Anandapura: ಮಳೆಯಿಂದ ಹಾನಿ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಭೇಟಿ
Team Udayavani, Aug 20, 2024, 8:17 PM IST
ಆನಂದಪುರ: ಸೋಮವಾರ ಸಂಜೆ ಸುರಿದ ಭಾರಿ ಮಳೆಯಿಂದ ನೂರಾರು ಎಕರೆ ಭತ್ತ ನಾಟಿ ಮಾಡಿದಾಗ ಗದ್ದೆಗಳು ಹಾಗೂ ರಸ್ತೆ, ಸೇತುವೆ ಕೊಚ್ಚಿ ಕೊಚ್ಚಿ ಹೋದ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ಆಪ್ತ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ನಂತರ ಮಾತನಾಡಿದ ಅವರು ಸೋಮವಾರ ಸುರಿದ ಅಕಾಲಿಕ ಮಳೆಯಿಂದ ಮುಂಬಾಳು, ಸುಳೂಗೋಡು, ಜೆಡಿಸರ , ತಾವರೆಹಳ್ಳಿ, ಅಡೂರು ಈ ಭಾಗದಲ್ಲಿ ನೂರಾರು ಎಕರೆ ಭತ್ತ ನಾಟಿ ಮಾಡಿದ ಗದ್ದೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು ಭಾರಿ ನಷ್ಟ ಸಂಭವಿಸಿದೆ.
ರೈತರಿಗೆ ಹಾನಿಯಾದ ಬಗ್ಗೆ ತಕ್ಷಣವೇ ಸರ್ಕಾರಕ್ಕೆ ವರದಿ ಸಲ್ಲಿಸಿ ಹಾನಿಗೊಂಡ ಬೆಳೆಗೆ ಪರಿಹಾರ ಕೊಡಿಸುವುದಾಗಿ ತಿಳಿಸಿದರು. ಸಾಗರ ಕ್ಷೇತ್ರದಲ್ಲಿ ಈ ಹಿಂದೆ ಸುರಿದ ಬಾರಿ ಮಳೆಯಿಂದ ನೂರಾರು ಮನೆಗಳು ಕುಸಿದು ಹಾನಿ ಸಂಭವಿಸಿತ್ತು. ಈಗ ಸುರಿದ ಮಳೆಯಿಂದ ರೈತರ ಗದ್ದೆಗಳು ಕೊಚ್ಚಿ ಹೋಗಿ ತುಂಬಾ ನಷ್ಟ ಸಂಭವಿಸಿದೆ. ತಕ್ಷಣವೇ ರೈತರು ದಾಖಲೆಯೊಂದಿಗೆ ಕಂದಾಯ ಇಲಾಖೆಗೆ ಅರ್ಜಿ ನೀಡುವಂತೆ ತಿಳಿಸಿದರು.
ಕೊಚ್ಚಿ ಹೋದ ಸೇತುವೆ ಮತ್ತು ರಸ್ತೆ.
ಆನಂದಪುರ ಸಮೀಪದ ಮುಂಬಾಳು ಹಾಗೂ ಸೂಳಗೊಡು ಭಾಗದಲ್ಲಿನ ಕಿರು ಸೇತುವೆ, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಇದಕ್ಕೆ ತಕ್ಷಣವೇ ತುರ್ತು ವ್ಯವಸ್ಥೆ ಕಲ್ಪಿಸಿ ಕೊಡುವಲ್ಲಿ ಗ್ರಾಮ ಆಡಳಿತ ಮುಂದಾಗಬೇಕು ಎಂದು ತಿಳಿಸಿದರು.
ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಕೃಷಿ ಅಧಿಕಾರಿ ಚಂದ್ರ ಕುಮಾರ್, ತೋಟಗಾರಿಕಾ ಇಲಾಖೆ ಅಧಿಕಾರಿ ಉಲ್ಲಾಸ್, ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಶಿವಣ್ಣ ,ಬೆನಕೇಶ್, ಕಂದಾಯ ಅಧಿಕಾರಿಗಳಾದ ಕವಿರಾಜ್, ಕೀರ್ತಿ, ಗೋವಿಂದ್ ಮೂರ್ತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಜೇಂದ್ರ ಯಾದವ್, ಪಿಡಿಒ ಮಂಜ ನಾಯಕ್ , ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಕಳಸೆ ಚಂದ್ರಪ್ಪ, ಬಗರ್ ಹುಕ್ಕ್ಂ ಸಮಿತಿ ಸದಸ್ಯ ರವಿಕುಮಾರ್ ದಾಸ್ ಕೊಪ್ಪ, ಪಕ್ಷದ ಮುಖಂಡರಾದ ಎನ್, ಉಮೇಶ್, ರಮಾನಂದ್ ಸಾಗರ್, ರೆಹಮತುಲ್ಲಾ, ಸೇರಿದಂತೆ ಪಕ್ಷದ ಅನೇಕ ಮಂದಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.