Anandapura: ಸ್ನೇಹಿತನ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
Team Udayavani, Aug 23, 2024, 4:22 PM IST
ಆನಂದಪುರ : ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು (ಆಗಸ್ಟ್ 23) ಬೆಳಗ್ಗೆ ನಡೆದಿದೆ.
ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುತ್ತಾನೆ.
ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆ ಕುಪ್ಪಳಿಗೆ ತೆರಳುವ ಉದ್ದೇಶದಿಂದ ಪ್ರವಾಸಕ್ಕೆಂದು ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಆನಂದಪುರ ಸಮೀಪ ಚಂಪಕ ಸರಸು ಎಂಬ ಉತ್ತಮ ಸ್ಥಳವಿದೆ ನೋಡಿಕೊಂಡು ಬರೋಣ ಎಂಬ ಹಿನ್ನೆಲೆ ಚಂಪಕ ಸರಸುವಿಗೆ ಬಂದ ಕುಶಾಲ್ ಮತ್ತು ತಂಡದವರು ಫೋಟೋಶೂಟ್ ಕೂಡ ಮಾಡಿದ್ದಾರೆ.
ಚಂಪಕ ಸರಸುವಿನಲ್ಲಿ ಕೆಲ ಸ್ಥಳೀಯ ಯುವಕರು ಈಜಾಡುತ್ತಿದ್ದನ್ನು ಕಂಡು ಕುಶಾಲ್ ಕೂಡ ಬಟ್ಟೆ ತೆಗೆದು ಈಜಾಡಲು ಪ್ರಾರಂಭಿಸಿದ್ದಾನೆ, ಆದರೆ ಕೆಲ ಹೊತ್ತಿನಲ್ಲಿ ನೀರಿನಲ್ಲಿ ಮುಳುಗಿದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಸ್ನೇಹಿತರಿಗೆ ಭಯವನ್ನುಂಟುಮಾಡಿದೆ, ತಕ್ಷಣ ಅವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ, ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಹೊರತೆಗೆದಿದ್ದಾರೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.
ಇದನ್ನೂ ಓದಿ: Udupi: ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi ಕ್ಯಾಬಿನೆಟ್ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Bellary; ಜೈಲಿನಲ್ಲಿ ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್, ಹೇಮಂತ್
Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.