ಕೆರೆ ಹೂಳೆತ್ತಲು ರೈತರ ಒತ್ತಾಯ

ಶರಣೀಕ ಕುಮಾರ ದೋಖಾ, ಭಾರತೀಯ ಜೈನ ಸಂಘಟನೆ ಸದಸ್ಯಸೈದಾಪುರ: ದುಪಲ್ಲಿಯಲ್ಲಿ ಕೆರೆ ಹೂಳೆತ್ತುವುದಕ್ಕೆ ಸಂಬಂಧಿ ಸಿದಂತೆ ಬಿಜೆಎಸ್‌ ಸದಸ್ಯ ಶರಣೀಕ ಕುಮಾರ ದೋಖಾ ಭೇಟಿ ನೀಡಿ ವೀಕ್ಷಿಸಿದರು. 

Team Udayavani, Apr 5, 2019, 5:05 PM IST

5-April-35

ಸೈದಾಪುರ: ಗ್ರಾಮೀಣ ಭಾಗದ ಬಹುತೇಕ ರೈತರು ತಮ್ಮೂರಿನ ಕೆರೆಗಳ ಹೂಳು ತೆಗೆಸುವಂತೆ ಭಾರತೀಯ ಜೈನ ಸಂಘಟನೆಗೆ ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಎಸ್‌ ಕಾರ್ಯಕಾರಣಿ ಸದಸ್ಯ ಶರಣೀಕ ಕುಮಾರ ದೋಖಾ ಹೇಳಿದರು.

ರಾಂಪುರ ಕೆ., ಬಾಲಚೇಡ, ಬದ್ದೇಪಲ್ಲಿ ಹಾಗೂ ದುಪ್ಪಲ್ಲಿ ಕೆರೆಗೆ ಬುಧವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತೀಯ ಜೈನ ಸಂಘಟನೆ ರಾಜ್ಯ ಸರಕಾರ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಕೆರೆ ಹೂಳೆತ್ತುವ ಕಾರ್ಯವನ್ನು ರೈತರು ಮೆಚ್ಚಿಕೊಂಡಿದ್ದಾರೆ. ಕೆರೆ ಹೂಳು ತೆಗೆಯುವ ಯೋಜನೆ ರಾಜ್ಯದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗಿದೆ. ಹೂಳು ತೆಗೆಯುವುದರಿಂದ ಕೆರೆಯಲ್ಲಿ ಹೆಚ್ಚಿನ ನೀರು ಸಂಗ್ರಹದ ಜತೆಗೆ ಭೂಮಿ ಅಂತರ್ಜಲ ಮಟ್ಟ ಸುಧಾರಣೆಯಾಗಲಿದೆ. ಹೂಳನ್ನು ರೈತರು ತಮ್ಮ ಹೊಲಗದ್ದೆಗಳಿಗೆ ಹಾಕಿಸಿಕೊಂಡು ಮಣ್ಣಿನ
ಫಲವತ್ತತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದನ್ನು ತಿಳಿದ ಗ್ರಾಮೀಣ ಭಾಗದ ಬಹುತೇಕ ರೈತರು ದೂರವಾಣಿ ಕರೆ ಮಾಡುತ್ತಿದ್ದಾರೆ. ಅಲ್ಲದೇ ಪ್ರತ್ಯೇಕವಾಗಿ ಭೇಟಿ ನೀಡಿ ತಮ್ಮೂರಿನ
ಕೆರೆಗಳ ಹೂಳು ತೆಗೆಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಬಸವರಾಜಯ್ಯ ಸ್ವಾಮಿ ಬದ್ದೇಪಲ್ಲಿ, ಚಂದ್ರಶೇಖರ ವಾರದ, ಮಹಿಪಾಲರೆಡ್ಡಿ ದುಪ್ಪಲ್ಲಿ, ಕೈಲಾಸ ಆಸ್ಪಲ್ಲಿ, ಮಹಿಮೂದ್‌ ಬಡಿಗೇರ, ಭೀಮಶಪ್ಪ, ಭೀಮಣ್ಣ, ನರಸೇಗೌಡ, ಯಾಮರೆಡ್ಡಿ ದುಪ್ಪಲ್ಲಿ, ವೆಂಕಟೇಶ, ಹಣಮಂತ, ರವಿ, ಮರೆಪ್ಪ, ಸಾಬಣ್ಣ, ಭೀರಪ್ಪ, ಮಾಳಪ್ಪ, ಭೀಮಶಪ್ಪ, ಖಾಜಾಹುಸೇನ್‌, ಶಂಕ್ರಪ್ಪ, ತಿಪ್ಪಣ್ಣ ಇದ್ದರು.

ಬಿಜೆಎಸ್‌ನವರು ಸರಕಾರದ ಸಂಯುಕ್ತಾಶ್ರದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿರುವುದು ಸಕಾಲವಾಗಿದೆ. ಬೇಸಿಗೆ ಕಾಲದಲ್ಲಿ ರೈತರಿಗೆ ಹೆಚ್ಚಿನ ಕೆಲಸವಿರುವುದಿಲ್ಲ. ಜತೆಗೆ ಹೂಳನ್ನು ತಮ್ಮ ಹೊಲಗದ್ದೆಯಲ್ಲಿ ಹಾಕಿಸುವುದು ತೀರ ಸುಲಭ. ಆಕಸ್ಮಾತ್‌ ಮಳೆ ಬಂದರೆ ಇತ್ತ ಕೆರೆ ಹೂಳು ತೆಗೆಯಲು ಆಗುವುದಿಲ್ಲ. ಅತ್ತ ಹೊಲಕ್ಕೆ
ಹೋಗಲು ರಸ್ತೆಯೂ ಇರುವುದಿಲ್ಲ. ಹೀಗಾಗಿ ರೈತರ ಹಿತಕ್ಕಾಗಿ ಚುನಾವಣೆ ನೀತಿ ಸಂಹಿತೆ ಅಡ್ಡ ತರದೆ ಪಕ್ಷಾತೀತವಾಗಿ ದೇಶದ ಬೆನ್ನಲೆಬು ಆಗಿರುವ ಅನ್ನದಾತನಿಗೆ ಸಹಕಾರ ನೀಡಬೇಕಾಗಿದೆ ಎಂದು ರಾಂಪುರು ಕೆ., ಬಾಲಚೇಡ, ಬದ್ದೇಪಲ್ಲಿ ಹಾಗೂ ದುಪ್ಪಲ್ಲಿ ಗ್ರಾಮಗಳ ರೈತರು ಒತ್ತಾಯಿಸಿದರು.

ನಾವು ಅತ್ಯಂತ ಪಾರದರ್ಶಕವಾಗಿ ಕೆರೆ ಹೂಳೆತ್ತುವ ಕೆಲಸ ಮಾಡುತ್ತಿದ್ದೇವೆ ಇದರಲ್ಲಿ ಯಾರೊಬ್ಬರ ಹಸ್ತಕ್ಷೇಪ ಇರುವುದಿಲ್ಲ. ಕೆರೆ ಹೂಳು ತೆಗೆಯುವ ಹಿಟಾಚಿ, ಜೆಸಿಬಿಯಂತ್ರಗಳ ಬಾಡಿಗೆಯನ್ನು ಬಿಜೆಎಸ್‌ ನೀಡಿದರೆ ಅವುಗಳಿಗೆ ಬೇಕಾದ ಇಂಧನವನ್ನು ರಾಜ್ಯ ಸರಕಾರ ನೀಡುತ್ತದೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ತಮ್ಮ ಜಮೀನುಗಳಿಗೆ ಕೊಂಡೊಯ್ಯುತ್ತಾರೆ. ಇದರಿಂದ ಅಂತರ್ಜಲ ಮಟ್ಟ ಸುಧಾರಣೆ ಜತೆಗೆ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.