ನಾಲ್ಕೈದು ತಿಂಗಳಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಬೈರತಿ
Team Udayavani, Dec 30, 2020, 7:02 PM IST
ಶಿವಮೊಗ್ಗ: ಮಾರ್ಚ್, ಏಪ್ರಿಲ್ ಒಳಗೆ ಸ್ಮಾರ್ಟ್ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದರು.
ಶಿವಮೊಗ್ಗದ ಗೋಪಾಲಗೌಡ ಕ್ರೀಡಾ ಸಂಕೀರ್ಣದಲ್ಲಿ ಸೋಮವಾರಸಂಜೆ ಸ್ಮಾರ್ಟ್ ಸಿಟಿ ಯೋಜನೆಯಡಿನಿರ್ಮಿಸಲಾಗುವ ಯೋಗಭವನ ಸೇರಿದಂತೆ ಹತ್ತಾರು ಹೊಸಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಶಿವಮೊಗ್ಗ ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಮಾರ್ಟ್ ಸಿಟಿಯೋಜನೆಯಡಿ ವಿವಿಧ ಕಾಮಗಾರಿಕೈಗೊಳ್ಳಲಾಗಿದೆ. ಕೋವಿಡ್ ಮತ್ತುಮಳೆಗಾಲದಿಂದಾಗಿ ಕಾಮಗಾರಿಗೆಹಿನ್ನಡೆಯಾಗಿತ್ತು. ಆದರೆ ಮುಂದಿನನಾಲ್ಕೈದು ತಿಂಗಳಲ್ಲಿ ಅಧಿಕಾರಿಗಳು ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳನ್ನು ಮುಗಿಸಬೇಕೆಂದು ಸೂಚಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿ ಹೊರತಾಗಿ ನಗರದ ಕೆಲವು ಬಡಾವಣೆಗಳಲ್ಲಿ ಒಳಚರಂಡಿ ಮತ್ತು ಕುಡಿಯುವನೀರಿನ ಸಮರ್ಪಕ ವ್ಯವಸ್ಥೆ ಇಲ್ಲ ಎಂಬ ಮನವಿ ಹಿನ್ನೆಲೆಯಲ್ಲಿ ಇದಕ್ಕೆ ಸುಮಾರು250 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜು ಮಾಡಲಾಗಿದೆ. ಈ ಬಗ್ಗೆ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಕೋರಿದ್ದೇನೆ. ಮುಂಬರುವಬಜೆಟ್ನಲ್ಲಿ ಈ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ನಗರದೊಳಗಿನ ಕೆಲವು ಕೆರೆಗಳ ಅಭಿವೃದ್ಧಿಮತ್ತು ಸಂರಕ್ಷಣೆ ಮಾಡಲಾಗುವುದು.ತುಂಗಾ ನದಿಗೆ ಮಲಿನ ನೀರುಬಿಡದಂತೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ನಗರ ಸುಂದರವಾಗಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸಚಿವ ಬೈರತಿ ಬಸವರಾಜ್ ಹೇಳಿದರು.
ಸಚಿವ ಕೆ.ಎಸ್. ಈಶ್ವರಪ್ಪ, ಎಂಎಲ್ಸಿ ಆರ್. ಪ್ರಸನ್ನಕುಮಾರ್, ರುದ್ರೇಗೌಡ, ಮೇಯರ್ ಸುವರ್ಣಾ ಶಂಕರ್, ಡಿ.ಎಸ್. ಅರುಣ್, ಜ್ಯೋತಿಪ್ರಕಾಶ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.