ವಿದ್ಯಾಭ್ಯಾಸಕ್ಕೆ ಕ್ರೀಡೆ ಪೂರಕ

ಹೆಚ್ಚು ಕ್ರೀಡಾ ತರಬೇತಿ ಕೇಂದ್ರಗಳ ಸ್ಥಾಪನೆಯಾಗಲಿ: ಗಾಳಿಪುರ

Team Udayavani, Aug 28, 2019, 12:21 PM IST

28-Agust-19

ಸಾಗರ: ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರ ವ್ಯಾಪ್ತಿಯ ವಲಯ ಮಟ್ಟದ ಕ್ರೀಡಾಕೂಟವನ್ನು ಜಿಪಂ ಸದಸ್ಯ ರಾಜಶೇಖರ ಗಾಳಿಪುರ ಉದ್ಘಾಟಿಸಿದರು.

ಸಾಗರ: ಕ್ರೀಡೆ ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕೂಡ ಆತ್ಮವಿಶ್ವಾಸ ಹೆಚ್ಚಿಸಿ ಅವರ ಶೈಕ್ಷಣಿಕ ಪ್ರಗತಿಗೆ ಕಾರಣವಾದ ಹಲವಾರು ಉದಾಹರಣೆಗಳಿವೆ. ಆಟದಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವುದರ ಜೊತೆಗೆ ವಿದ್ಯಾಭ್ಯಾಸಕ್ಕೂ ಪೂರಕವಾಗುತ್ತದೆ ಎಂಬುದನ್ನು ಪೋಷಕರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಪಂ ಸದಸ್ಯ ರಾಜಶೇಖರ ಗಾಳಿಪುರ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಮ್ಮ ವನಶ್ರೀ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರ ವ್ಯಾಪ್ತಿಯ ವಲಯ ಮಟ್ಟದ ಕ್ರೀಡಾಕೂಟವನ್ನು ಅವರು ಜಾವಲಿನ್‌ ಥ್ರೋ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಟದ ಬಗ್ಗೆ ಇದ್ದ ಹಿಂಜರಿಕೆ ನಿಧಾನವಾಗಿ ಕಡಿಮೆ ಆಗುತ್ತಿದೆ. ಇಂದು ಪೋಷಕರು ಮಕ್ಕಳಿಗೆ ವಿವಿಧ ವೃತ್ತಿಪರ ಆಟಗಳಲ್ಲಿ ಕಠಿಣ ತರಬೇತಿಗಳನ್ನು ಒದಗಿಸಿ ಸಜ್ಜುಗೊಳಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಸಾಗರದಂತಹ ಭಾಗದಲ್ಲಿ ಹೆಚ್ಚು ಹೆಚ್ಚು ಕ್ರೀಡಾ ತರಬೇತಿ ಕೇಂದ್ರಗಳ ಸ್ಥಾಪನೆಯಾದರೆ ಇನ್ನಷ್ಟು ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಪ್ರತಿಪಾದಿಸಿದರು. ಸಾಗರದಲ್ಲಿ ಉತ್ತಮವಾದ ಆ್ಯಥ್ಲೆಟಿಕ್‌ ಕ್ರೀಡಾಂಗಣದ ಕೊರತೆಯಿದೆ. ಮಳೆ ಸುರಿಯುತ್ತಿರುವ ಸಂದರ್ಭದಲ್ಲಿಯೂ ಕ್ರೀಡಾ ಚಟುವಟಿಕೆ ನಡೆಸುವಂತ ವ್ಯವಸ್ಥೆಯನ್ನು ನಾವು ಛಾವಣಿ ಹೊಂದಿರುವ ಕ್ರೀಡಾಂಗಣ ಸ್ಥಾಪಿಸಿದರೆ ಮಲೆನಾಡಿನ ಮಳೆಗಾಲದ ಕ್ರೀಡಾಕೂಟಗಳ ಸಮಸ್ಯೆ ಬಗೆಹರಿಯುತ್ತದೆ. ಈ ನಿಟ್ಟಿನಲ್ಲಿ ತಾಲೂಕಿನ ಆಡಳಿತ ಚಿಂತಿಸಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್‌, ಭಾರತಕ್ಕೆ ಉಜ್ವಲ ಭವಿಷ್ಯವಿದೆ. ಯುವಜನಾಂಗ ನಮ್ಮ ದೇಶದಲ್ಲಿ ಹೆಚ್ಚಿದ್ದು, ಅವರ ಮೇಲೆ ದೊಡ್ಡಮಟ್ಟದ ನಿರೀಕ್ಷೆಯನ್ನು ದೇಶವಾಸಿಗಳು ಇರಿಸಿಕೊಂಡಿದ್ದಾರೆ. ದೇಶವು ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡುವ ಎಲ್ಲ ಅವಕಾಶಗಳಿದ್ದು, ಇಂತಹ ಸ್ಥಳೀಯ ಕ್ರೀಡಾಕೂಟಗಳ ಮೂಲಕ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶನ ಮಾಡಿ ಉನ್ನತ ಮಟ್ಟಕ್ಕೆ ತಲುಪಲು ಅವಕಾಶ ಸಿಗುವ ಸಾಧ್ಯತೆಯೂ ಇರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಎಡಜಿಗಳೇಮನೆ ಗ್ರಾಪಂ ಅಧ್ಯಕ್ಷ ಎಂ.ಡಿ. ರಾಮಚಂದ್ರ, ನಗರಸಭೆ ಸದಸ್ಯರಾದ ಕೆ.ಆರ್‌. ಗಣೇಶಪ್ರಸಾದ್‌, ಡಿ. ತುಕಾರಾಮ, ದೈಹಿಕ ಶಿಕ್ಷಣ ಪರಿವೀಕ್ಷಕ ಉಮಾಪತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗುರುರಾಜ್‌, ಪರಮೇಶ್ವರ ಬರದವಳ್ಳಿ ಇದ್ದರು. ದುರ್ಗಾನಾಯಕ್‌ ಸ್ವಾಗತಿಸಿದರು. ಅಶೋಕ್‌ ವಂದಿಸಿದರು. ಮಂಜಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.