ಬಿಎಂಶ್ರೀ ಕನ್ನಡ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಮೇಧಾವಿ

ಕನ್ನಡ ಸಾಹಿತ್ಯಕ್ಕೆ 12ನೇ ಶತಮಾನ ಮತ್ತು 20ನೇ ಶತಮಾನ ಪ್ರಮುಖವಾದ ಕಾಲಘಟ್ಟ

Team Udayavani, Jul 5, 2022, 6:07 PM IST

ಬಿಎಂಶ್ರೀ ಕನ್ನಡ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಮೇಧಾವಿ

ಶಿವಮೊಗ್ಗ: ಬಿಎಂಶ್ರೀ ಅವರು ಆಧುನಿಕ ಕನ್ನಡ ಸಾಹಿತ್ಯಕ್ಕೆ “ಇಂಗ್ಲಿಷ್‌ ಗೀತಗಳು’ ಕೃತಿಯ ಮೂಲಕ ನವಚೈತನ್ಯ ತುಂಬಿದವರು. ಕನ್ನಡದ ಸಾಂಸ್ಕೃತಿಕ ಜಗತ್ತಿನಲ್ಲಿ ಈ ಕೃತಿಗೆ ಐತಿಹಾಸಿಕ ಮಹತ್ವವಿದೆ ಎಂದು ವಿಮರ್ಶಕ ಡಾ| ನರಹಳ್ಳಿ ಬಾಲಸುಬ್ರಮಣ್ಯ ಅಭಿಪ್ರಾಯಪಟ್ಟರು.

“ಇಂಗ್ಲಿಷ್‌ ಗೀತಗಳು’ ಕೃತಿಗೆ ನೂರು ವರ್ಷ ತುಂಬಿದ ಸವಿ ನೆನಪಿಗೆ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವಿಭಾಗ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಪ್ರೊ| ಎಸ್‌.ಪಿ. ಹಿರೇಮಠ ಸಭಾಂಗಣದಲ್ಲಿ “ಬಿಎಂಶ್ರೀ ಮಾರ್ಗ’ ಕುರಿತು ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಬಿಎಂಶ್ರೀ ಅವರು ಕನ್ನಡ ನವೋದಯ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದು, ತನ್ಮೂಲಕ ಅಂದಿನ ಉದಯೋನ್ಮುಖ ಬರಹಗಾರರಿಗೆ ಹೊಸ ಮಾರ್ಗ ಹಾಕಿಕೊಟ್ಟವರು. ನಂತರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕ ಹೇಗೆ ವಿಕಸನ ಹೊಂದಿತು ಎಂಬುದು ಇತಿಹಾಸ.

ಕನ್ನಡ ಸಾಹಿತ್ಯ ಪರಂಪರೆಯ ಬಗ್ಗೆ ಅವಜ್ಞೆ ಸರಿಯಲ್ಲ. ಸದ್ಯದ ಸವಾಲುಗಳು ಮತ್ತು ಬಿಕ್ಕಟ್ಟುಗಳ ನಿರ್ವಹಣೆಗೆ ಪರಂಪರೆಯ ಜೊತೆಗಿನ ಅನುಸಂಧಾನ ಅತ್ಯಗತ್ಯ. ಕನ್ನಡ ಸಾಹಿತ್ಯಕ್ಕೆ 12ನೇ ಶತಮಾನ ಮತ್ತು 20ನೇ ಶತಮಾನ ಪ್ರಮುಖವಾದ ಕಾಲಘಟ್ಟಗಳು. ವಚನ ಚಳವಳಿ ಸಂಸ್ಕೃತದಿಂದ ಬಿಡುಗಡೆ ನೀಡಿದರೆ, ವಸಾಹತುಶಾಹಿ ಧೋರಣೆಯಿಂದ ಮುಕ್ತಿ ದೊರಕಿದ್ದು 20ನೇ ಶತಮಾನದಲ್ಲಿ ಎಂದು ಪ್ರತಿಪಾದಿಸಿದರು.

ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಮಾತನಾಡಿ, ಕರ್ನಾಟಕ ಮತ್ತು ಕನ್ನಡ ಅಸ್ಮಿತೆಗೆ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳು ಐತಿಹಾಸಿಕವಾಗಿ ಗುರುತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಅದು ವಚನ ಸಾಹಿತ್ಯ, ನವೋದಯ, ನವ್ಯ, ದಲಿತ-ಬಂಡಾಯ ಚಳುವಳಿಗಳಿರಬಹುದು, ಕನ್ನಡ ಸಾಹಿತ್ಯದ ಕೃಷಿ, ಕರ್ನಾಟಕದ ಸಾಂಸ್ಕೃತಿಕ ಜಗತ್ತಿಗೆ ಅನನ್ಯವಾದ ಕೊಡುಗೆ ನೀಡಿದೆ ಎಂದರು.

ನಂತರ ನಡೆದ ಗೋಷ್ಠಿಗಳಲ್ಲಿ ಡಾ| ಬೈರಮಂಗಳ ರಾಮೇಗೌಡ, ಡಾ| ಗೀತಾ ವಸಂತ, ಡಾ| ಕೆ. ಸಿ. ಶಿವಾರೆಡ್ಡಿ, ಡಾ| ಎ. ರಘುರಾಂ ಬಿಎಂಶ್ರೀ ಸಾಹಿತ್ಯದ ವಿವಿಧ ಆಯಾಮಗಳ ಬಗ್ಗೆ ವಿಚಾರ ಮಂಡಿಸಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಬಿ.ವಿ. ವಸಂತಕುಮಾರ್‌ ಮಾತನಾಡಿದರು. ಕನ್ನಡ ಭಾರತಿ ನಿರ್ದೇಶಕ ಡಾ| ಜಿ. ಪ್ರಶಾಂತ ನಾಯಕ, ಪ್ರೊ| ಶಿವಾನಂದ ಕೆಳಗಿನಮನಿ, ಡಾ| ನೆಲ್ಲಿಕಟ್ಟೆ ಸಿದ್ದೇಶ್‌, ಮಾರ್ಷಲ್‌ ಶರಾಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.