![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 12, 2021, 11:15 AM IST
ಶಿವಮೊಗ್ಗ ಬ್ರೇಕಿಂಗ್ : ಶಿವಮೊಗ್ಗದ ಸಾಲಿಗೆರೆಯಲ್ಲಿ ಚಿರತೆ ದಾಳಿಗೆ ದನ-ಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ-ಕರು ಮೇಲೆ ಚಿರತೆ ದಾಳಿ ಮಾಡಿದೆ.
ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ- ಕರುಗಳ ಮೇಲೆ ತಡರಾತ್ರಿ ಚಿರತೆ ದಾಳಿ ಮಾಡಿದೆ. ಇನ್ನು ಸಾವನ್ನಪ್ಪಿರುವ ದನ- ಕರುಗಳು ಕೃಷ್ಣಮೂರ್ತಿ ಎಂಬುವವರಿಗೆ ಸೇರಿವೆ.
ಚಿರತೆ ದಾಳಿಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಳೆದ ತಿಂಗಳಷ್ಟೇ ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಳವಾಗಿದ್ದು, ಅರಣ್ಯಾಧಿಕಾರಿಳು ಈ ಕಡೆ ಗಮನ ಕೊಡಬೇಕಾಗಿದೆ.
You seem to have an Ad Blocker on.
To continue reading, please turn it off or whitelist Udayavani.