ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ… ಅರಣ್ಯ ಇಲಾಖೆಯ ಸಿಬ್ಬಂದಿ ವರ್ತನೆಗೆ ಗ್ರಾಮಸ್ಥರ ಆಕ್ರೋಶ


Team Udayavani, Aug 22, 2024, 5:24 PM IST

ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ… ಅರಣ್ಯ ಇಲಾಖೆಯ ಸಿಬ್ಬಂದಿ ವರ್ತನೆಗೆ ಗ್ರಾಮಸ್ಥರ ಆಕ್ರೋಶ

ಹೊಳೆಹೊನ್ನೂರು: ಕರಡಿ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯವರು ಮೀನಾಮೇಷ ಎಣಿಸುತ್ತಿದ್ದಾರೆ. ಜನರ ಜೀವದೊಂದಿಗೆ ಆಟವಾಡುತ್ತಿದ್ದಾರೆ ಎಂದು ಅಗಸನಹಳ್ಳಿ ಹಾಗೂ ಎಮ್ಮೆಹಟ್ಟಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ರಾತ್ರಿ ಸುಮಾರು 8 ಗಂಟೆಗೆ ವೇಳೆಗೆ ಅಗಸನಹಳ್ಳಿ ಗ್ರಾಮದಲ್ಲಿ ಕರಡಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಪೋನ್ ಮಾಡಿದ್ದಾರೆ. ಕತ್ತಲಾಗಿದ್ದರಿಂದ ಗ್ರಾಮಸ್ಥರು ಬೈಕ್ ಹಾಗೂ ಅನೇಕ ವಾಹನಗಳ ಜೊತೆ ನೂರಾರು ಸಂಖ್ಯೆಯಲ್ಲಿ ಬಂದು ಕರಡಿಯನ್ನು ಹಿಂಬಾಲಿಸುತ್ತಿದ್ದರು. ಇದನ್ನ ತಿಳಿದ ಎಮ್ಮೆಹಟ್ಟಿ ಗ್ರಾಮಸ್ಥರು ಇನ್ನೊಂದು ಕಡೆಯಿಂದ ಕರಡಿ ಶೋಧನೆ ಇಳಿದರು.

ಅಷ್ಟು ಸಮಯಕ್ಕೆ ಸರಿಯಾಗಿ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಎರಡು ಗ್ರಾಮಸ್ಥರೊಂದಿಗೆ ಕರಡಿಯನ್ನು ಹುಡುಕಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಂತರ ಕೆಲವು ಯುವಕರು ಮುಂದೆ ಹೋದಾಗ ವಡ್ಡರಹಟ್ಟಿಯ ಚೌಡಮ್ಮ ದೇವಸ್ಥಾನ ಬಳಿ ಹೋಗುತ್ತಿರುವುದು ಕಂಡ ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು ಯಾವುದೇ ಪ್ರಯೋಜವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿಗಳು ಜನರಿಗೆ ನೀತಿ ಭೋದನೆ ಮಾಡಿದ್ದು ಬಿಟ್ಟರೆ ಕರಡಿ ನೋಡಿದರೂ ತಮ್ಮ ಜೀಪ್ ನ ಮುಖಾಂತರ ಹಿಂಬಾಲಿಸಿ, ದೇವಸ್ಥಾನಕ್ಕೆ ಕರಡಿ ಹೋದ ನಂತರ ಕೇವಲ ಮೊಬೈಲ್ ಬಳಸಿ ಪೋಟೋ ಕ್ಲಿಕ್ಕಿಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಅಗಸನಹಳ್ಳಿ ಆರ್. ಈಶ್ವರ್ ರವರು ನೇರವಾಗಿ ಆರೋಪಿಸಿದ್ದಾರೆ.

ದೇವಸ್ಥಾನ ಬಳಿ ಜೀಪ್ ತೆಗೆದುಕೊಂಡು ಹೋದ ಸಿಬ್ಬಂದಿ ದೇವಸ್ಥಾನ ಗೇಟ್ ಗಳನ್ನು ಮುಚ್ಚಿದ್ದರೆ, ಗುರುವಾರ ಬೆಳಿಗ್ಗೆಯಾದರೂ ಕರಡಿಯನ್ನು ಬಂದಿಸಬಹುತ್ತಿತ್ತು. ಆದರೆ ಅವರು ಪ್ರವಾಸ ಸ್ಥಳಗಳಿಗೆ ಹೋಗಿ ಪ್ರವಾಸಿಗರು ತಮ್ಮ ಮೊಬೈಲ್ ಗಳಲ್ಲಿ ಪೋಟೋಗಳನ್ನು ಕ್ಲಿಕ್ಕಿಸುವಂತೆ ಮಾಡಿಕೊಂಡು ಹೋಗಿದ್ದಾರೆ. ಅರಣ್ಯ ಇಲಾಖೆಯ ಈ ವರ್ತನೆಯನ್ನು ಗ್ರಾಮಸ್ಥರು ಖಂಡಿಸಿದ್ದಾರೆ.

ಗುರುವಾರ ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ಎಮ್ಮೆಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕಾಣಿಸಿಕೊಂಡಿದ್ದು, ಇಲ್ಲಿಗೂ ಸಹ ಆಗಮಿಸಿ ಅಧಿಕಾರಿಗಳು ರಸ್ತೆಯಲ್ಲಿಯೇ ಜೀಪಿನಲ್ಲಿ ಕುಳಿತುಕೊಂಡು ಗ್ರಾಮಸ್ಥರೊಂದಿಗೆ ಕಾಲಾ ಹರಣ ಮಾಡಿ ಕರಡಿ ಪಲಾಯನ ಮಾಡಿದ ನಂತರ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಕರಡಿ ಹಿಡಿಯುವುದಕ್ಕೆ ಬರುವ ಅರಣ್ಯ ಅಧಿಕಾರಿಗಳು ನೆಂಟರ ಮನೆಗೆ ಬರುವಂತೆ ಬರುತ್ತಿದ್ದು, ಕೈಯಲ್ಲಿ ಯಾವುದೇ ಬಲೆಯಾಗಲಿ ಅಥವಾ ಮತ್ತು ಬರುವ ಚುಚ್ಚುಮದ್ದು ಹಾಕಿ ಹಿಡಿಯಬಹುದು. ಆದರೆ ಉಡಾಫೆ ಉತ್ತರ ನೀಡುತ್ತಾ ಎರಡು ಗ್ರಾಮಸ್ಥರ ಜೀವ ಜೊತೆಗೆ ಆಟವಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಈಗಾಗಲೇ ಅಡಿಕೆ ಬರದಿಂದ ಅಡಿಕೆ ಕ್ಯೂಯ್ಯಲು ಪ್ರಾರಂಭವಾಗಿದ್ದು, ಗ್ರಾಮದಿಂದ ಹೊರಗಡೆ ಅಡಿಕೆ ಮನೆಗಳಿದ್ದು, ಅಡಿಕೆ ಮನೆಯಲ್ಲಿ ಒಬ್ಬೊಬ್ಬರೇ ಇರುವ ಪರಿಸ್ಥಿತಿ ಇರುತ್ತದೆ. ಮಲಗಿದ ನಂತರ ಕರಡಿ ದಾಳಿ ನಡೆಸಿದರೇ ಅವರ ಪರಿಸ್ಥಿತಿ ಊಹಿಸಿಕೊಳ್ಳಲು ಸಹ ಸಾಧ್ಯವಾಗುವುದಿಲ್ಲ. ಅಕಸ್ಮಾತ್ ಪ್ರಾಣ ಕಳೆದುಕೊಂಡರೆ ಅರಣ್ಯ ಇಲಾಖೆಯವರು ನಮ್ಮ ಪ್ರಾಣವನ್ನು ಹಿಂದಿರುಸಿ ಕೊಡುವರೇ ಎಂಬುದು ವೈ. ಮಲ್ಲೇಶಪ್ಪ ರವರ ಪ್ರಶ್ನೆಯಾಗಿದೆ.

ಆದ್ದರಿಂದ ಕೂಡಲೇ ಅರಣ್ಯ ಇಲಾಖೆಯವರು ಕರಡಿಯನ್ನು ಆದಷ್ಟು ಬೇಗ ಹಿಡಿದು ಕಾಡಿಗೆ ರವಾನಿಸಲಿ ಎಂಬುದು ಗ್ರಾಮಸ್ಥರ ಆಶಯವಾಗಿದೆ.

ಟಾಪ್ ನ್ಯೂಸ್

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-adasdsaddas

Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM–Nagamangala

Riots: ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತಂದ್ರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

siddanna-2

BJP ಪ್ರತಿಭಟನೆ ಪ್ರಾಣಿ ಹಿಂಸೆಯ ವಿರುದ್ಧ ಕಟುಕರು ಪ್ರತಿಭಟಿಸಿದಂತೆ: ಸಿದ್ದರಾಮಯ್ಯ

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ

If all goes well in BJP, he will soon return to the party: KS Eshwarappa

Eshwarappa: ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Hosanagar

Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

1-rrrr

Yadgir: ಮನೆ ಮೇಲ್ಛಾವಣಿ ಕುಸಿದು ಬಾಲಕಿ ದಾರುಣ ಸಾ*ವು

dw

Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ

3

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.