Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು
Team Udayavani, Jul 7, 2024, 11:09 AM IST
ಶಿವಮೊಗ್ಗ: ಭದ್ರಾ ಡ್ಯಾಂ ನ ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.
ಕಳೆದ ಐದು ದಿನಗಳಿಂದ 2500 ಕ್ಯೂಸೆಕ್ಸ್ ಗೂ ಅಧಿಕ ನೀರು ಸೋರಿಕೆಯಾಗುತ್ತಿತ್ತು. ಭದ್ರಾ ನದಿಗೆ ಅನಾಯಾಸವಾಗಿ ನೀರು ಪೋಲಾಗುತ್ತಿತ್ತು. ಮಳೆಗಾಲದಲ್ಲಿ ಸ್ಲೀವ್ಸ್ ಗೇಟ್ ರಿಪೇರಿ ಮಾಡುವಾಗ ಎಡವಟ್ಟಾಗಿತ್ತು. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಅತಂಕಗೊಂಡಿದ್ದರು.
ಕಾಡಾ ಅಧ್ಯಕ್ಷರ ನೇತೃತ್ವದಲ್ಲಿ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರೂ ಸ್ಲೀವ್ಸ್ ಗೇಟ್ ನಿಂದ ಶೇಕಡಾ 50 ರಷ್ಟು ನೀರು ನದಿಗೆ ಸೋರಿಕೆಯಾಗುತ್ತಿತ್ತು. ಕಳೆದ 48 ಗಂಟೆಗಳ ಹಗಲು ರಾತ್ರಿ ನಿರಂತರ ಕಾರ್ಯಾಚರಣೆ ನಡೆಸಲಾಗಿದೆ.
ಅಧಿಕಾರಿಗಳು ಹಾಗು ಹೊರ ಗುತ್ತಿಗೆ ನೌಕರರು ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣ ಸ್ಥಗಿತಗೊಳಿದ್ದಾರೆ. ಸ್ಲೀವ್ಸ್ ಗೇಟ್ ಕ್ಲೋಸ್ ಆಗದೆ ಹೋಗಿದ್ದಲ್ಲಿ ಭದ್ರಾ ಡ್ಯಾಂ ಈ ಬಾರಿ ತುಂಬಲು ಸಾದ್ಯವಾಗುತ್ತಿರಲಿಲ್ಲ. ಗುತ್ತಿಗೆದಾರ ವೇದಮೂರ್ತಿ ಅನುಭವಿ ತಂಡದಿಂದ ಸ್ಲೀವ್ಸ್ ಗೇಟ್ ಕ್ಲೋಸ್ ಮಾಡಲಾಗಿದೆ.
ಅಮಾನತ್ತುಗೊಳ್ಳುವ ಭೀತಿಯಲ್ಲಿದ್ದ ಡ್ಯಾಂ ಅಧಿಕಾರಿಗಳ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.