ಕಾವೇರಿ ನಿರ್ವಹಣೆ ಪ್ರಾಧಿಕಾರದ ಆದೇಶ ಅವೈಜ್ಞಾನಿಕ


Team Udayavani, Jun 1, 2019, 11:13 AM IST

ramanagr-tdy-2

ಕನಕಪುರ: ರಾಜ್ಯದ ಕೃಷ್ಣರಾಜ ಅಣೆಕಟ್ಟೆಯಿಂದ ತಮಿಳುನಾಡಿಗೆ 9.19 ಟಿಎಂಸಿ. ನೀರನ್ನು ಹರಿಸುವಂತೆ ನೀಡಿರುವ ಆದೇಶ ಅಸಮಂಜಸ ಹಾಗೂ ಅವೈಜ್ಞಾನಿಕ. ಈ ಆದೇಶವನ್ನು ರಾಜ್ಯ ರೈತಸಂಘ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ತೀವ್ರವಾಗಿ ವಿರೋಧಿಸಿದವು. ಅಲ್ಲದೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಾಲೂಕು ಕಚೇರಿಯ ಮುಂಭಾಗದಲ್ಲಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶದ ವಿರುದ್ಧ ಧಿಕ್ಕಾರ ಕೂಗುತ್ತ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಚೀಲೂರು ಮುನಿರಾಜು ರಾಜ್ಯ ಕಳೆದ ವರ್ಷವೂ ತೀವ್ರವಾದ ಬರಗಾಲ ಎದುರಿಸಿದೆ. ನಮ್ಮ ರಾಜ್ಯದ ಅಣೆಕಟ್ಟೆಗಳಲ್ಲಿ ಕುಡಿಯುವ ನೀರಿಗಷ್ಟೇ ಲಭ್ಯವಿರುವ ನೀರನ್ನು ತಮಿಳುನಾಡಿಗೆ ಬಿಡುವಂತೆ ಮಾಡುವ ಆದೇಶ ತಾರತಮ್ಯದ್ದಾಗಿದೆ ಎಂದರು.

ರಾಜಕೀಯ ಪ್ರೇರಿತ: ಪ್ರತಿ ವರ್ಷ ತಮಿಳುನಾಡು ಮೆಟ್ಟೂರು ಅಣೆಕಟ್ಟೆಯಲ್ಲಿ ಸುಮಾರು 18 ಟಿಎಂಸಿ ನೀರು ಸಂಗ್ರಹವಿದ್ದು, ಅಧಿಕಾರಿಗಳೇ ಅದನ್ನು ದೃಢಪಡಿಸಿದ್ದಾರೆ. ಸಂಗ್ರಹವಿರುವ ನೀರನ್ನು ಬಳಸುವ ಬದಲು ರಾಜ್ಯದಲ್ಲಿನ ಕುಡಿಯುವ ನೀರನ್ನು ಕಸಿದುಕೊಳ್ಳುವ ತಮಿಳುನಾಡಿನ ತಗಾದೆ ರಾಜಕೀಯ ಪ್ರೇರಿತವಾಗಿದೆ. ಇದನ್ನು ಪರಿಗಣಿಸದ ನಿರ್ವಹಣೆ ಪ್ರಾಧಿಕಾರ ರಾಜ್ಯದ ಕುಡಿಯುವ ನೀರನ್ನು ಕೇಳಿದರೆ, ನೀಡಲು ಸಾಧ್ಯವಿಲ್ಲ ಎಂದರು.

ಹೋರಾಟ ಅನಿವಾರ್ಯ: ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಗಿರಿಯಪ್ಪ ಮಾತನಾಡಿ, ಪ್ರತಿ ಬಾರಿಯೂ ಇಂತಹದ್ದೇ ಸನ್ನಿವೇಶ‌ವನ್ನು ಎದುರಿಸುತ್ತಿರುವ ರಾಜ್ಯ, ತಮಿಳುನಾಡಿನ ತಗಾದೆಯನ್ನು ತಡೆಯುವ ಪ್ರಯತ್ನ ಮಾಡಿಲ್ಲ. ಅದಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಾಗಿಲ್ಲ. ಇದಕ್ಕೆ ಪರ್ಯಾಯ ಮಾರ್ಗವನ್ನು ಕಂಡುಕೊಂಡಿಲ್ಲ. ರಾಜ್ಯದ ಜನತೆ ಕುಡಿಯುವ ನೀರಿನ್ನು ಕೇಳಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಆದೇಶ ಹಿಂಪಡೆಯಿರಿ: ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್‌ ಮಾತನಾಡಿ, ರಾಜ್ಯದಲ್ಲಿರುವ 28 ಮಂದಿ ಲೋಕಸಭೆ ಸದಸ್ಯರು ತಮ್ಮ ವೈಮನಸ್ಸನ್ನು ಮರೆತು ರಾಜ್ಯದ ಹಿತವನ್ನು ಕಾಪಾಡುವ ಪ್ರಯತ್ನ ಮಾಡಬೇಕು. ಈ ಸಂಬಂಧ ಪ್ರಧಾನಿ ಮೋದಿ ಬಳಿ ಚರ್ಚಿಸಿ, ರಾಜ್ಯದ ಜನತೆಗೆ ಕುಡಿಯುವುದಕ್ಕಾಗಿ ಇರುವ ನೀರನ್ನು ಹರಿಸಲು ಸಾಧ್ಯವಿಲ್ಲ ಎಂದು ಮನವರಿಕೆ ಮಾಡಿಕೊಟ್ಟು ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಹಿತ ಕಾಯಲು ಆಗ್ರಹ: ಕನ್ನಡ ಸೇನೆ ತಾಲೂಕು ಅಧ್ಯಕ್ಷ ಜಯಸಿಂಹ ಮಾತನಾಡಿ, ಚುನಾವಣೆ ಮುಗಿದ ನಂತರ ಫಲಿತಾಂಶ ಬಂದಕೂಡಲೆ ಇಲ್ಲಿನ ಸಂಸದರು ನೋಡಿಕೊಳ್ಳುತ್ತಾರೆ ಎಂಬ ಮಾತನ್ನು ಆಡುವ ಮೂಲಕ ರಾಜ್ಯದ ಮಂತ್ರಿಗಳು ತಮ್ಮ ಜವಾಬ್ದಾರಿ ಮರೆತು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದಾರೆ. ಈಗಾಗಲೇ ಜನ ತಕ್ಕ ಪಾಠ ಕಲಿಸಿದ್ದಾರೆ ಇದನ್ನೇ ಮುಂದುವರಿಸಿದರೆ ಮತ್ತಷ್ಟು ಪಾಠ ಕಲಿಸುತ್ತಾರೆ. ಇವೆಲ್ಲ ಬಿಟ್ಟು ಜವಾಬ್ದಾರಿಯಿಂದ ರಾಜ್ಯ ಜನತೆಯ ಹಿತ ಕಾಯಲು ಬದ್ಧರಾಗಿಬೇಕು ಎಂದು ಆಗ್ರಹಿಸಿದರು. ಈ ಮನವಿಯನ್ನು ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ರೈತರ ಸಂಘದ ತಾಲೂಕು ಅಧ್ಯಕ್ಷ ರಾದ ಶಶಿಕುಮಾರ್‌, ಸ್ವತಂತ್ರ ರಕ್ಷಣಾ ವೇದಿಕೆ ಆಂಗಡಿ ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.