3 ತಿಂಗಳಲ್ಲಿ ಮಸೂದೆ ಅಂಗೀಕರಿಸಿ ಅರ್ಚಕರಿಗೆ ಸಹಾಯ; ಡಿಸಿಎಂ ಡಿ.ಕೆ.ಶಿ.

ಬಿಜೆಪಿಯವರು ಧರ್ಮ- ದೇಗುಲಗಳ ವಿರೋಧಿಗಳು ಎಂಬುದು ಸಾಬೀತು

Team Udayavani, Feb 24, 2024, 11:12 PM IST

ಶಿವಮೊಗ್ಗ: ಅರ್ಚಕರಿಗೆ ಒಳಿತು ಮಾಡಲು ಸರಕಾರ ಮುಂದಾಗಿತ್ತು. ಅದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸಿತು. ಆದರೆ ಈ ಸಂಬಂಧದ ಮಸೂದೆಯನ್ನು ಮುಂದಿನ ದಿನಗಳಲ್ಲಿ ಅಂಗೀಕರಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಾಲಯಗಳಿಗೆ ಸಹಾಯ ಮಾಡುವ ದೂರಾಲೋಚನೆ ಯಿಂದ ಹೊಸ ಮಸೂದೆಯನ್ನು ಮಂಡಿಸಿದ್ದೆವು. ಆದರೆ ವಿಪಕ್ಷದ ವಿರೋಧದಿಂದ ಅಂಗೀಕಾರ ಆಗಿಲ್ಲ. ಇನ್ನು ಮೂರು ತಿಂಗಳಲ್ಲಿ ನಾವು ವಿಧಾನಸಭೆಯಲ್ಲಿ ಬಹುಮತ ಪಡೆಯುತ್ತೇವೆ. ಆಗ ಈ ಮಸೂದೆ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಅರ್ಚಕರ ಪ್ರಭಾವದಿಂದ ನಾವು ಶಿಲೆಯಲ್ಲೂ ಶಿವನನ್ನು ಕಾಣು ತ್ತೇವೆ. ಹೀಗಾಗಿ ಈ ಮಸೂದೆ ಮೂಲಕ ದೊಡ್ಡ ದೇವಾಲಯಗಳ ಆದಾಯದಲ್ಲಿ ಶೇ.10ರಷ್ಟನ್ನು ತೆಗೆದುಕೊಂಡು ಅದನ್ನು ಅರ್ಚಕರ ವೇತನ, ವಿಮೆ ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಮುಂದಾಗಿದ್ದೆವು. ದೇವಾಲಯ, ಧರ್ಮದ ಬಗ್ಗೆ ಮಾತನಾಡುವ ಬಿಜೆಪಿ ಹಾಗೂ ಜೆಡಿಎಸ್‌ನವರು ಮಸೂದೆಯನ್ನು ಸೋಲಿಸಿ ತಾವು ದೇವಾಲಯಗಳ ವಿರೋಧಿಗಳು  ಎಂದು ಸಾಬೀತು ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ ಸೇರಲು ಮುಕ್ತ ಆಹ್ವಾನ
ಇಡೀ ರಾಜ್ಯದಲ್ಲಿ ಪಕ್ಷದ ಸಿದ್ಧಾಂತ ಒಪ್ಪಿ ಯಾರಾದರೂ ಬರಬಹುದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಸೇರಲು ಬಹಿರಂಗ ಆಹ್ವಾನ ನೀಡಿದರು.

ದೇವರ ಹುಂಡಿಯ ನಯಾಪೈಸೆಯನ್ನೂ
ಸರಕಾರ ಪಡೆಯದು: ಎಚ್‌.ಕೆ. ಪಾಟೀಲ್‌
ಬಾಗಲಕೋಟೆ: ಧಾರ್ಮಿಕ ದತ್ತಿ¤ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಬಿಜೆಪಿಯವರು ಅರ್ಥ ಮಾಡಿಕೊಂಡಿಲ್ಲ. ಈ ಕಾನೂನಿನಿಂದ ದೇವರ ಹುಂಡಿಯ ನಯಾಪೈಸೆಯನ್ನೂ ಸರಕಾರ ಪಡೆಯದು. ಅದಕ್ಕೆ ಅವಕಾಶವೂ ಇಲ್ಲ ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.

ಬಾದಾಮಿಯ ಹೂಲಗೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆ ಮಸೂದೆ ಹಿಂದೂ ಗುಡಿಗಳಿಗೆ ಮಾರಕವಾಗಿಲ್ಲ. ಈಗಾಗಲೇ ಇದ್ದ ಕಾನೂನು ತಿದ್ದುಪಡಿ ಮಾಡಲಾಗುತ್ತಿದೆ. ಸರಿಯಾಗಿ ತಿಳಿದುಕೊಳ್ಳದೆ ಅನಾವಶ್ಯಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ನಾವು ದೇವರ ಹುಂಡಿಗೆ ಕೈ ಹಾಕುವವರಲ್ಲ. ಇಟ್ಟಿಗೆ ಕೊಟ್ಟು ರೊಕ್ಕಾ ಕೇಳುವವರೂ ಅಲ್ಲ. ಒಂದು ನಯಾಪೈಸೆ ಹುಂಡಿ ಹಣವನ್ನೂ ಸರಕಾರ ಪಡೆಯದು. ಹುಂಡಿ ದುಡ್ಡು ಸರಕಾರದ ಯಾವ ಖಾತೆಗೂ ಜಮೆ ಆಗೋದಿಲ್ಲ. ಅದು ಆಯಾ ದೇವಾಲಯದ ಖಾತೆಯಲ್ಲೇ ಇರುತ್ತದೆ. ಇದರ ಅರ್ಥ ವಿಜಯೇಂದ್ರ ಅವರಿಗೆ ಹೇಳಬೇಕಾ, ಕೋಟ ಶ್ರೀನಿವಾಸ ಪೂಜಾರಿಗೆ ಹೇಳಬೇಕಾ, ಅಥವಾ ಅಶೋಕ್‌ಗೆ ಹೇಳಬೇಕಾ ಎಂದು ಪ್ರಶ್ನಿಸಿದರು.

ಧಾರ್ಮಿಕ ಕಾನೂನು ತಿದ್ದುಪಡಿ ಮಾಡಿದ್ದೇ ಬಿಎಸ್‌ವೈ
ಬಾಗಲಕೋಟೆ: ಧಾರ್ಮಿಕ ದತ್ತಿ ಕಾನೂನಿಗೆ ತಿದ್ದುಪಡಿ ತಂದಿದ್ದೇ ಯಡಿಯೂರಪ್ಪ. ಇದು ವಿಜಯೇಂದ್ರರಿಗೆ ಗೊತ್ತಿರಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬಾದಾಮಿ ತಾಲೂಕಿನ ಹೂಲಗೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 2011ರಲ್ಲಿ ಬೇರೆ ಧಾರ್ಮಿಕ ಸಂಸ್ಥೆಗಳಿಗೆ ಹಣ ಕೊಡಬಹುದು ಎಂಬುದನ್ನು ಸೆಕ್ಷನ್‌ 19ರಲ್ಲಿ ನಿಯಮ ತಂದಿದ್ದರು. ಅದನ್ನು ಕೇವಲ ಸಿ ದರ್ಜೆ ದೇವಾಲಯಗಳಿಗೆ ಕೊಡಬೇಕೆಂದು ನಿಯಮ ತಂದಿದ್ದೇವೆ ಎಂದರು.

ಒಂದು ಸಾವಿರ ಸಿ ದರ್ಜೆ ದೇವಸ್ಥಾನಗಳಿಗೆ 25 ಕೋಟಿ ರೂ. ಬಿಡುಗಡೆ ಮಾಡುತ್ತೇವೆ. 7 ಕೋಟಿ ರೂ. ವೆಚ್ಚದಲ್ಲಿ 40 ಸಾವಿರ ಅರ್ಚಕರಿಗೆ 5 ಲಕ್ಷ ರೂ.ವರೆಗೆ ವಿಮೆ ಮಾಡಿಸುತ್ತೇವೆ. ಅರ್ಚಕರ ಮಕ್ಕಳ ಶಿಕ್ಷಣಕ್ಕೆ 5 ಕೋಟಿ ರೂ. ವಿದ್ಯಾರ್ಥಿ ವೇತನ ಕೊಡುತ್ತೇವೆ. ಅರ್ಚಕರ ಸಂಘದವರು, ಮನೆ ಕಟ್ಟಲು ಸಹಾಯ ಮಾಡಿ ಎಂದು ಹೇಳಿದ್ದರು. ಈ ವರ್ಷ ಅದಕ್ಕಾಗಿ 15 ಕೋಟಿ ರೂ.ಇಟ್ಟಿದ್ದೇವೆ ಎಂದರು.

ದತ್ತಿ ಕಾಯಿದೆ ಬಂದಿದ್ದು 1997ರಲ್ಲಿ. 2003ರಲ್ಲಿ ಈ ಕಾನೂನು ಜಾರಿ ಯಾಗಿದೆ. 2011ರಲ್ಲಿ ಈ ಕಾಯಿದೆಯಡಿ ದುಡ್ಡು ಕೊಟ್ಟಿದ್ದೇ ಯಡಿಯೂರಪ್ಪನವರು. ಸೆಂಟ್ರಲ್‌ ಕಾಮನ್‌ ಪೂಲ್‌ ಫಂಡ್‌ಗೆ ಶೇ.5ರಷ್ಟಿತ್ತು. ಯಡಿಯೂರಪ್ಪ ತಿದ್ದುಪಡಿ ತಂದು 5 ಲಕ್ಷದಿಂದ 10 ಲಕ್ಷ ರೂ. ಆದಾಯವಿರುವ ದೇವಸ್ಥಾನಗಳಿಗೆ ಶೇ.5 ಟೂಲ್‌ ಕೊಂಡುಕೊಳ್ಳಬೇಕೆಂದು ಹೇಳಿದ್ದರು. 10 ಲಕ್ಷಕ್ಕಿಂತ ಹೆಚ್ಚು ಆದಾಯವಿರುವ ದೇವಸ್ಥಾನಗಳಿಗೆ ಶೇ.10 ಟೂಲ್‌ ಮಾಡಿದ್ದರು. ವಿಧಾನಸಭೆಯಲ್ಲಿ ಬಿಜೆಪಿಯವರೇ ಇದನ್ನು ಸ್ವಾಗತಿಸಿ, ಸಲಹೆಯೂ ಕೊಟ್ಟಿದ್ದರು.

ವಿಜಯೇಂದ್ರ ಅವರು ಟ್ವೀಟ್‌ ಮಾಡಿದ ಮಾಡಿದ ಮೇಲೆ ಚರ್ಚೆ ಶುರುವಾಗಿದೆ ಎಂದು ಹೇಳಿದರು.
ಹಿಂದೂ ಧಾರ್ಮಿಕ ದತ್ತಿ ಕಾಯಿದೆ ಬೇರೆ, ಮುಸ್ಲಿಮರಿಗೆ ಬೇರೆಯೇ ಕಾನೂನು ಇದೆ. ದೇವಸ್ಥಾನಗಳ ಹಣ ಮುಸ್ಲಿಮರಿಗೆ ಹೋಗಲ್ಲ. 34 ಸಾವಿರಕ್ಕೂ ಅಧಿಕ ದೇವಸ್ಥಾನಗಳಿಂದ ಬರುವ ಹಣದಲ್ಲಿ ನಯಾ ಪೈಸೆ ಕೂಡ ಇನ್ನೊಂದು ದೇವಸ್ಥಾನಕ್ಕೆ ಕೊಡಲು ಆಗಲ್ಲ. ಬೇರೆ ಧರ್ಮ ಬಿಡಿ, ಒಂದು ದೇವಾಲಯದಿಂದ ಇನ್ನೊಂದು ದೇವಾಲಯಕ್ಕೂ ಕೊಡಲು ಬರಲ್ಲ. ಸರಕಾರಕ್ಕೂ ಈ ದೇವಾಲಯಗಳ ಹಣ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸರಕಾರದ ಬೊಕ್ಕಸ ಖಾಲಿಯಾಗಿದ್ದು, ದೇವಸ್ಥಾನಗಳ ಹುಂಡಿಗೆ ಕೈ ಹಾಕಿದ್ದೇವೆ ಎಂಬ ವಿಜಯೇಂದ್ರ ಆರೋಪ ಸಂಪೂರ್ಣ ಸುಳ್ಳು. ಈ ಹಿಂದೆ ಸರಕಾರದ ಹುಂಡಿ ತುಂಬಿತ್ತಲ್ಲ, ಆಗ ದೇವಸ್ಥಾನಗಳಿಗೆ ಯಾಕೆ ಹಣ ಕೊಡಲಿಲ್ಲ? ಅರ್ಚಕರು-ನೌಕರರು ಮನೆ ಕಟ್ಟಲು, ಅವರ ಮಕ್ಕಳ ಶಿಕ್ಷಣಕ್ಕೆ ಯಾಕೆ ಸಹಾಯ ಮಾಡಲಿಲ್ಲ? ಸಿ ದರ್ಜೆಯ ದೇವಸ್ಥಾನಗಳಿಗೆ ಬಿಜೆಪಿಯವರು ಯಾಕೆ ಸಹಾಯ ಮಾಡಲಿಲ್ಲ?
– ರಾಮಲಿಂಗಾ ರೆಡ್ಡಿ, ಸಚಿವ

ಏನು ಮಾಡಲು ಸಾಧ್ಯ: ಸಿಎಂ
ಹಾಸನ: ಹೆಚ್ಚು ಆದಾಯ ಸಂಗ್ರಹ ವಾಗುವ ಹಿಂದೂ ದೇವಾಲಯಗಳ ಆದಾಯದ ಸ್ವಲ್ಪ ಪಾಲನ್ನು ಕಡಿಮೆ ಆದಾಯ ಇರುವ ದೇಗುಲಗಳಿಗೆ ಹಂಚಿಕೆ ಮಾಡಲು ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಮುಂದಾಗಿತ್ತು. ಆದರೆ ಇದಕ್ಕೆ ವಿಪಕ್ಷದವರು ವಿರೋಧಿಸುತ್ತಿದ್ದಾರೆ ಎಂದರೆ ಏನು ಮಾಡಲು ಸಾಧ್ಯ ಎಂದು ಸಿಎಂಸಿದ್ದರಾಮಯ್ಯ ಅವರು ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಹೇಳಿದರು.

ಹಿಂದೂ ದೇಗುಲಗಳ ಆದಾಯವನ್ನು ಸರಕಾರ ಲೂಟಿ ಮಾಡಲು ಹೊರಟಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಲೂಟಿ ಮಾಡಿದ್ದರಿಂದಲೇ ಅವರನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರು ತಿರಸ್ಕರಿಸಿ ವಿಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಿಸಿದ್ದಾರೆ ಎಂದು ತಿರುಗೇಟು ನೀಡಿದರು.

ದೇಗುಲದ ಹುಂಡಿಗೆ ಕೈಹಾಕಿದ
ಜಾತ್ಯತೀತ ಸರಕಾರ: ಸಿ.ಟಿ. ರವಿ
ಚಿಕ್ಕಮಗಳೂರು: ಜಾತ್ಯತೀತ ಎನ್ನುವ ಕಾಂಗ್ರೆಸ್‌ ಅಪ್ಪಟ ಜಾತಿವಾದಿ. ಇವರ ಜಾತ್ಯತೀತತೆ ಬರೀ ಢೋಂಗಿ. ಕಾಂಗ್ರೆಸ್‌ ಮೊದಲಿನಿಂದಲೂ ಹೆಚ್ಚು ಕೋಮುವಾದಿ ಮತ್ತು ಕ್ರಿಮಿನಲ್‌ ಪಾರ್ಟಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

ಜಾತ್ಯತೀತ ಎನ್ನುವ ಸರಕಾರ ದೇವಸ್ಥಾನ ಹುಂಡಿಗೆ ಯಾಕೆ ಕೈಹಾಕಿದೆ? ಇವರು ನಿಜವಾದ ಜಾತ್ಯತೀತರಾಗಿದ್ದರೆ ಮಸೀದಿ ಹುಂಡಿಯಲ್ಲಿ ಹತ್ತು ಪರ್ಸೆಂಟ್‌, ಚರ್ಚ್‌ ಹುಂಡಿಯಲ್ಲೂ ಹತ್ತು ಪರ್ಸೆಂಟ್‌ ಅನ್ನಬೇಕಿತ್ತು ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.