ವಸತಿ ಬಡಾವಣೆ ಹಕ್ಕು ಪತ್ರ ವಿತರಣೆ


Team Udayavani, Aug 17, 2021, 6:36 PM IST

ವಸತಿ ಬಡಾವಣೆ ಹಕ್ಕು ಪತ್ರ ವಿತರಣೆ

ಶಿವಮೊಗ್ಗ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಅಟಲ್‌ ಬಿಹಾರಿ ವಾಜಪೇಯಿ ವಸತಿ ಬಡಾವಣೆಯ 130 ಅರ್ಹ ನಿವೇಶನದಾರರಿಗೆ ಖಾತಾ ಪತ್ರಗಳನ್ನು ವಿತರಿಸಲಾಯಿತು.

ವಿನೋಬನಗರ ಪೊಲೀಸ್‌ ಚೌಕಿಯ ವಿಪ್ರ ಸಭಾಂಗಣದಲ್ಲಿ ಭಾನುವಾರ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಏರ್ಪಡಿಸಿದ್ದ ಜಿಲ್ಲಾ
ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಖಾತಾ ಪತ್ರ ವಿತರಿಸಿದರು.

ಮಲ್ಲಿಗೇನಹಳ್ಳಿಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ಬಡಾವಣೆಯಲ್ಲಿ 360 ಫಲಾನುಭವಿಗಳಿದ್ದು ಅದರಲ್ಲಿ ಕ್ರಮಬದ್ಧವಾದ 130 ನಿವೇಶನದಾರರಿಗೆ ಖಾತಾ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಈಶ್ವರಪ್ಪ ಅವರು ಮಾತನಾಡಿ, ಸ್ಥಳೀಯ ಚುನಾಯಿತ ಪ್ರತಿನಿಗಳು ಹಾಗೂ ಸೂಡಾ ಅಧ್ಯಕ್ಷರ ಅವಿರತ ಶ್ರಮದಿಂದ ಸಮಸ್ಯೆಗಳನ್ನು ತೊಡೆದು ಹಾಕಿ ಖಾತಾ ಪತ್ರಗಳನ್ನು ವಿತರಿಸುತ್ತಿರುವುದು ಹರ್ಷದ ಸಂಗತಿಯಾಗಿದೆ.

ಅನೇಕ ವರ್ಷಗಳಿಂದ ನಿವೇಶನಕ್ಕಾಗಿ ಕಾದಿದ್ದು, ಈಗ ನಿವೇಶನ ಪಡೆಯುತ್ತಿರುವ ಫಲಾನುಭವಿಗಳು ತ್ವರಿತಗತಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ನೆಮ್ಮದಿಯ ಜೀವನ ಕಳೆಯುವಂತಾಗಬೇಕು ಎಂದರು.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಉಗ್ರರಿಂದ ಬಿಜೆಪಿ ಮುಖಂಡನ ಗುಂಡಿಟ್ಟು ಹತ್ಯೆ

ಅಧ್ಯಕ್ಷತೆ ವಹಿಸಿದ್ದ ಸೂಡಾ ಅಧ್ಯಕ್ಷ ಎಸ್‌.ಎಸ್‌.ಜ್ಯೋತಿ ಪ್ರಕಾಶ್‌ ಮಾತನಾಡಿ, ಸೂಡಾ ಆರಂಭದಿಂದ ಇಲ್ಲಿವರೆಗೆ ಹಲವು ಅಧ್ಯಕ್ಷರ
ಆಡಳಿತಾವಧಿಯಲ್ಲಿ 16ಬಡಾವಣೆಗಳನ್ನು ಅಭಿವೃದ್ಧಿಪಡಿಸಿ ಸಹಸ್ರಾರು ನಿವೇಶನಗಳನ್ನು ಅರ್ಹರಿಗೆ ಹಂಚಿಕೆ ಮಾಡಲಾಗಿದೆ. ಮೂಲೆ
ನಿವೇಶನಗಳನ್ನು ಬಹಿರಂಗ ಹರಾಜು ಮೂಲಕ ವಿತರಿಸಲಾಗಿದೆ. ವಾಜಪೇಯಿ ಬಡಾವಣೆ ಸೃಜಿಸುವಲ್ಲಿ ಆಗಿದ್ದ ಸಮಸ್ಯೆಗಳನ್ನು
ಇತ್ಯರ್ಥಪಡಿಸುವಲ್ಲಿ ಸಚಿವರು, ಸಂಸದರ ನೆರವು ಹಾಗೂ ಸಹಕಾರವನ್ನು ಮೆಚ್ಚುವಂತದ್ದು ಎಂದರು. ಅರ್ಹರಾದ 130 ಫಲಾನುಭವಿಗಳಿಗೆ ಖಾತಾ ಪತ್ರಗಳನ್ನು ಸಚಿವರು, ಸಂಸದರು ಹಾಗೂ ವೇದಿಕೆಯಲ್ಲಿದ್ದ ಗಣ್ಯರು ವಿತರಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯ ಆರ್‌. ಪ್ರಸನ್ನಕುಮಾರ್‌, ಮೇಯರ್‌ ಸುನೀತಾ ಅಣ್ಣಪ್ಪ, ಸೂಡಾ ಮಾಜಿ ಅಧ್ಯಕ್ಷ
ಜ್ಞಾನೇಶ್ವರ್‌, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಅನಿತಾ ರವಿಶಂಕರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.