![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jul 24, 2023, 8:40 PM IST
ತೀರ್ಥಹಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ಲ್ಯಾನ್ ಮಾಡುವ ಅವಶ್ಯಕತೆ ಇಲ್ಲ. ಈ ಸರ್ಕಾರ ತಾನಾಗಿಯೇ ಬೀಳುತ್ತದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ತುಂಗಾ ನದಿಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 135 ಸೀಟ್ ಬಂದಿದೆ ಎಂಬ ಮದದಿಂದ ಸರ್ಕಾರ ಕೆಲಸ ಮಾಡುತ್ತಿದೆ. ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಬಿ. ಕೆ.ಹರಿಪ್ರಸಾದ್ ಅವರೇ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ.
ಮುಂದಿನ ದಿನಗಳಲ್ಲಿ ಆ ರೀತಿಯಾದ ಕೂಗು ಜಾಸ್ತಿ ಆಗಲಿದೆ. ಕಾಂಗ್ರೆಸ್ ಸರ್ಕಾರ ತಾನಾಗಿಯೇ ಬಿದ್ದು ಹೋಗಲಿದೆ. ಬಜೆಟ್ನಲ್ಲಿ 37 ಕಡೆ ಹಿಂದಿನ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೈದಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರ ಎಷ್ಟು ಒಳ್ಳೆಯ ಕೆಲಸ ಮಾಡಿದೆ ಎಂದು ಎಲ್ಲರಿಗೂ ಗೊತ್ತಿದೆ.
ಮಣಿಪುರ ಪ್ರಕರಣ ಕುರಿತು ಕೇಂದ್ರ ಸರ್ಕಾರ ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳುತ್ತಿದೆ. ಜನರನ್ನು ಕೊಲ್ಲುವ ಸ್ಥಿತಿಗೆ ಹೋಗದೆ ಅತ್ಯಂತ ಶಾಂತ ರೀತಿಯಲ್ಲಿ ಪರಿಹಾರ ಮಾಡುವಂತಹ ಕೆಲಸ ಆಗುತ್ತಿದೆ. ಬೇರೆ ಬೇರೆ ಶಕ್ತಿಗಳು ಅದರ ಹಿಂದೆ ನಿಂತು ಆಟ ಆಡುತ್ತಿವೆ. ಸದ್ಯದಲ್ಲೇ ಎಲ್ಲವೂ ಹೊರಬರಲಿದೆ. ಈಗಾಗಲೇ ಪ್ರಧಾನಿ ಮೋದಿ ಕೂಡ ತಿಳಿಸಿದ್ದಾರೆ. ಯಾರನ್ನೂ ಕೂಡ ಬಿಡುವುದಿಲ್ಲ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.