ರಾಜಕಾರಣಿಗಳಿಗೆ ಸಾಮಾಜಿಕ ಇಚ್ಛಾಶಕ್ತಿ ಅಗತ್ಯ: ಹರ್ಷ

ಅಂಬೇಡ್ಕರರಿಂದ ಅಸಮಾನತೆಯ ಮೀಸಲಾತಿ ವಿರುದ್ಧ ಹೋರಾಟ

Team Udayavani, Sep 1, 2019, 5:29 PM IST

1-September-41

ಸಾಗರ: 'ಅರಸು ನೆನಪು' ಕಾರ್ಯಕ್ರಮದಲ್ಲಿ ಬರಹಗಾರ ಹರ್ಷಕುಮಾರ್‌ ಕುಗ್ವೆ ಮಾತನಾಡಿದರು.

ಸಾಗರ: ರಾಜಕಾರಣಿಗಳಿಗೆ ಸಾಮಾಜಿಕ ಇಚ್ಛಾಶಕ್ತಿ ಇರಬೇಕು. ಇಂತಹ ಇಚ್ಛಾಶಕ್ತಿಯನ್ನು ತಮ್ಮ ಅಧಿಕಾರಾವಧಿಯಲ್ಲಿ ಅಕ್ಷರಶಃ ತೋರಿಸಿಕೊಟ್ಟವರು ದೇವರಾಜ ಅರಸು ಎಂದು ಬರಹಗಾರ ಹರ್ಷಕುಮಾರ್‌ ಕುಗ್ವೆ ತಿಳಿಸಿದರು.

ನಗರದ ಜಂಬಗಾರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಕರ್ನಾಟಕ ಮುನ್ನಡೆ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ‘ಅರಸು ನೆನಪು’ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಇಂದು ಮಾಹಿತಿ ಗುಡ್ಡೆಗಟ್ಟಲೆ ಸಿಗುತ್ತಿದೆ. ಆದರೆ ಜ್ಞಾನ ಸಿಗುತ್ತಿಲ್ಲ. ಆಧುನಿಕ ಸಾಮಾಜಿಕ ಜಾಲತಾಣಗಳು ಅರಸುರಂತಹ ಸಾಮಾಜಿಕ ಹರಿಕಾರರನ್ನು ವಿದ್ಯಾರ್ಥಿ ಯುವಜನರಿಗೆ ತಲುಪಿಸುವಲ್ಲಿ ವಿಫಲವಾಗಿವೆ. ನಮ್ಮ ದೇಶದಲ್ಲಿ ಮೀಸಲಾತಿ ಎರಡು ರೀತಿಯಲ್ಲಿದೆ. ಸಂವಿಧಾನಬದ್ಧವಾಗಿ ಮತ್ತು ಕಳೆದ 2 ಸಾವಿರ ವರ್ಷಗಳಿಂದ ಜಾರಿಯಲ್ಲಿರುವ ಮನುಸ್ಮೃತಿ ಮೂಲಕ ಕೆಲವು ಸಮುದಾಯಕ್ಕೆ ನೀಡಿದ ಮೀಸಲಾತಿ. ತಾರತಮ್ಯವನ್ನು ಹುಟ್ಟುಹಾಕುವಂತಹ ಮೀಸಲಾತಿಯನ್ನು ಮನುಸ್ಮೃತಿ ಮೀಸಲಾತಿ ಪ್ರತಿಪಾದಿಸಿತು. ಅಸಮಾನತೆಯ ಮೀಸಲಾತಿಯ ವಿರುದ್ಧವಾಗಿ ನಮ್ಮ ರಕ್ಷಣೆಗೆ ಬಂದದ್ದು ಅಂಬೇಡ್ಕರ್‌ ರಚಿಸಿದ ಭಾರತದ ಸಂವಿಧಾನ ಎಂದರು.

ಮಹಿಳೆಯರಿಗಾಗಿ, ಅಸ್ಪೃಶ್ಯ ವರ್ಗಗಳಿಗೆ ರಕ್ಷಣೆ ಕೊಡಲು ಸಂವಿಧಾನದ ಅನುಚ್ಛೇದ 15/4 ಮೂಲಕ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದವರು ಅರಸು. ಮೀಸಲಾತಿಯ ಮೂಲ ಉದ್ದೇಶ ಎಲ್ಲ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವುದೇ ಆಗಿದೆ. ಜನಸಂಖ್ಯೆ ಆಧಾರದ ಮೀಸಲಾತಿಗಿಂತ ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರನ್ನು ಗಮನದಲ್ಲಿ ಇರಿಸಿಕೊಂಡು ಮೀಸಲಾತಿ ನೀಡಬೇಕು ಎಂದು ವಾದಿಸಿದ್ದ ಅರಸು ಅವರು 1972ರ ತಮ್ಮ ಅಧಿಕಾರಾವಧಿಯಲ್ಲಿ ಹಾವನೂರು ಆಯೋಗ ನೇಮಕ ಮಾಡಿದ್ದರು ಎಂದು ತಿಳಿಸಿದರು.

ಹಾವನೂರು ಆಯೋಗದ ಆಶಯದಂತೆ ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಾತಿ ಜಾರಿಗೆ ತಂದು ಅವರ ಬದುಕಿನಲ್ಲಿ ಬೆಳಕಾದರು. ಮಂಡಲ್ ವರ್ಷದ ವರದಿ ಜಾರಿಗಾಗಿ ಹೋರಾಟ ಮಾಡಿದ್ದು ದಲಿತ ಸಂಘಟನೆಗಳು. ಮಂಡಲ್ ವರದಿ ಜಾರಿಗೆ ಬಂದರೆ ಹಿಂದುಳಿದ ವರ್ಗಗಳಿಗೆ ಉಪಯೋಗ ಎಂಬುದನ್ನು ಅರಿಯದ ಹಿಂದುಳಿದ ವರ್ಗ ಅದರ ವಿರುದ್ದ ಹೋರಾಟ ಮಾಡುವಂತೆ ಹುನ್ನಾರ ಈ ದೇಶದಲ್ಲಿ ನಡೆಯಿತು. ಸಂವಿಧಾನದ ಎದುರು ಮನುಸ್ಮೃತಿಯನ್ನು ತರುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ವಿದ್ಯಾರ್ಥಿ ಯುವಜನರು ಜಾಗೃತವಾಗಿರಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ ಉದ್ಘಾಟಿಸಿದರು. ಲೇಖಕಿ ವೃಂದಾ ಹೆಗಡೆ ಪ್ರತಿಸ್ಪಂದನೆ ನೀಡಿದರು. ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ, ಶಿವಾನಂದ ಕುಗ್ವೆ, ರತ್ನಾಕರ ಸಿ. ಕಾನುಗೋಡು, ಬಿ.ಸಿ.ಎಂ. ವಿಸ್ತರಣಾಧಿಕಾರಿ ಸಿ.ಲಕ್ಷ್ಮೀನಾರಾಯಣ್‌, ಆರ್‌. ನಾರಾಯಣ್‌ ಮಂಡಗಳಲೆ ಇದ್ದರು. ಭೂಮಿಕಾ ಪ್ರಾರ್ಥಿಸಿದರು. ಲಕ್ಷ್ಮೀನಾರಾಯಣ ಸ್ವಾಗತಿಸಿದರು. ಪರಮೇಶ್ವರ ಕೆ. ಆಲಳ್ಳಿ ವಂದಿಸಿದರು. ಶಂಕರ್‌ ನಿರೂಪಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.