Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌


Team Udayavani, Apr 29, 2024, 11:49 AM IST

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

ಭದ್ರಾವತಿ: ದೇಶದ ಸಮಸ್ತ ನಾಗರಿಕರ ಹಾಗೂ ದೇಶದ ಭವಿಷ್ಯದ ಹಿತದೃಷ್ಟಿ ಹಾಗೂ ಅಭಿವೃದ್ಧಿಯ ಹರಿಕಾರ ಎನಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಈ ದೇಶದ ಪ್ರಧಾನಿಯಾಗಿ ಮಾಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದು ಅತ್ಯವಶ್ಯಕವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

ಭಾನುವಾರ ಬೆಳಗ್ಗೆ ತಾಲೂಕಿನ ಹಲವು ಗ್ರಾಮಗಳಿಗೆ ತೆರೆದ ವಾಹನದ ಮೂಲಕ ಪಕ್ಷದ ಕಾರ್ಯಕರ್ತರು- ಮುಖಂಡರ ಜೊತೆಗೆ ತೆರಳಿ ಅವರು ಚುನಾವಣಾ ಪ್ರಚಾರ ಭಾಷಣ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಗಮನಿಸಿದಾಗ ಅವರು ಜಾರಿಗೆ ತಂದಿರುವ ಎಲ್ಲಾ ಯೋಜನೆಗಳೂ ಧರ್ಮಾತೀತ, ಪಕ್ಷಾತೀತ
ಜಾತ್ಯಾತೀತವಾಗಿ ಎಲ್ಲರಿಗೂ ತಾರತಮ್ಯವಿಲ್ಲದೆ ಬದುಕು ಸಾಗಿಸಲು ತಂದವು ಎಂದು ತಿಳಿಯುತ್ತದೆ. ಆದರೆ ಕಾಂಗ್ರೆಸ್‌ ಸರ್ಕಾರ ಇದಕ್ಕೆ ವಿರುದ್ಧವಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಾ ಬೇಧ, ಭಾವ ಮಾಡುತ್ತಾ ಜನವಿರೋಧಿ ಆಡಳಿತ ನಡೆಸುತ್ತಾ ಬಂದಿದೆ ಎಂದರು.

ಈಗ ದೇಶದ ಪ್ರತಿ ಮಹಿಳೆಗೂ ವರ್ಷಕ್ಕೆ 1ಲಕ್ಷ ರೂ. ನೀಡುವ ಭರವಸೆ ನೀಡಿರುವ ಕಾಂಗ್ರೆಸ್‌ ಮಾತಿಗೆ ಮಹಿಳೆಯರು ಪುನಃ ಮೋಸ ಹೋಗಬೇಡಿ. ಆ ಯೋಜನೆ
ಜಾರಿಗೆ ಬರಲು ಸಾಧ್ಯವಿಲ್ಲ. ಏಕೆಂದರೆ ಅದು ನಮ್ಮ ದೇಶದ ಬಜೆಟ್‌ ಗಾತ್ರಕೂ ಮೀರಿದ ಮೊತ್ತ. ಮತ ಗಳಿಸಲು ಕಾಂಗ್ರೆಸ್‌ ಜನರಿಗೆ ಮತ್ತೂಮ್ಮೆ ಸುಳ್ಳು  ಶ್ವಾಸನೆ ನೀಡುತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬರುತ್ತದೆ. ಈ ಸರ್ಕಾರ ಹೋಗುವವರೆಗೂ ಮಳೆ ಬರುವುದಿಲ್ಲ. ಈ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬೀಳುವುದು ಖಚಿತ ಎಂದರು. ಕಾಗೇಕೋಡಮಗ್ಗೆಯಿಂದ ಆರಂಭಗೊಂಡ ಮತಯಾತ್ರೆಯು ತಳ್ಳಿಕಟ್ಟೆ,ಕೆ. ಹೊಸಹಳ್ಳಿ, ಕೂಡ್ಲಿಗೆರೆ, ಸೀತಾರಾಮಪುರ, ಅರಳಿಹಳ್ಳಿ, ವೀರಾಪುರ, ಗುಡ್ಡದನೇರಲೆಕೆರೆ, ದೇವರಹಳ್ಳಿ, ಕೆ.ಎಚ್‌.ನಗರ, ಅಂತರಗಂಗೆ, ಯರೇಹಳ್ಳಿ, ತಾಷ್ಕಂಟ್‌ನಗರ, ಮಾವಿನಕೆರೆ, ಬಾರಂದೂರು, ಹಿರಿಯೂರು, ಬೊಮ್ಮನಕಟ್ಟೆ, ಹುಡ್ಕೋ, ಕಲ್ಲಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂಚರಿಸಿತು. ತೆರೆದ ವಾಹನದಲ್ಲಿ ಅಭ್ಯರ್ಥಿ ಹಾಗೂ ಮುಖಂಡರು ನಿಂತು ಮತದಾರರಿಗೆ ಕೈ ಮುಗಿದು ಮತ ಯಾಚಿಸಿದರು. ಪ್ರತೀ ಹಳ್ಳಿಯಲ್ಲಿಯೂಸಹ ಅವರನ್ನು ಅಸಂಖ್ಯಾತ ನಾಗರಿಕರು ಹಾರ ಹಾಕಿ ಆರತಿ ಬೆಳಗಿ ಸ್ವಾಗಿತಿಸಿದರು.

ಜೆಡಿಎಸ್‌ಮುಖಂಡರಾದ ಶಾರದ ಅಪ್ಪಾಜಿ ಮಾತನಾಡಿ, ಜೆಡಿಎಸ್‌ ನಾಯಕರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಬಿ.ಎಸ್‌ .ಯಡಿಯೂರಪ್ಪ ಅವರು ಏ.29ರಂದು ಸಂಜೆ 6 ಗಂಟೆಗೆ ಭದ್ರಾವತಿ ಕನಕ ಮಂಟಪ ಮೈದಾನಕ್ಕೆ ಆಗಮಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಚುನಾವಣಾ ಪ್ರಭಾರಿಗಳಾದ ಕೂಡ್ಲಿಗೆರೆ ಹಾಲೇಶ್‌, ಕೆ.ಎಚ್‌. ತೀರ್ಥಯ್ಯ, ಅಧ್ಯಕ್ಷ ಧರ್ಮಪ್ರಸಾದ್‌, ಧರ್ಮಣ್ಣ, ಮುಂಗೋಟೆ ರುದ್ರೇಶ್‌, ಕುಂಬ್ರಿ ಚಂದ್ರಣ್ಣ, ಜೆಡಿಎಸ್‌ ಅಧ್ಯಕ್ಷ ಆರ್‌. ಕರುಣಾಮೂರ್ತಿ, ಮಂಜುನಾಥ್‌ ಕದಿರೇಶ್‌, ಕಾ.ರ. ನಾಗರಾಜ್‌, ಕವಿತ ಇತರರು ಇದ್ದರು.

ಸುಡು ಬಿಸಿಲಿನಲೂ ಕಾದ ಜನ

ಅಭ್ಯರ್ಥಿಯ ಬರುವಿಕೆಗಾಗಿ ಗ್ರಾಮ- ಗ್ರಾಮಗಳಲ್ಲಿ ಜನರು, ಮಹಿಳೆಯರು ಸುಡು ಬಿಸಿಲನ್ನೂ ಲೆಕ್ಕಿಸದೆ ಗಂಟೆಗಟ್ಟಲೆ ಕಾದುನಿಂತು, ಅವರು ಬರುತ್ತಲೆ ಪಟಾಕಿ ಸಿಡಿಸಿ, ಹಾರಹಾಕಿ ಜಯಘೋಷ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಇದನ್ನೂ ಓದಿ: Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.