![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 9, 2024, 11:24 AM IST
ಭದ್ರಾವತಿ: ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅನಿವಾರ್ಯವಾಗಿದ್ದಾರೆ. ಸೂರ್ಯ- ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಮೋದಿ ಮತ್ತೂಮ್ಮೆ ಪ್ರಧಾನಿ ಆಗುತ್ತಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಭಾನುವಾರ ರಾತ್ರಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುತ್ವದ ಹೆಸರು ಹೇಳಿಕೊಂಡು ಅಪ್ಪ- ಮಕ್ಕಳಾದ ನಮ್ಮನ್ನು ಟೀಕಿಸುತ್ತಾರಲ್ಲ. ನಾವೇನು ದ್ರೋಹ ಮಾಡಿದ್ದೆವು. ಚುನಾವಣೆ ನಂತರ ನಡೆಯುವ ವಿಜಯೋತ್ಸವದಿಂದ ಅವರಿಗೆ ತಕ್ಕ ಉತ್ತರ ದೊರೆಯಲಿ. ಟೀಕಿಸುವವರು ನಮಗೆ
ಹಿಂದುತ್ವದ ಪಾಠ ಮಾಡಬೇಕಾಗಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರ ಹೆಸರೆತ್ತದೆ ಹೇಳಿದರು.
ಬೆಂಗಳೂರಿನಲ್ಲಿರುವ ಶಿವಮೊಗ್ಗ ಜಿಲ್ಲೆಯ ಯುವ ಮತದಾರರು ಸೇರಿದಂತೆ 50 ಸಾವಿರಕ್ಕೂ ಅಧಿಕ ಮತದಾರರಿಗಾಗಿ ಏ. 14 ರಂದು ಅರಮನೆ ಮೈದಾನ ಗೇಟ್ ನಂ.3 ರಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು ಎಂದರು.
ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಬಿಜೆಪಿ ದೇಶಕ್ಕಾಗಿ ರಕ್ತ ಬಸಿದ ಪಕ್ಷವಾಗಿದೆ. ಪಕ್ಷದ ಕಾರ್ಯಕರ್ತರು ಸ್ವಾಭಿಮಾನದ ಕಾರ್ಯ ಪಡೆಯಾಗಿದೆ. ಮೋದಿ ಅವರು ಶ್ರೀರಾಮ ಮಂದಿರ, ಕಾಶಿ ಅಭಿವೃದ್ಧಿ ಮಾಡಿ ಆಯಿತು. ಇನ್ನು ಉಳಿದದ್ದು ಮಥುರಾ ದೇವಾಲಯ ಮತ್ತು ಕಾಮನ್ ಸಿವಿಲ್ ಕೋಡ್ ಆಗಬೇಕಾಗಿದೆ ಎಂದರು.
ಚಿಕ್ಕಮಗಳೂರಿನ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್, ಅಧ್ಯಕ್ಷ ಧರ್ಮಪ್ರಸಾದ್, ಮುಂಗೋಟೆ ರುದ್ರೇಶ್, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ತಾಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ ಮಾತನಾಡಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.