Congress Govt. ಬಂದು 16 ತಿಂಗಳಾದರೂ 16 ಪೈಸೆ ಕೂಡ ಅಭಿವೃದ್ಧಿಗಾಗಿ ಬಂದಿಲ್ಲ: ಆರಗ
Team Udayavani, Sep 2, 2024, 4:45 PM IST
ತೀರ್ಥಹಳ್ಳಿ : ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಆದರೆ ಎಷ್ಟೋ ಜನರಿಗೆ ಯೋಜನೆಗಳು ತಲುಪಿಲ್ಲ. ಕೇಳಿದರೆ ಟೆಕ್ನಿಕಲ್ ಸಮಸ್ಯೆ ಇದೆ ಎಂದು ಹೇಳುತ್ತಾರೆ. ಟೆಕ್ನಿಕಲ್ ಸಮಸ್ಯೆ ಏನೆಂದರೆ ಹಣ ಇಲ್ಲ ಖಜಾನೆ ಖಾಲಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 16 ತಿಂಗಳಾದರೂ 16 ಪೈಸೆ ಕೂಡ ಅಭಿವೃದ್ಧಿಗಾಗಿ ಬಂದಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದ ವಿದ್ಯಾಧಿರಾಜ ಸಭಾಭವನದಲ್ಲಿ ಬಿಜೆಪಿ ವತಿಯಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿ
ಇವತ್ತು ರಾಜ್ಯದಲ್ಲಿ ಅತಿವೃಷ್ಟಿ ಆಗಿದೆ, ಪ್ರವಾಹ ಆಗಿದೆ ಆದರೆ ಸರ್ಕಾರದ ಬಳಿ ಪರಿಹಾರ ಕೊಡಲು ಒಂದು ಪೈಸೆ ಇಲ್ಲ.ಮಲೆನಾಡಿನಲ್ಲಿ ಅಡಿಕೆ ಬೆಳೆ ಹಾಳಾಗಿ ಹೋಗಿದೆ. ಬೆಳೆಗಳು ನಷ್ಟವಾಗಿವೆ. ಇದರ ಬಗ್ಗೆ ಅಂಕಿ ಸಂಖ್ಯೆಯನ್ನು ತಾಲೂಕು ಕಚೇರಿಯಲ್ಲಿ ಕೇಳಿದರೆ ಅಪ್ಲೋಡ್ ಮಾಡಿಲ್ಲ ಎಂದು ಹೇಳುತ್ತಾರೆ. ಯಾವ ಜಮೀನಿಗೂ ಪರಿಹಾರ ಕೊಡಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಇಂದಿನ ಸರ್ಕಾರ ಬಂದು ನಿಂತಿದೆ. ಎಂದರು.
ಮೊದಲು ಬಿಜೆಪಿ ಸರ್ಕಾರ ಇದ್ದಾಗ 5 ಲಕ್ಷ ಹಣ ಪರಿಹಾರ ಬರುತ್ತಿತ್ತು ಆದರೆ ಈಗ 1 ಲಕ್ಷ ಕೊಟ್ಟರೆ ಹೆಚ್ಚು. ಕಾಂಗ್ರೆಸ್ ಸರ್ಕಾರದ ಪೊಳ್ಳು ಹೇಳಿಕೆಯನ್ನು ತಿರಸ್ಕಾರ ಮಾಡಬೇಕಿದೆ. ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ನಾವು ನಮ್ಮ ಬಲವನ್ನು ಹೆಚ್ಚು ಮಾಡಿಕೊಳ್ಳಬೇಕು. ಮುಡಾ ಹಗರಣದಲ್ಲಿ ರಾಜ್ಯಪಾಲರ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ರಾಜ್ಯಪಾಲರು ಸಿದ್ದರಾಮಯ್ಯನವರನ್ನು ಆರೋಪಿ ಎಂದು ಹೇಳಿಲ್ಲ. ಆದರೆ ತನಿಖೆ ನಡೆಸಲು ಅನುಮತಿ ಹೇಳಿದ್ದು ಅಷ್ಟೇ. ಯಾರಿಗೆ ಆದರೂ ನ್ಯಾಯ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.