

Team Udayavani, Jan 30, 2025, 6:03 PM IST
ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಿಶ್ಚಿತ ಈ ಸಂಬಂಧ ಸರ್ಕಾರ ಸುಗ್ರೀವಾಜ್ಞೆಯನ್ನು ನಿಶ್ಚಿತವಾಗಿ ಹೊರಡಿಸಬೇಕು. ಇದಕ್ಕೆ ಕೇಂದ್ರ ಸರ್ಕಾರ ಸಹ ಭಾಗಿಯಾಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗಲೂ ಸಹ ಐಎಂಎ ಹಗರಣ ಆಗಿತ್ತು. ಈಗ ಮೈಕ್ರೋ ಫೈನಾನ್ಸ್ ಹಳ್ಳಿ ಎಲ್ಲಾ ಕಡೆಯಿದೆ. ಇದು ನಿರಂತರವಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ನಾವು ಅಂತ್ಯ ಹಾಡಬೇಕು. ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನನ್ನು ತರಬೇಕಿದೆ ಎಂದರು.
ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸಬೇಕಿದೆ. ದುಬಾರಿ ಬಡ್ಡಿಯಿಂದಾಗಿ ಜನರು ಅವಮಾನ ಸಹಿಸದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲಾ ಆಗಬಾರದು ಅದಕ್ಕಾಗಿ ಆರ್ಬಿಐ ಸಹ ಸಹಮತ ವ್ಯಕ್ತಪಡಿಸಬೇಕು. ಅವರು ಸಹ ಸೂಕ್ತ ಕಾನೂನು ತರಬೇಕು. ಮೈಕ್ರೋ ಫೈನಾನ್ಸ್ ನ ಹಾವಳಿಗೆ ಇತಿಶ್ರೀ ಹಾಡಬೇಕು ಎಂದರು.
ಮೈಕ್ರೋ ಫೈನಾನ್ಸ್ ಹಾವಳಿಯಿಂದ ನೊಂದವರಿಗೆ ಸರ್ಕಾರ ನಿಶ್ವಿತವಾಗಿ ನೆರವು ನೀಡಲಿದೆ. ಇದಕ್ಕೆ ಕೇಂದ್ರ ಸರ್ಕಾರ ನೆರವು ನೀಡಬೇಕು. ಮೈಕ್ರೋ ಫೈನಾನ್ಸ್ ನವರು ಕೋರ್ಟ್ ಗೆ ಹೋಗಿ ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಕೆಲಸ ಆಗಬಾರದು. ಯಾವುದೇ ಶೋಷಣೆ ಇಲ್ಲದಂತಹ ಬಿಗುವಾದ ಕಾನೂನು ಬರಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದರು.
ಕುಂಭಮೇಳ ಕುರಿತು ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಖರ್ಗೆ ಅವರು ಆಚರಣೆಯ ಬಗ್ಗೆ ಹೇಳಿಲ್ಲ. ಕೇಂದ್ರ ಸರ್ಕಾರ ಜನರ ಕಣ್ಣೊರೆಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಡಾಲರ್ ಮುಂದೆ ಭಾರತದ ರೂಪಾಯಿ ಕುಸಿತ ಆಗುತ್ತಿದೆ. ಈ ಅರ್ಥದಲ್ಲಿ ಖರ್ಗೆ ಅವರು ಮಾತನಾಡಿದ್ದಾರೆ. ಆದರೆ ಬಿಜೆಪಿಯವರಿಗೆ ಇದೆಲ್ಲ ಕಾಣುವುದಿಲ್ಲ ಎಂದರು.
ಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಘಟನೆಯ ಸತ್ಯಾಸತ್ಯೆಯನ್ನು ತಿಳಿದುಕೊಂಡು ಸರ್ಕಾರ ನೆರವು ನೀಡಲಿದೆ ಎಂದರು.
MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ
Davanagere: ಹೆಬ್ಬಾಳ್ಕರ್- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್ ಖಾದರ್
Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ
Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು
ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ
Kundapura: ನಿರ್ವಹಣೆಯಿಲ್ಲದೆ ನಿಷ್ಪ್ರಯೋಜಕವಾದ ಗುಂಡೂರು ಅಣೆಕಟ್ಟು
MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ
Udupi: ಖಾಸಗಿ ಫೈನಾನ್ಸ್ ಮಾಲಕ ಕುಸಿದು ಬಿದ್ದು ಸಾ*ವು
Bollywood: ಸೆಟ್ಟೇರುವ ಮುನ್ನವೇ ನಿಂತು ಹೋಗುತ್ತಾ ವೈರಲ್ ಹುಡುಗಿ ಮೊನಾಲಿಸಾಳ ಸಿನಿಮಾ?
Mangaluru: ಪ್ರವಾಸೋದ್ಯಮ: 7,800 ಕೋ.ರೂ. ಹೂಡಿಕೆ
You seem to have an Ad Blocker on.
To continue reading, please turn it off or whitelist Udayavani.