ಒಂಟಿ ಸಲಗ ದಾಂಧಲೆ: ಅಪಾರ ನಷ್ಟ


Team Udayavani, Apr 27, 2022, 3:29 PM IST

ಒಂಟಿ ಸಲಗ ದಾಂಧಲೆ: ಅಪಾರ ನಷ್ಟ

ಚನ್ನಪಟ್ಟಣ: ಪಟ್ಟಣದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆ ಆವರಣಕ್ಕೆ ಸೋಮವಾರ ರಾತ್ರಿ ಒಂಟಿ ಸಲಗ ನುಗ್ಗಿ ದಾಂಧಲೆ ನಡೆಸಿದ್ದು, ಸಿಕ್ಕಸಿಕ್ಕ ಕಡೆ ಓಡಾಡಿ, ಸಿಬ್ಬಂದಿಯನ್ನು ಭಯ ಭೀತರನ್ನಾಗಿಸಿದೆ.

ಮಧ್ಯರಾತ್ರಿ ಸುಮಾರು 1 ಗಂಟೆಯಲ್ಲಿ ಆವರಣದೊಳಗೆ ಪವೇಶಿಸಿದ ಆನೆ, 3 ತೆಂಗಿನ ಮರ, ಹಲಸಿನ ಮರವನ್ನು ನಾಶಮಾಡಿದೆ. ಠಾಣೆಯ ಪಂಪ್‌ಹೌಸ್‌ಗೆ ಸಂಪರ್ಕ ಕಲ್ಪಿಸಿದ್ದ ವೈರಿಂಗ್‌ ಕಿತ್ತುಹಾಕಿದೆ. ಆವರಣದಲ್ಲಿದ್ದ ಸಿಬ್ಬಂದಿ ಬೈಕ್‌ ಜಖಂಗೊಳಿಸಿದೆ.  ಆನೆಯ ಆಟಾಟೋಪ ನೋಡಿ ಸಿಬ್ಬಂದಿ ಕಂಗಾಲಾಗಿದ್ದಾರೆ.

ಎಚ್ಚೆತ್ತುಕೊಂಡ ಸಿಬ್ಬಂದಿ: ಠಾಣೆಯ ಸುತ್ತಲೂ ಇರುವ ಕಾಂಪೌಂಡ್‌ ಗೋಡೆ ಒಂದು ಭಾಗ ಕುಸಿದು 10 ವರ್ಷ ಕಳೆದರೂ, ಹೊಸದಾಗಿ ಕಾಂಪೌಂಡ್‌ ನಿರ್ಮಿಸದ ಕಾರಣ ಆನೆ ಸರಾಗ ವಾಗಿ ಆವರಣಕ್ಕೆ ಬಂದಿದೆ. ಚಿಕ್ಕ ಮಣ್ಣು ಗುಡ್ಡೆ ಅರಣ್ಯ ಪ್ರದೇಶದಿಂದ ಆನೆ ಆಗಮಿಸಿರ ಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಅಗ್ನಿಶಾಮಕ ಠಾಣೆ ಹೊಂದಿ ಕೊಂಡಿದ್ದು, ಆನೆ ಹೆದ್ದಾರಿ ಕಡೆಗೆ ಆಗಮಿಸಿದ್ದರೆ ಇನ್ನಷ್ಟು ಅನಾಹುತ ಗಳು ಸಂಭ ವಿಸುತ್ತಿತ್ತು. ಹಾಗೆಯೇ ಠಾಣೆ ಪಕ್ಕದಲ್ಲೇ ಪೊಲೀಸ್‌ ತರಬೇತಿ ಶಾಲೆ ಸಹ ಇದ್ದು, ತರಬೇತಿ ಶಾಲೆ ಮೂಲಕವೇ ಅಗ್ನಿಶಾಮಕ ಠಾಣೆ ಕಡೆಗೆ ಆನೆ ಆಗಮಿಸಿದೆ. ಆದರೆ, ವಸತಿಗೃಹಗಳ ಕಡೆಗೆ ಆನೆ ಹೋಗದಿರು ವುದು ಆಗಬಹುದಾದ ಅನಾಹುತ ತಪ್ಪಿದೆ.

ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡ ಪರಿ ಣಾಮ ಗದ್ದಲಕ್ಕೆ ಆನೆ ವಾಪಸ್‌ ಕಾಡಿನತ್ತ ಹೆಜ್ಜೆ ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತರ ಬೆಳೆ ನಾಶ: ತಾಲೂಕಿನ ಸಿದ್ದೇಗೌಡನ ದೊಡ್ಡಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ, ರೈತರ ಬೆಳೆ ನಾಶ ಮಾಡಿವೆ. ರೈತರ ತೆಂಗು, ಜೋಳ, ಮಾವು ಹಾಗೂ ಸಪೋಟ ಬೆಳೆಯನ್ನು ಆನೆಗಳು ಹಾನಿಮಾಡಿವೆ. ಮಾವು ಫಸಲಿನ ಸಮಯದಲ್ಲಿ ದಾಳಿಯಿಂದಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಇನ್ನು ಪ್ರಮುಖವಾಗಿ ಬೇಬಿಕಾರ್ನ್ ಬೆಳೆಯನ್ನು ಆನೆಗಳು ತುಳಿದುಹಾಕಿವೆ.

ಅರಣ್ಯ ಇಲಾಖೆ ಆನೆಗಳ ದಾಳಿಯಿಂದ ಹಾನಿಯಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಹಾಗೆಯೇ ಆನೆಗಳು ಮರಳಿ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.