡಿ ಕಾಮಗಾರಿ ಕಳಪೆ

ಎಚ್ಚರ ತಪ್ಪಿದರೆ ಚರಂಡಿಯೊಳಗೆ ಬೀಳುವ ಪರಿಸ್ಥಿತಿ • ಕೊಳಚೆ ನೀರು ಸಮರ್ಪಕವಾಗಿ ಹರಿಯುತ್ತಿಲ್ಲ

Team Udayavani, Jun 16, 2019, 1:39 PM IST

rn-tdy-1..

ಚನ್ನಪಟ್ಟಣದಲ್ಲಿ ಮೇಲುಹಾಸು ನಿರ್ಮಾಣದ ವೇಳೆ ಸೆಂಟ್ರಿಂಗ್‌ ಬಿಚ್ಚದೇ ಚರಂಡಿ ಕಟ್ಟಿಕೊಂಡಿದೆ.

ಚನ್ನಪಟ್ಟಣ: ಪಟ್ಟಣ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣಕ್ಕಾಗಿ ಎರಡೂ ಬದಿಯಲ್ಲಿ ನಿರ್ಮಾಣ ಮಾಡಿರುವ ಚರಂಡಿ ಕಾಮಗಾರಿ ಕಳಪೆಯಾಗಿದೆ. ಗುಣಮಟ್ಟಕ್ಕೆ ಆದ್ಯತೆ ನೀಡದೆ ಮನಬಂದಂತೆ ಕಾಮಗಾರಿ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿಬರುತ್ತಿದೆ.

ಪಟ್ಟಣದ ಚಿಕ್ಕಮಳೂರು ಬಳಿಯಿಂದ ಷೇರೂ ಹೋಟೆಲ್ ವೃತ್ತದ ವರೆಗೆ ಎರಡೂ ಕಡೆಗಳಲ್ಲಿ ಚರಂಡಿ ನಿರ್ಮಿಸಲಾಗಿದೆ. ಆದರೆ, ಈ ಕಾಮಗಾರಿಗಳಲ್ಲಿ ಗುಣಮಟ್ಟ ತೀರಾ ಕಳಪೆಯಾಗಿದೆ. ಅಲ್ಲಲ್ಲಿ ಚರಂಡಿಗಳಿಗೆ ಮೇಲುಹಾಸುಗಳು ಈಗಾಗಲೇ ಕಿತ್ತುಹೋಗುತ್ತಿದ್ದು, ಇನ್ನೂ ಕೆಲವೆಡೆ ಚರಂಡಿ ಕಾಮಗಾರಿ ಅರ್ಧ ನಡೆಸಿ ಹಾಗೆಯೇ ಬಿಡಲಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ.

ಸಿಮೆಂಟ್ ಕಿತ್ತು ಹೋಗುವ ಸ್ಥಿತಿ: ಚರಂಡಿಗಳ ನಿರ್ಮಾಣ ಸಂದರ್ಭದಲ್ಲಿ ಹಾಕುವ ಕಾಂಕ್ರೀಟ್‌ಗೆ ಸಮರ್ಪಕವಾಗಿ ಕ್ಯೂರಿಂಗ್‌ ಮಾಡದಿರುವುದು ಹಾಗೂ ಕಡಿಮೆ ಪ್ರಮಾಣದ ಸಿಮೆಂಟ್ ಬಳಸಿರುವುದರಿಂದ ಕಾಮಗಾರಿ ಗುಣಮಟ್ಟ ಕಳಪೆಯಾಗಿದೆ ಎನ್ನಲಾಗಿದ್ದು, ವಾಹನಗಳು ಸ್ವಲ್ಪ ತಗುಲಿದರೂ ಸಿಮೆಂಟ್ ಕಿತ್ತುಬರುತ್ತಿದೆ. ಹಾಗೆಯೇ ಮೇಲುಹಾಸುಗಳನ್ನು ಅಲ್ಲಲ್ಲಿ ನಿರ್ಮಾಣ ಮಾಡದೆ ಬಿಡಲಾಗಿದೆ. ಇದು ಹೆದ್ದಾರಿ ಬದಿಯಲ್ಲಿ ಓಡಾಡುವವರಿಗೆ ಅನಾನುಕೂಲ ಸೃಷ್ಟಿಸಿದೆ. ಎಚ್ಚರ ತಪ್ಪಿದರೆ ಚರಂಡಿಯೊಳಗೆ ಬೀಳಬೇಕಾದ ಪರಿಸ್ಥಿತಿ ಎದುರಾಗಿದೆ.

ಕೊಳಚೆ ನೀರು ಹರಿಯುತ್ತಿಲ್ಲ: ಇನ್ನು ಕಾಮಗಾರಿ ನಡೆಸುವವರ ನಿರ್ಲಕ್ಷ್ಯ ಹೇಗಿದೆ ಎಂದರೆ, ಚರಂಡಿಗೆ ಮೇಲುಹಾಸು ನಿರ್ಮಾಣ ಮಾಡುವಾಗ ಆಧಾರಕ್ಕೆ ಹಾಕಿದ್ದ ಸೆಂಟ್ರಿಂಗ್‌ ಮರಗಳನ್ನೂ ಸಹ ತೆಗೆಯದೆ, ಅಡ್ಡಲಾಗಿ ಮರಗಳಿದ್ದರೂ ಮೇಲುಹಾಸು ನಿರ್ಮಾಣ ಮಾಡಲಾಗಿದೆ. ಇದರಿಂದ ಚರಂಡಿಯಲ್ಲಿ ಕೊಳಚೆ ನೀರು ಸಮರ್ಪಕವಾಗಿ ಹರಿಯಲಾದೆ ಅಲ್ಲೇ ನಿಂತು ಕೊಳೆಯುತ್ತಿದೆ. ಪ್ಲಾಸ್ಟಿಕ್‌ ಸೇರಿದಂತೆ ಹಲವು ವಸ್ತುಗಳು ಅಡ್ಡಲಾಗಿ ಹೊಸ ಚರಂಡಿಗಳು ಈಗಾಗಲೇ ಕಟ್ಟಿಕೊಂಡು, ಗಬ್ಬುನಾಥ ಬೀರುತ್ತಿವೆ. ಇದರಿಂದ ವ್ಯಾಪಾರಿಗಳು ಹಾಗೂ ಗ್ರಾಹಕರು ವಾಸನೆ ಸಹಿಸಿಕೊಂಡೇ ವ್ಯವಹಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಯಾಮಾರಿದ್ರೆ ಅಪಾಯ: ಹೆದ್ದಾರಿ ಬದಿಯಲ್ಲಿ ಇರುವ ಈ ಚರಂಡಿಗಳು ಅಲ್ಲಲ್ಲಿ ಬಾಯ್ತೆರೆದು ಕುಳಿತಿದ್ದು, ನಡೆದುಹೋಗುವಾಗ ಎಚ್ಚರ ತಪ್ಪಿದರೆ ಚರಂಡಿಯೊಳಗೆ ಬಿದ್ದು ಕೈಕಾಲು ಮುರಿದುಕೊಳ್ಳುವ ಅಪಾಯವಿದೆ. ಕೆಲವೆಡೆ ಕಬ್ಬಿಣದ ಕಂಬಿಗಳು ಸಹ ತೆರೆದ ಕಡೆಗಳಲ್ಲಿ ಇಣುಕುತ್ತಿದ್ದು, ಅಕಸ್ಮಿಕವಾಗಿ ಕಾಲಿಗೆ ತಗುಲಿದರೂ ಅಪಾಯ ಎದುರಾಗುವ ಸಂಭವ ಹೆಚ್ಚಾಗಿದೆ. ಅದನ್ನು ಮುಚ್ಚುವ ಕೆಲಸಕ್ಕೆ ಗುತ್ತಿಗೆದಾರರು ಹೋಗಿಲ್ಲ, ಈಗಾಗಲೇ ಟಿಎಪಿಸಿಎಂಎಸ್‌ ಕಾಂಪ್ಲೆಕ್ಸ್‌ ಎದುರಿಗಿರುವ ಇಂಥಹುದೇ ಮೇಲುಹಾಸು ಇಲ್ಲದೇ ಚರಂಡಿಗೆ ಬಿದ್ದ ಉದಾಹರಣೆಯೂ ಕಣ್ಣಮುಂದಿದೆ.

ಅಲ್ಲಲ್ಲಿ ಮೇಲುಹಾಸಿನ ಮೇಲೆ ಟೈಲ್ಸ್ ಅಳವಡಿಸುವ ಕೆಲಸವಾಗಿದ್ದು, ಆ ಟೈಲ್ಸ್ ಹಾಕುವಾಗಲೂ ಬೇಕಾಬಿಟ್ಟಿ ಕಾಮಗಾರಿ ನಡೆಸಲಾಗಿದೆ. ಅದಕ್ಕೂ ಕ್ಯೂರಿಂಗ್‌ ಮಾಡದಿರುವುದರಿಂದ ಆಗಲೇ ಕಿತ್ತುಬರುವ ಸ್ಥಿತಿಗೆ ತಲುಪಿವೆ. ಇನ್ನು ಕೆಲವೆಡೆ ಟೈಲ್ಸ್ ಹಾಕಿರುವ ಮೇಲೆಯೇ ಕೆಲ ಅಂಗಡಿಗಳ ಮಾಲೀಕರು ತಮ್ಮ ಮಾರಾಟದ ವಸ್ತುಗಳನ್ನಿಟ್ಟು ಪಾದಚಾರಿಗಳಿಗೆ ಓಡಾಡದಂತೆ ಮಾಡಿದ್ದಾರೆ.

ಬೇಕಾಬಿಟ್ಟಿ ಡಾಂಬರು: ಇನ್ನು ಹೆದ್ದಾರಿ ವಿಸ್ತರಣೆ ಮಾಡಿ, ಡಾಂಬರು ಹಾಕುವ ವಿಚಾರದಲ್ಲಿಯೂ ನಿಯಮಗಳನ್ನು ಗಾಳಿಗೆ ತೂರಿಹೋಗಿವೆ. ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿಗಳು ತಾಲೂಕಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಕಡೆಗಳೆಲ್ಲ ಡಾಂಬರು ಹಾಕುವ ಕೆಲಸಕ್ಕೆ ಗುತ್ತಿಗೆದಾರರು ಚಾಲನೆ ನೀಡಿದ್ದಾರೆ. ರಾತ್ರೋರಾತ್ರಿ ಇಷ್ಟಬಂದಂತೆ ಡಾಂಬರು ಹಾಕುವ ಕೆಲಸ ನಡೆಯುತ್ತಿದೆ. ಯಾವ ಪ್ರಮಾಣದಲ್ಲಿ ವಸ್ತುಗಳನ್ನು ಹಾಕಬೇಕೋ ಅದೆಲ್ಲಾ ಆಗುತ್ತಿಲ್ಲ. ತರಾತುರಿಯಲ್ಲಿ ಡಾಂಬರು ಹಾಕಲಾಗುತ್ತಿದೆ. ಅಧಿಕಾರಿಗಳು ಗುಣಮಟ್ಟ ಪರಿಶೀಲನೆ ಮಾಡುವ ಗೋಜಿಗೆ ಹೋಗುತ್ತಿಲ್ಲ. ಹೀಗಾಗಿ ಈ ಡಾಂಬರು ಆರು ತಿಂಗಳಲ್ಲೇ ಕಿತ್ತುಹೋಗುವುದು ಮಾತ್ರ ನಿಶ್ಚಿತವಾಗಿದೆ.

ಸಿಎಂ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿಗಳ ದಿಕ್ಕುತಪ್ಪಿಸಲು ಮನಬಂದಂತೆ ಕಾಮಗಾರಿಗಳನ್ನು ನಡೆಸುತ್ತಿರುವ ಗುತ್ತಿಗೆದಾರರು, ಅದನ್ನು ಪರಿಶೀಲಿಸದೇ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಗಮನಕ್ಕೆ ಇದು ಬಂದು, ಕ್ರಮಕ್ಕೆ ಮುಂದಾಗುವರೇ ಎಂಬುದನ್ನು ಕಾದುನೋಡಬೇಕಿದೆ.

● ಎಂ.ಶಿವಮಾದು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.