ಇಲಿ, ಹೆಗ್ಗಣಗಳ ಪಾಲಾದ ಕಾರ್ಮಿಕರ ಆಹಾರ ಕಿಟ್‌


Team Udayavani, Jun 8, 2021, 10:57 AM IST

ಇಲಿ, ಹೆಗಣಗಳ ಪಾಲಾದ ಕಾರ್ಮಿಕರ ಆಹಾರ ಕಿಟ್‌

ಕನಕಪುರ: ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಕಟ್ಟಡ ಕೂಲಿ ಕಾರ್ಮಿಕರ ಹೊಟ್ಟೆ ತುಂಬಿಸಬೇಕಿದ್ದ ಕಾರ್ಮಿಕ ಇಲಾಖೆಯ ಆಹಾರ ಕಿಟ್‌ಗಳು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಹಾಳಾಗಿದ್ದು, ಇಲಿ, ಹೆಗ್ಗಣಗಳ ಪಾಲಾಗಿವೆ.

ರಾಮನಗರ ವಿಧಾನಸಭಾ ಕ್ಷೇತ್ರದ ತಾಲೂಕಿನ ಹಾರೋಹಳ್ಳಿ ಹೋಬಳಿಯ ದ್ಯಾವಸಂದ್ರ ಗ್ರಾಪಂ ವ್ಯಾಪ್ತಿಯ ಕಟ್ಟಡ ಕೂಲಿ ಕಾರ್ಮಿಕರಿಗೆ ವಿತರಣೆ ಮಾಡಲು ಹಾಲಿನ ಡೇರಿಯಲ್ಲಿ ಕಳೆದ ಒಂದು ವರ್ಷದಿಂದ ಆಹಾರ ಕಿಟ್‌ ಶೇಖರಣೆ ಮಾಡಲಾಗಿತ್ತು. ಆದರೆ, ಕಾರ್ಮಿಕ ಇಲಾಖೆಯ ಆಹಾರ ಕಿಟ್‌ಗಳ ವಾಯಿದೆ ಮುಗಿದು ಅಕ್ಕಿ, ಬೇಳೆ, ರವೆ ಸೇರಿದಂತೆ ಆಹಾರ ಪದಾರ್ಥಗಳು ಹಾಳಾಗಿದ್ದು, ದಿನನಿತ್ಯ ಇಲಿ, ಹೆಗ್ಗಣಗಳಿಗೆ ಆಹಾರವಾಗುತ್ತಿದೆ.

ಕೆಲಸವಿಲ್ಲದೆ ಕಾರ್ಮಿಕರು ಅತಂತ್ರ: ಕಳೆದ ಒಂದುವರ್ಷದ ಹಿಂದೆ ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದ ಕಟ್ಟಡ, ಇತರೆ ಕೂಲಿ ಕಾರ್ಮಿಕರಿಗೆ ಸರ್ಕಾರ ಕಾರ್ಮಿಕ ಇಲಾಖೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕ ಕಲ್ಯಾಣ ಮಂಡಳಿಗೆ ರಾಜ್ಯದ ಪ್ರತಿ ತಾಲೂಕಿನ ಕ್ಷೇತ್ರದ ಶಾಸಕರಿಗೆ 5000 ಆಹಾರ ಕಿಟ್‌ಗಳನ್ನು ವಿತರಣೆ ಮಾಡಿತ್ತು. ಕಾರ್ಮಿಕ ಇಲಾಖೆಯಿಂದ ಅರ್ಹರ ಪಟ್ಟಿ ನೀಡಿ, ವಿತರಣೆ ಜವಾಬ್ದಾರಿಯನ್ನು ಸ್ಥಳೀಯ ಶಾಸಕರಿಗೆ ನೀಡಲಾಗಿತ್ತು. ಆದರೆ, ಜನಪ್ರತಿನಿಧಿಗಳ ಬೇಜವಾಬ್ದಾರಿ, ಇಚ್ಛಾಶಕ್ತಿ ಕೊರತೆಯಿಂದ ಹಸಿದ ಹೊಟ್ಟೆ ತುಂಬಿಸಬೇಕಿದ್ದ ಆಹಾರ ಕಿಟ್‌ಗಳು ಹಾಲಿನ ಡೇರಿ ಕಟ್ಟಡದಲ್ಲಿ ಕೊಳೆಯುತ್ತ ಬಿದ್ದಿವೆ.

ಕ್ಷೇತ್ರದ ಶಾಸಕರಿಗೆ ನಂಬಿಕೆ ದ್ರೋಹ: ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ, ಮರಳವಾಡಿ ಹೋಬಳಿಗಳಲ್ಲಿ ಕಳೆದ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಬೇಕಾದ ಸ್ಥಳೀಯ ಶಾಸಕರು, ನಾಲ್ಕು ತಿಂಗಳು ಕ್ಷೇತ್ರದತ್ತ ತಲೆ ಹಾಕದೆ, ಆಹಾರ ಕಿಟ್‌ಗಳ ವಿತರಣೆ ಹೊಣೆಯನ್ನು ಸ್ಥಳೀಯ ಮುಖಂಡರಿಗೆ ವಹಿಸಿದ್ದರು. ಆದರೆ, ಸ್ಥಳೀಯ ಮುಖಂಡರು ಕಟ್ಟಡ, ಕೂಲಿ ಕಾರ್ಮಿಕರಿಗೆ ವಿತರಣೆ ಮಾಡಬೇಕಿದ್ದ ಕಿಟ್‌ಗಳನ್ನು ಕಾರ್ಮಿಕ ಇಲಾಖೆ ನೀಡಿದ್ದ ಪಟ್ಟಿ ಆಧಾರದ ಮೇಲೆ ವಿತರಣೆ ಮಾಡದೆ ದ್ಯಾವಸಂದ್ರ ಗ್ರಾಮದ ಹಾಲಿನ ಡೇರಿ ಕಟ್ಟಡದಲ್ಲಿ ಸುಮಾರು 200ಕ್ಕೂ ಹೆಚ್ಚು ಕಿಟ್‌ಗಳನ್ನು ಶೇಖರಣೆ ಮಾಡಿ, ಜನರಿಗೆ ನೀಡದೆ ವಾಯಿದೆ ಮುಗಿದು ಹುಳ ಬಿದ್ದು, ಮುಖಂಡರು ಸ್ಥಳೀಯ ಶಾಸಕರಿಗೆ ನಂಬಿಕೆ ದ್ರೋಹ ಮಾಡಿದ್ದಾರೆ.

ಶಾಸಕರು ಗಮನ ಹರಿಸಿಲ್ಲ: ಸರ್ಕಾರದ ಉದ್ದೇಶವನ್ನು ಈಡೇರಿಸಬೇಕಾದ ಕ್ಷೇತ್ರದ ಶಾಸಕರು ಬಡವರಿಗೆ ಸರ್ಕಾರದಿಂದ ತಲುಪಬೇಕಾದ ಸೌಲಭ್ಯ ತಲುಪಿದಿಯೇ ಇಲ್ಲವೇ ಎಂದು ಮಾಹಿತಿ ಪಡೆದುಕೊಂಡು, ಲೋಪವಿದ್ದರೆ ಸರಿಪಡಿಸುವ ಕೆಲಸ ಮಾಡಬೇಕಿತ್ತು. ಆದರೆ, ಸ್ಥಳೀಯ ಶಾಸಕರು ಗಮನ ಹರಿಸಲಿಲ್ಲ. ಜೊತೆಗೆ ಅರ್ಹರಿಗೆ ಆಹಾರ ಕಿಟ್‌ ವಿತರಣೆ ವಿಚಾರದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ , ಜನಪ್ರತಿನಿಧಿಗಳ ಸಮ್ಮುಖದಲ್ಲಿ ಹಂಚಿಕೆ ಮಾಡಿಬೇಕಾಗಿತ್ತು. ಆದರೆ, ಜನಪ್ರತಿನಿಧಿಗಳು ಮತ್ತು ಕಾರ್ಮಿಕ ಇಲಾಖೆ ತಾಳಿದ ನಿಲುವಿನಿಂದ ಸರ್ಕಾರದ ಸೌಲಭ್ಯ ಇತ್ತ ಅರ್ಹರಿಗೂ ತಲುಪದೆ, ಅತ್ತ ಸರ್ಕಾರಕ್ಕೂ ನಷ್ಟವಾಗಿ ಮಧ್ಯ ಇಲಿ, ಹೆಗ್ಗಣಗಳಿಗೆ ನೈವೇದ್ಯ ಮಾಡಿದಂತಾಗಿದೆ.

ಗ್ರಾಮಸ್ಥರಿಂದ ಜನಪ್ರತಿನಿಧಿಗಳಿಗೆ ಶಾಪ: ದ್ಯಾವಸಂದ್ರ ಗ್ರಾಮದ ಹಾಲಿನ ಡೇರಿಯಲ್ಲಿ ಕಳೆದ ಒಂದು ವರ್ಷದಿಂದ ಶೇಖರಣೆ ಮಾಡಿರುವ ಆಹಾರ ಕಿಟ್‌ಗಳು ಹಾಳಾಗಿರುವುದನ್ನು ಕಂಡ ಸ್ಥಳೀಯರು, ಯಾರಾದರೂ ಬಡವರಿಗೆ ವಿತರಿಸಿ ಎಂದು ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವೊಬ್ಬ ಜನಪ್ರತಿನಿಧಿಯೂ, ಸ್ಥಳೀಯ ಮುಖಂಡರು ತಲೆಕೆಡಿಸಿಕೊಂಡಿಲ್ಲ ಎಂದು ದ್ಯಾವಸಂದ್ರ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಸರ್ಕಾರದ ಉದ್ದೇಶ ಈಡೇರಿಸಲು ವಿಫ‌ಲ: ಕ್ಷೇತ್ರದ ಶಾಸಕರು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಅದರಲ್ಲೂ ಕೊರೊನಾ ಸಂಕಷ್ಟದಲ್ಲಿದ್ದ ಕಟ್ಟಡ, ಕೂಲಿ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ ನೆರವಾಗಬೇಕಿತ್ತು. ಆದರೆ, ಸರ್ಕಾರದ ಉದ್ದೇಶ ಈಡೇರಿಸುವಲ್ಲಿ ವಿಫ‌ಲರಾಗಿದ್ದಾರೆ. ಸ್ಥಳಿಯ ಮುಖಂಡರು ಕಿಟ್‌ಗಳನ್ನು ತಮ್ಮ ಮನೆಯಲ್ಲಿ ಶೇಖರಣೆ ಮಾಡಿಕೊಂಡು ತಮಗೆ ಬೇಕಾದವರಿಗೆ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಲ್ಲದೆ, ಈ ವಿಚಾರ ಮಾಧ್ಯಮದವರಿಗೆ ತಿಳಿಯುತ್ತಿದ್ದಂತೆ ಸ್ಥಳೀಯ ಮುಖಂಡರು ಡೇರಿ ಕಟ್ಟಡದಲ್ಲಿ ಸಂಗ್ರಹವಾಗಿದ್ದ ಆಹಾರ ಕಿಟ್‌ಗಳನ್ನು ಖಾಲಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಏನೇ ಆದರೂ ಕೊರೊನಾ ಸಂಕಷ್ಟದಲ್ಲಿ ಕಾರ್ಮಿಕರ ಹಿತ ಕಾಯಬೇಕಿದ್ದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿರುವುದು ವಿಪರ್ಯಾಸ.

ವಾಯಿದೆ ಮುಗಿದು ಆಹಾರ ಪದಾರ್ಥಗಳು ಹಾಳು :

ಕೋವಿಡ್ ಸಂಕಷ್ಟದಲ್ಲಿ ಬಡ ಕೂಲಿ ಕಾರ್ಮಿಕರಿಗೆ ನೆರವಾಗಲು ಸರ್ಕಾರ ಆಹಾರ ಕಿಟ್‌ ನೀಡಿತ್ತು. ಆದರೆ, ಅರ್ಹರಿಗೆ ತಲುಪಿಸಬೇಕಾದ ಜನಪ್ರತಿನಿಧಿಗಳು ಕಳೆದ 10 ತಿಂಗಳಿಂದ ಯಾರಿಗೂ ನೀಡದೆ ಹಾಲಿನ ಡೇರಿಯಲ್ಲಿ ಶೇಖರಣೆ ಮಾಡಿದ್ದಾರೆ. ಎಲ್ಲಾ ಪದಾರ್ಥಗಳ ವಾಯಿದೆ ಮುಗಿದು ಹಾಳಾಗಿದೆ. ಯಾರಾದರೂ ಬಡ ಕೂಲಿ ಕಾರ್ಮಿಕರಿಗೆ ವಿತರಣೆ ಮಾಡಿ ಎಂದು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಿಲ್ಲ. ಇಂತಹ ಜನಪ್ರತಿನಿಧಿಗಳಿಂದ ಬಡವರ ಕಲ್ಯಾಣ ಎಂದೂ ಸಾಧ್ಯವಿಲ್ಲ ಎಂದು ಗ್ರಾಮಸ್ಥ ವಿನಯ್‌ ಕುಮಾರ್‌ ಆರೋಪ ಮಾಡಿದ್ದಾರೆ.

ಕಳೆದ ಕೋವಿಡ್ ಲಾಕ್‌ಡೌನ್‌ನಲ್ಲಿ ಕಾರ್ಮಿಕ ಇಲಾಖೆಯಡಿ ಕಟ್ಟಡ, ಇತರೆ ನಿರ್ಮಾಣ ಕಲ್ಯಾಣ ಮಂಡಳಿಗೆ ಪ್ರತಿ ತಾಲೂಕಿನ ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ತಲಾ 5 ಸಾವಿರ ಕಿಟ್‌ ನೀಡಲಾಗಿತ್ತು. ಅರ್ಹರಿಗೆ ತಲುಪಿಸುವ ಹೋಣೆ ಅವರದ್ದೆ ಆಗಿತ್ತು. ಇಲಾಖೆಯಿಂದ ಅರ್ಹರ ಪಟ್ಟಿ ನೀಡಿದ್ದೇವೆ. ನಮಗೂ ಅದಕ್ಕೂ ಸಂಬಂಧವಿಲ್ಲ. – ಶೇಖರ್‌ ಎಸ್‌.ಗಡದ್‌, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ, ರಾಮನಗರ

 

-ಉಮೇಶ್‌.ಬಿ.ಟಿ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.