Shivamogga: ಚೀನ ಬೆಳ್ಳುಳ್ಳಿ: 8 ಕಡೆ ದಾಳಿ; 50 ಕೆ.ಜಿ. ವಶ
ಕಳ್ಳಮಾರ್ಗದಲ್ಲಿ ಲಗ್ಗೆ ; ಪ್ರಯೋಗಾಲಯಕ್ಕೆ ರವಾನೆ
Team Udayavani, Sep 30, 2024, 7:20 AM IST
ಶಿವಮೊಗ್ಗ: ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾ ಲಯಕ್ಕೆ ಕಳುಹಿಸಿದ್ದಾರೆ.
ಅಲಹಾಬಾದ್ ಹೈಕೋರ್ಟ್ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರ ತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾ ಧಿಕಾರದ ಅಧಿ ಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ ದಾಳಿ ನಡೆಸಿ 50 ಕೆ.ಜಿ.ಗೂ ಅಧಿಕ ಬೆಳ್ಳುಳ್ಳಿ ವಶಕ್ಕೆ ಪಡೆದಿದ್ದಾರೆ. ಪ್ರಯೋ ಗಾಲಯದ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಹಾರ ಸುರಕ್ಷೆ ಅಧಿಕಾರಿಗಳು ತಿಳಿಸಿದ್ದಾರೆ.
ಕೆ.ಜಿ.ಗೆ ಕೇವಲ 80 ರೂ.
ಸದ್ಯ ಮಾರುಕಟ್ಟೆಗಳಲ್ಲಿ ನಾಟಿ, ದೇಸಿ ಬೆಳ್ಳುಳ್ಳಿ ಕೆ.ಜಿ.ಗೆ 250-400 ರೂ. ವರೆಗೂ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಗಳಲ್ಲಿ ಕೆಲವು ವ್ಯಾಪಾರಸ್ಥರು ಚೀನ ಬೆಳ್ಳುಳ್ಳಿಯನ್ನು ದೇಶಿ ಬೆಳ್ಳುಳ್ಳಿ ಜತೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ದೂರು ಕೇಳಿಬಂದಿದೆ. ಚೀನ ಬೆಳ್ಳುಳ್ಳಿ ಕೆಜಿಗೆ 80 ರೂ. ಆಗಿದ್ದು, ಸಸ್ತಾ ಮಾಲ್ನೊಂದಿಗೆ ಲಾಭದಾಯಕ ವ್ಯಾಪಾರ ನಡೆಸಲಾಗುತ್ತಿದೆ.
ಕಿಡ್ನಿ, ಲಿವರ್ಗೆ ಹಾನಿ
ಚೀನ ಬೆಳ್ಳುಳ್ಳಿ ದಪ್ಪ ಇರುವುದರಿಂದ ಬಿಡಿಸುವುದು ಸುಲಭ. ನಾಟಿ ಬೆಳ್ಳುಳ್ಳಿ ಆಕಾರದಲ್ಲಿ ಚಿಕ್ಕದಾಗಿದ್ದು ಬಿಡಿಸುವುದು ಸ್ವಲ್ಪ ಕಷ್ಟ. ಇದಕ್ಕಾಗಿ ದೊಡ್ಡ ಗಾತ್ರದ ಬೆಳ್ಳುಳ್ಳಿಗೆ ಗೃಹಿಣಿಯರು ಮಾರು ಹೋಗುತ್ತಾರೆ. ಇನ್ನೂ ಕೆಲವರು ನಾಟಿ ಬೆಳ್ಳುಳ್ಳಿಗೆ ದರ ಹೆಚ್ಚು ಎಂಬ ಕಾರಣಕ್ಕೆ ದೊಡ್ಡ ಬೆಳ್ಳುಳ್ಳಿ ಖರೀದಿ ಮಾಡುವುದುಂಟು. ಆದರೆ ಇದರಲ್ಲಿ ರಾಸಾಯನಿಕ ಬಳಸಿರುವುದರಿಂದ ಕಿಡ್ನಿ, ಲಿವರ್ಗೆ ಹಾನಿ ಸಾಧ್ಯತೆ ಇರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಏನಿದು ಚೀನ ಬೆಳ್ಳುಳ್ಳಿ ?
-ಚೀನ ಬೆಳ್ಳುಳ್ಳಿ ನೋಡಲು ದಪ್ಪವಾಗಿದ್ದು ಎಷ್ಟು ದಿನ ಇಟ್ಟರೂ ಕೆಡುವುದಿಲ್ಲ.
-ಅತಿಯಾದ ರಾಸಾಯನಿಕ ಬಳಸುವುದ ರಿಂದ ಕಾಲಕ್ರಮೇಣ ತೂಕವನ್ನೂ ಕಳೆದುಕೊಳ್ಳುವುದಿಲ್ಲ.
-ಕೇವಲ 80 ರೂ.ಗೆ 1 ಕೆ.ಜಿ. ಸಿಗುತ್ತದೆ.
-ಇದನ್ನು ತಿಂದರೆ ಕಿಡ್ನಿ, ಲಿವರ್ಗೆ ಹಾನಿ ಖಚಿತ.
-ಇದರ ಆಮದನ್ನು ಕೇಂದ್ರ ಸರಕಾರ ನಿಷೇಧಿಸಿದೆ.
ಶಿವಮೊಗ್ಗದ 8 ಕಡೆ ದಾಳಿ ನಡೆಸಿ ವಶಪಡಿಸಿಕೊಂಡ ಬೆಳ್ಳುಳ್ಳಿಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಯ ಅನುಸಾರ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು.
-ಸದಾಶಿವಪ್ಪ, ಆಹಾರ ಸುರಕ್ಷೆ ಮತ್ತು
ಗುಣಮಟ್ಟ ಪ್ರಾ ಧಿಕಾರದ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.