ಕುವೆಂಪು ವಿವಿ ಅಭಿವೃದ್ಧಿಗೆ 1 ಕೋಟಿ
Team Udayavani, Nov 30, 2020, 4:29 PM IST
ಶಿವಮೊಗ್ಗ: ಕುವೆಂಪು ವಿವಿ ಅಭಿವೃದ್ಧಿ ಕಾಮಗಾರಿಗಳಿಗೆ 1 ಕೋಟಿ ರೂ. ತಕ್ಷಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಭಾನುವಾರ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಕಲಾ ಕಾಲೇಜಿನ ದ್ವಾರ ಮತ್ತು ಪುರುಷ ವಿದ್ಯಾರ್ಥಿ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನವನ್ನು ಕೇಳಿದ್ದೀರಿ. ತಕ್ಷಣ 1 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಅದನ್ನು ಅಗತ್ಯ ಕೆಲಸಗಳಿಗೆ ಬಳಸಿಕೊಳ್ಳಿ. ಬಾಕಿ ಹಣ ನೀಡಲು ಬಜೆಟ್ನಲ್ಲಿ ಚರ್ಚಿಸಲಾಗುವುದು ಭರವಸೆ ನೀಡಿದರು.
ಸಹ್ಯಾದ್ರಿ ಕಾಲೇಜು ಜಯಚಾಮರಾಜೇಂದ್ರ ಒಡೆಯರ್ ಅವರಿಂದ ಸ್ಥಾಪಿಸಲ್ಪಟ್ಟು ಮಹಾಕವಿ ಕುವೆಂಪು ಅವರಿಂದ ಸಹ್ಯಾದ್ರಿ ಎಂಬ ಅಭಿದಾನವನ್ನು ಪಡೆದಿದೆ. ಮಲೆನಾಡಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹ್ಯಾದ್ರಿ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜುಗಳು ಅನೇಕ ಗಣ್ಯರನ್ನು ನಾಡಿಗೆ, ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಈ ಭಾಗದ ಶೈಕ್ಷಣಿಕ ಅಗತ್ಯಗಳನ್ನು ಮನಗಂಡು ಅದನ್ನು ಪೂರೈಸುವುದರಲ್ಲಿ ಕುವೆಂಪು ವಿಶ್ವವಿದ್ಯಾಲಯ, ಸಹ್ಯಾದ್ರಿ ಕಾಲೇಜು ನಿರಂತರವಾಗಿ ತೊಡಗಿಕೊಂಡಿದೆ ಎಂದರು.
ಕೋವಿಡ್-19 ಸಂದರ್ಭದಲ್ಲಿಯೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಶಿವಮೊಗ್ಗದ ಸರ್ವಾಂಗೀಣ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ಸೇತುವೆ ನಿರ್ಮಾಣ, ವಿಮಾನ ನಿಲ್ದಾಣ, ರಸ್ತೆ ಕಾಮಗಾರಿ, ನೀರಾವರಿ ಯೋಜನೆಗಳು ಭರದಿಂದ ಸಾಗುತ್ತಿದೆ. ನಗರದ ವಾಹನ ದಟ್ಟಣೆ ತಗ್ಗಿಸಲು 450 ಕೋಟಿ ರೂ. ಹಣದಲ್ಲಿ ಹೊರವರ್ತುಲ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.
ಸೋಗಾನೆಯ ವಿಮಾನ ನಿಲ್ದಾಣ 2022ರ ಆರಂಭದಲ್ಲಿ ಪೂರ್ಣಗೊಳ್ಳಲಿದ್ದು, ವಿಮಾನ ಹಾರಾಟ ಪ್ರಾರಂಭವಾಗಲಿದೆ. 3200 ಮೀಟರ್ ಉದ್ದದ ರನ್ ವೇ ಹೆಚ್ಚಿಸಲಾಗಿದೆ. ಹೊಳೆ ಹನಸವಾಡಿಯಲ್ಲಿ ತುಂಗ ಏತನೀರಾವರಿ ಯೋಜನೆ ಮಾಡಲು ಉದ್ದೇಶಿಸಲಾಗಿದ್ದು, ಇದರಿಂದ 20 ಕೆರೆಗಳು ತುಂಬಿಸುವ ಯೋಜನೆ ಇದಾಗಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ಅಭಿವೃದ್ಧಿ ಸಂಕಲ್ಪ ಮಾಡಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕೊಟ್ಟಿದ್ದಾರೆ. ಶಿಕ್ಷಣಕ್ಕೆ ಆದ್ಯತೆ ಕೊಟ್ಟಂತೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸರಕಾರ ಒಳಾಂಗಣ ಕ್ರೀಡಾಂಗಣ ಸಂಕೀರ್ಣ ನಿರ್ಮಾಣ ಮಾಡಲು 4 ಕೋಟಿ ರೂ. ಮಂಜೂರು ಮಾಡಿದೆ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಆಶಯ ಈಡೇರಿಸುವ ನಿಟ್ಟಿನಲ್ಲಿ ಸೈನ್ಸ್ ಲ್ಯಾಬ್ ಮಂಜೂರಾಗಿದೆ ಎಂದು ತಿಳಿಸಿದರು. ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಮಾತನಾಡಿ, ಕುವೆಂಪು ವಿವಿ ರಾಜ್ಯದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾಗಿದೆ. ಇಲ್ಲಿ ಸಹ್ಯಾದ್ರಿ ಸ್ಕೂಲ್ ಆಫ್ ಎಕನಾಮಿಕ್ಸ್, ಅಂತಾರಾಷ್ಟ್ರೀಯ ಸಂಶೋಧನಾ ಲ್ಯಾಬ್, ಒಳಾಂಗಣ ಕ್ರೀಡಾಂಗಣ, ಐಎಎಸ್, ಐಪಿಎಸ್ ಕೋಚಿಂಗ್ಸೆಂಟರ್, ಹಾಲಿ ಕಟ್ಟಡಗಳ ದುರಸ್ತಿ, ಲ್ಯಾಬ್ಗಳಉನ್ನತೀಕರಣಕ್ಕೆ 28 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಈ ವೇಳೆ ಪರಿಷತ್ ಉಪಸಭಾಪತಿ ಎಸ್. ಎಲ್.ಧರ್ಮೇಗೌಡ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಶಾಸಕ ಆರಗ ಜ್ಞಾನೇಂದ್ರ, ಎಂಎಲ್ಸಿ ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಎಸ್.ಎಲ್ .ಭೋಜೇಗೌಡ, ಡಿ.ಎಸ್.ಅರುಣ್, ಗುರುಮೂರ್ತಿ. ಕೆ.ಎಸ್, ಮೇಯರ್ ಸುವರ್ಣ ಶಂಕರ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಕುಲಸಚಿವ ಎಸ್.ಎಸ್.ಪಾಟೀಲ್, ಪ್ರಾಚಾರ್ಯೆ ಡಾ.ಕೆ.ಆರ್.ಶಶಿರೇಖಾ, ಡಾ.ಎಚ್. ಎಂ.ವಾಗ್ದೇವಿ, ಡಾ.ಕೆ.ಬಿ.ಧನಂಜಯ, ಸಿಂಡಿಕೇಟ್ ಸದಸ್ಯರಾದ ಬಳ್ಳೇಕೆರೆ ಸಂತೋಷ್, ಧರ್ಮಪ್ರಸಾದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.