ವ್ಯಕ್ತಿ ಪೂಜೆಗೆ ನಾನು ಸಿದ್ದನಿಲ್ಲ ಪಕ್ಷದ ಆಂತರಿಕ ಪೂಜೆಗೆ ನಾನು ಸಿದ್ದ: ಮಂಜುನಾಥ ಗೌಡ


Team Udayavani, Jul 26, 2022, 8:19 PM IST

tdy-4

ತೀರ್ಥಹಳ್ಳಿ : ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಸವಿ ನೆನಪಿನಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ಸೂಚನೆಯಂತೆ ಪ್ರತಿ ಜಿಲ್ಲೆಯಲ್ಲೂ 75 ಕಿ.ಮೀ. ಪಾದಯಾತ್ರೆಯನ್ನು ಕಾಂಗ್ರೆಸ್ ಸಹಕಾರಿ ವಿಭಾಗದಿಂದ ಆಯೋಜಿಸಲಾಗಿದ್ದು, ಅದರಂತೆ ತಾಲೂಕಿನ  ಹಾರೊಗೊಳಿಗೆಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನೆಡೆಯಲಿದೆ. ಇದೊಂದು ತೀರ್ಥಹಳ್ಳಿಯಲ್ಲಿ ಐತಿಹಾಸಿಕ ಪಾದಯಾತ್ರೆಯಾಗಲಿದೆ ಎಂದು ಕಾಂಗ್ರೆಸ್‌ ನಾಯಕ  ಆರ್ ಎಂ ಮಂಜುನಾಥ ಗೌಡ ಹೇಳಿದರು.

ಪಟ್ಟಣದ ಬೆಟ್ಟಮಕ್ಕಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಕೆಪಿಸಿಸಿ ಸೂಚನೆಯಂತೆ ಪಾದಯಾತ್ರೆ ನೆಡೆಸಲು ತೀರ್ಮಾನಿಸಿದ್ದೇವೆ. ಕಾಂಗ್ರೆಸ್ ಪಕ್ಷದ ಹಿತ ದೃಷ್ಟಿಗಾಗಿ ಪಾದಯಾತ್ರೆ ಮಾಡೇ ಮಾಡುತ್ತೇವೆ. ವ್ಯಕ್ತಿ ಪೂಜೆಗೆ ನಾನು ಸಿದ್ಧನಿಲ್ಲ ಪಕ್ಷದ ಆಂತರಿಕ ಪೂಜೆಗೆ ನಾನು ಸಿದ್ದ. ಕಾಂಗ್ರೆಸ್ ಕಟ್ಟುವ ನಿಟ್ಟಿನಲ್ಲಿ ಈ ಪಾದಯಾತ್ರೆ ಕೈಗೊಂಡಿದ್ದೇವೆ. ಯಾವ ವ್ಯಕ್ತಿ ನನಗೆ ಗೌರವ ಕೊಡುವುದಿಲ್ಲವೋ ಅವರಿಗೆ ನಾನು ಕೂಡ ಗೌರವ ಕೊಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರೆಲ್ಲರಿಗೂ ನಾನು ಪತ್ರ ಬರೆಯಲಿದ್ದೇನೆ. ಕಿಮ್ಮನೆ ರತ್ನಾಕರ್ ಅವರು ಕಾಂಗ್ರೆಸ್ ಪಕ್ಷದ ಹೆಸರು ಹಾಗೂ ಚಿಹ್ನೆ ಬಳಸಿಲ್ಲ ಎಂದಿದ್ದಾರೆ ಆದರೆ ನಾವು ಆ ರೀತಿ ಮಾಡಿಲ್ಲ ಎಂದು ಪತ್ರವನ್ನು ತೋರಿಸಿದರು.

ತೀರ್ಥಹಳ್ಳಿಯ ಸೊ ಕಾಲ್ಡ್ ಮಾಜಿ ಸಚಿವರು ಸೋಮವಾರ ಪತ್ರವೊಂದನ್ನು ಬರೆದಿದ್ದಾರೆ ಆ ರೀತಿ ಪತ್ರ ನನಗೂ ಸಹ ಬರೆಯಲು ಬರುತ್ತದೆ. ಆದರೆ ಆ ರೀತಿ ಮಾಡಿದರೆ ನನಗೂ ಅವರಿಗೂ ವ್ಯತ್ಯಾಸವಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಪ್ರತಿಯೊಂದು ಕೆಲಸಕ್ಕೂ ನಾನಿದ್ದೇನೆ ಆದರೆ ಟಿಕೆಟ್ ಕೊಡಿ ಎಂದು ಕೇಳಿಲ್ಲ ಆದರೆ ನಾನೊಬ್ಬ ಆಕಾಂಕ್ಷಿ ಹೌದು ಎಂದರು.

ಕೇಂದ್ರ, ರಾಜ್ಯ, ಹಾಗೂ ತಾಲೂಕಿನಲ್ಲಿ ಬಿಜೆಪಿ ಪಕ್ಷವಿದ್ದರೂ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರೆ ಅದಕ್ಕೆ ಕಾರ್ಯಕರ್ತರು ಕಾರಣ ಅವರಿಗೆ ನೋವಾಗುವ ರೀತಿ ಮಾಡಬಾರದು. ಕಾಂಗ್ರೆಸ್ ಪಕ್ಷದಲ್ಲಿ ನಾನೊಬ್ಬನೇ, 224 ಕ್ಷೇತ್ರದಲ್ಲೂ ನಾನೇ ಎಂದು ಹೇಳುವ ವ್ಯಕ್ತಿ ನಾನಲ್ಲ. ಯಾರು ಏನೇ ಹೇಳಿದರು ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಮತ್ತು ಸೋಮವಾರ ಮಾಜಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಸಭೆ ನೆಡೆದಿದೆ ಆದರೆ ನಮಗೆ ಅದಕ್ಕೆ ಅಹ್ವಾನ ನೀಡಿಲ್ಲ ಎಂದು ಆರ್ ಎಂ ಮಂಜುನಾಥ ಗೌಡ ತಿಳಿಸಿದರು.

ಡಿಕೆಶಿ – ಸಿದ್ದರಾಮಯ್ಯ ನಡುವೆ ನೆಡೆಯುತ್ತಿರುವ ಸಮರದ ಹಾಗೆ ತೀರ್ಥಹಳ್ಳಿಯಲ್ಲೂ ನೆಡೆಯುತ್ತಿದೆಯಾ ಎಂಬ ಪತ್ರಕರ್ತರ ಪ್ರೆಶ್ನೆಗೆ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಹಾಗೆ ಏನಿಲ್ಲ ಅವರಿಬ್ಬರೂ ಹೊಂದಾಣಿಕೆಯಿಂದಲೇ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಎಂಬ ಅಹಂಕಾರ ಪಕ್ಷದಲ್ಲಿ ಬರಬಾರದು :

ಕಸ್ತೂರಿ ರಂಗನ್ ವರದಿ, ಬಗರ್ ಹುಕುಂ, ಶರಾವತಿ ಹೋರಾಟ ಸೇರಿ ಹಲವು ಹೋರಾಟಗಳಲ್ಲಿ ಪಕ್ಷಾತೀತವಾಗಿ ನಾನು ಹೋರಾಟ ಮಾಡಿದ್ದೇನೆ. ಆದರೆ ನಾನು ಎಲ್ಲಿಯೂ ನಾನು ನಾನು ಎಂದು ಹೇಳಿಕೊಂಡಿಲ್ಲ ಎಂದು ಟಾಂಗ್ ಕೊಟ್ಟರು.

ಈ ಸಂದರ್ಭದಲ್ಲಿ ಡಾ. ಸುಂದರೇಶ್, ಹಾರೊಗೊಳಿಗೆ ಪದ್ಭಾನಾಬ್, ಶಿವಕುಮಾರ್,  ವೈ ಎಚ್ ನಾಗರಾಜ್, ಕಡಿದಾಳ್ ತಾರಾನಾಥ್, ಅಮಿರ್ ಹಂಜ, ಬಿ ಆರ್ ಪಿ ರಮೇಶ್, ಶಬನಮ್, ಕೃಷಮೂರ್ತಿ ಭಟ್, ಗೀತಾ ರಮೇಶ್, ಅಸಾದಿ, ಸುಶೀಲ ಶೆಟ್ಟಿ, ದತ್ತಣ್ಣ, ಮಂಜುಳಾ ನಾಗೇಂದ್ರ, ರಾಮ ಶೆಟ್ಟಿ, ರಾಘವೇಂದ್ರ, ಕರಿಮನೆ ಮಧುಕರ್ ಕುರುವಳ್ಳಿ ನಾಗರಾಜ್, ರಫಿ ಬೆಟ್ಟಮಕ್ಕಿ, ಮಂಜುನಾಥ್ ಶೆಟ್ಟಿ,  ರಾಘವೇಂದ್ರ ಶೆಟ್ಟಿ, ವಿಕ್ರಂ ಶೆಟ್ಟಿ, ಯಡೂರ್ ಚೇತನ್, ಅಶ್ವತ್ ಗೌಡ ಕೊಂಡ್ಲುರ್, ಸಂದರ್ಶ ಮೇಗರವಳ್ಳಿ, ರಾಮ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.