ಬತ್ತಿದ ಬಾವಿ-ಬರಿದಾದ ಕೊಳವೆ ಬಾವಿ

ದನಕರುಗಳು ಕಸಾಯಿಖಾನೆಗೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಆಕ್ರೋಶ

Team Udayavani, May 27, 2019, 1:05 PM IST

27-May-19

ಶಹಾಬಾದ: ಗ್ರಾಮದ ಅಂಬೇಡ್ಕರ್‌ ಬಡಾವಣೆಯಲ್ಲಿರುವ ಗಿರಕಿ ಬಾವಿ.

ಶಹಾಬಾದ: ಮಳೆ ಕೊರತೆ, ವಿಪರೀತ ಬಿಸಿಲು, ಬತ್ತಿದ ಹಳ್ಳ, ಕೆರೆಗಳು, ಬರಿದಾದ ಕೊಳವೆ ಬಾವಿ ನೀರಿಗಾಗಿ ನಿತ್ಯ ಪರದಾಡುವ ದುಸ್ಥಿತಿ ತಾಲೂಕಿನಿಂದ ಕೇವಲ ನಾಲ್ಕು ಕಿ.ಮೀ ದೂರದಲ್ಲಿರುವ ತೊನಸಿನಹಳ್ಳಿ (ಎಸ್‌) ಗ್ರಾಮದಲ್ಲಿದೆ.

ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಭುಗಿಲೆದ್ದಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಅಂತರ್ಜಲ ಕುಸಿದ ಪರಿಣಾಮ ಕೊಳವೆ ಬಾವಿಯಲ್ಲಿ ಒಂದು ಕೊಡ ನೀರು ಸಿಗಬೇಕು ಅಂದರೆ ಸುಮಾರು ನಾಲ್ಕು ತಾಸು ಕಾಯುವಂತಾಗಿದೆ. ಇಷ್ಟಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಸುಮಾರು ದಶಕಗಳಿಂದ ಪರದಾಟ: ತೊನಸಿನಹಳ್ಳಿ (ಎಸ್‌) ಗ್ರಾಪಂ ಕೇಂದ್ರ ಸ್ಥಾನ ಹೊಂದಿದೆ. ಆದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಬೇಸಿಗೆ ಬಂದರೆ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತದೆ. ಆದರೂ ಇಲ್ಲಿಯವರೆಗೂ ಯಾರೂ ಕಮ್ರಕೈಗೊಂಡಿಲ್ಲ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ಪ್ರತಿನಿತ್ಯ ಅಲೆಯುವುದು ಸಾಮನ್ಯವಾಗಿದೆ. ಗ್ರಾಮದಲ್ಲಿರುವ ಹಾರ ಬಾವಿ, ಊರಾನ ಬಾವಿ, ಮಠದ ಬಾವಿ ಸೇರಿದಂತೆ ಎಲ್ಲ ಬಾವಿಗಳಲ್ಲಿಯೂ ನೀರು ಬತ್ತಿ ಹೋಗಿದೆ. ಇರುವ ಒಂದೆರಡು ಕೊಳವೆ ಬಾವಿಗಳಲ್ಲಿ ನೀರು ಪಾತಾಳಕ್ಕೆ ಇಳಿದಿವೆ. ಇದರಿಂದ ಹನಿ ನೀರಿಗಾಗಿ ತೀವ್ರ ಸಂಕಷ್ಟ ಎದುರಾಗಿದೆ.

ಕೆಲಸ ಬಿಟ್ಟು ಅಲೆದಾಟ: ಇಲ್ಲಿನ ಗ್ರಾಮಸ್ಥರು ನಿತ್ಯ ದುಡಿಮೆ ಮಾಡಿಯೇ ಜೀವ ಸಾಗಿಸಬೇಕು. ಆದರೆ ಬೇಸಿಗೆ ಬಂದಾಗ ಕೆಲಸ ಬಿಟ್ಟು ನೀರು ತರಲು ಅಲೆದಾಡುವಂತೆ ಆಗಿದೆ. ಇದಕ್ಕೂ ಮುನ್ನ ಗ್ರಾ.ಪಂ.ದಿಂದ 12 ಕಿ.ಮೀ ದೂರವಿರುವ ತೆಗನೂರ ಗ್ರಾಮದ ಹಳ್ಳದಲ್ಲಿ ಕೊಳವೆ ಬಾವಿ ತೋಡಿಸಿ ಅಲ್ಲಿಂದ ಬಾವಿಗೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಅಲ್ಲಿಂದ ನಾವು ಕೊಡಗಳ ಮೂಲಕ ನೀರು ಪಡೆದುಕೊಳ್ಳುತ್ತಿದ್ದೆವು. ಆದರೆ ಅಂತರ್ಜಲ ಕಡಿಮೆಯಾಗಿದ್ದರಿಂದ ನೀರು ಪೂರೈಕೆ ಸರಿಯಾದ ಪ್ರಮಾಣದಲ್ಲಿ ಆಗದಿರುವುದರಿಂದ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಬಂದೊದಗಿದೆ. ದನಕರುಗಳು ನೀರು ಮತ್ತು ಮೇವಿಗಾಗಿ ಅಲೆದಾಡುತ್ತಿವೆ. ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಕುಡಿಯಲು ನೀರು ಸಿಗದ ಪರಿಣಾಮ ದನಕರುಗಳನ್ನು ಸಾಕುವುದಕ್ಕೆ ಆಗುತ್ತಿಲ್ಲ. ಆದ್ದರಿಂದ ಅವುಗಳು ಕಸಾಯಿ ಖಾನೆಗೆ ಹೋಗುವಂತಾಗಿದೆ ಎಂದು ನೊಂದ ರೈತ ವರ್ಗದವರು ಹೇಳುತ್ತಾರೆ.

ಈಡೇರುವುದೇ ಭರವಸೆ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಗೋಳಾ (ಕೆ) ಗ್ರಾಮದ ಕಾಗಿಣಾ ನದಿಯಿಂದ ತೊನಸನಹಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗಾಗಿ ಎಚ್ಕೆಆರ್‌ಡಿಬಿಯಿಂದ ಎರಡು ಕೋಟಿ ರೂ. ಅನುದಾನ ಮಂಜೂರಾತಿಯಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ. ಸದ್ಯದಲ್ಲೇ ಗ್ರಾಮಕ್ಕೆ ನೀರು ಪೂರೈಕೆಯಾಗುತ್ತದೆ. ಗ್ರಾಮಸ್ಥರಲ್ಲಿ ಈ ಕುರಿತು ಯಾವುದೇ ಅನುಮಾನ ಬೇಡ ಎಂದು ಹೇಳಿದ್ದರು. ಅವರು ಭರವಸೆ ನೀಡಿ ಎರಡು ತಿಂಗಳಾದರೂ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ. ಹಿಂದೆ ಭೀಮಾ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಅನುದಾನ ಬಿಡುಗಡೆಯಾಗಿದೆ ಎಂದು ಸುಳ್ಳು ಹೇಳುತ್ತ ಗ್ರಾಮಸ್ಥರಿಗೆ ಯಾಮಾರಿಸಿದ ಹಾಗೆ ಈ ಯೋಜನೆಗೂ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆಯೇ ಎನ್ನುವ ಆತಂಕ ಗ್ರಾಮಸ್ಥರಲ್ಲಿ ಮನೆಮಾಡಿದೆ. ಕಾರಣ ಜನಪ್ರತಿನಿಧಿಗಳು ಹಲವು ದಶಕಗಳಿಂದ ಭರವಸೆ ನೀಡುತ್ತ ಬರುತ್ತಿದ್ದಾರೆಯೇ ಹೊರತು ಇಲ್ಲಿಯವರೆಗೆ ಶಾಶ್ವತ ವ್ಯವಸ್ಥೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ.

ಎಚ್ಕೆಆರ್‌ಡಿಬಿಯ 2 ಕೋಟಿ ರೂ. ಅನುದಾನದಲ್ಲಿ ಶಾಶ್ವತ ಕುಡಿಯುವ ನೀರಿನ ಕಾಮಗಾರಿ ಯಾವಾಗ ಪ್ರಾರಂಭವಾಗುತ್ತದೆ. ಯಾವಾಗ ನೀರು ನಮ್ಮೂರಿಗೆ ಬರುತ್ತದೆ ಎಂದು ಸಾರ್ವಜನಿಕರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಲೋಕಸಭೆ ಚುನಾವಣೆ ನಿಮಿತ್ತ ನೀತಿಸಂಹಿತೆ ಎದುರಾದ ಪರಿಣಾಮ ಕಾಮಗಾರಿ ಪ್ರಾರಂಭವಾಗಿಲ್ಲ. ಅಲ್ಲದೇ ಎಚ್ಕೆಆರ್‌ಡಿಬಿಯ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಗೆ ಇನ್ನೂ 50ಲಕ್ಷ ರೂ. ಕೊರತೆ ಆಗಿರುವುದರಿಂದ ಜಿಲ್ಲಾಧಿಕಾರಿಗಳ ಒಪ್ಪಿಗೆ ಪಡೆಯಲಾಗಿದೆ. ಇನ್ನೇನು ಎರಡು ತಿಂಗಳಿನ ಒಳಗಾಗಿ ಗೋಳಾ (ಕೆ) ಗ್ರಾಮದ ಕಾಗಿಣಾ ನದಿಯಿಂದ ತೊನಸನಹಳ್ಳಿ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ನೂರಕ್ಕೆ ನೂರರಷ್ಟು ಮಾಡೇ ತೀರುತ್ತೇನೆ.
ಬಸವರಾಜ ಮತ್ತಿಮಡು,
ಶಾಸಕರು, ಕಲಬುರಗಿ ಗ್ರಾಮೀಣ ಮತಕ್ಷೇತ್ರ

ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದು, ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೂ ಕೊಳವೆ ಬಾವಿಗಳನ್ನು ಹಾಕಿದರೂ ನೀರು ಸಿಗುತ್ತಿಲ್ಲ. ಗ್ರಾ.ಪಂ.ನಿಂದ ಕೊಳವೆ ಬಾವಿ ತೋಡಿಸಿ ಅಲ್ಲಿಂದ ನೀರು ಪೂರೈಕೆ ಮಾಡುತ್ತಿದ್ದೇವೆ. ಆದರೂ ನೀರಿನ ಸಮಸ್ಯೆಯಿದೆ. ಶಾಸಕರೊಡನೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ. ಎರಡು ತಿಂಗಳಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಜಯಕುಮಾರ ಮಾಣಿಕ್‌,
ಅಧ್ಯಕ್ಷ, ತೊನಸನಹಳ್ಳಿ (ಎಸ್‌)ಗ್ರಾಪಂ

ಗ್ರಾಪಂ ಕೇಂದ್ರ ಸ್ಥಾನ ಹೊಂದಿದ್ದರೂ ಗ್ರಾಮಕ್ಕೆ ಮೂಲ ಸೌಲಭ್ಯ ದೊರಕಿಲ್ಲ. ಅಂತರ್ಜಲ ಮಟ್ಟ ಕುಸಿದಿದೆ. ಬಾವಿಯಲ್ಲಿ ಹೂಳು ತುಂಬಿಕೊಂಡಿರುವುದರಿಂದ ಕಲುಷಿತ ನೀರನ್ನೇ ಕುಡಿಯಬೇಕಾಗಿದೆ. ರಾತ್ರಿ-ಹಗಲು ಎನ್ನದೇ ಅಲ್ಪ ಸ್ವಲ್ಪ ನೀರಿಗಾಗಿ ಚರಿಗೆಯಿಂದ ತುಂಬುವಂಥ ಪರಿಸ್ಥಿತಿ ಬಂದೊದಗಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಕೂಡಲೇ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
ಮಲ್ಲಿಕಾರ್ಜುನ ಗೊಳೇದ, ಗ್ರಾಮಸ್ಥ

ಮಲ್ಲಿನಾಥ ಜಿ.ಪಾಟೀಲ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.