ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ; ಕಾಂಗ್ರೆಸ್ ಸದಸ್ಯೆ ಪ್ರತಿಭಟನೆ


Team Udayavani, Jun 8, 2022, 5:01 PM IST

ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ; ಕಾಂಗ್ರೆಸ್ ಸದಸ್ಯೆ ಪ್ರತಿಭಟನೆ

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಧುಮಾಲತಿ ಕಲ್ಲಪ್ಪ, ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತೆ ಆಗಿದೆ. ನಮ್ಮ ವಾರ್ಡ್‌ನ ಸಾರ್ವಜನಿಕರೊಬ್ಬರು ಫಾರಂ ನಂ. 3 ಕೊಡಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಖಾತೆದಾರರಿಗೆ ನೀರಿನ ಕಂದಾಯ, ಮನೆ ಕಂದಾಯ ಪಾವತಿ ಮಾಡುವಂತೆ ತಿಳಿಸಲಾಗಿತ್ತು. ಅದೆಲ್ಲವನ್ನೂ ಪಾವತಿ ಮಾಡಿ ಫಾರಂ ನಂ. 3 ಕೊಡುವಂತೆ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಮನವಿ ಮಾಡಲಾಗಿತ್ತು. ವ್ಯವಸ್ಥಾಪಕ ವೆಂಕಟೇಶ್ ಈ-ಸ್ವತ್ತು ಮಾಡಿಸಿದರೆ ಮಾತ್ರ ಫಾರಂ ನಂ. ೩ ಕೊಡುವುದಾಗಿ ತಿಳಿಸಿದರು. ನಾನು ಅಂತಹ ಸರ್ಕಾರಿ ಆದೇಶವಿದ್ದರೆ ಕೊಡಿ ಎಂದು ಕೇಳಿದ್ದೇನೆ. ಆಗ ವ್ಯವಸ್ಥಾಪಕ ವೆಂಕಟೇಶ್ ಅವರು ಸರ್ಕಾರಿ ಆದೇಶವಲ್ಲ, ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಹೇಳಿದರು. ನಾನು ಜಿಲ್ಲಾಧಿಕಾರಿಗಳ ಸುತ್ತೋಲೆ ತೋರಿಸಿ ಎಂದು ಕೇಳಿದಾಗ ವೆಂಕಟೇಶ್ ಅವರು ನಾನು ಸದಸ್ಯೆ ಎನ್ನುವುದನ್ನು ಸಹ ನೋಡದೆ ದಬಾಯಿಸಿದ್ದಾರೆ ಎಂದು ದೂರಿದರು.

ನಾನು ಐದಾರು ಬಾರಿ ನಗರಸಭೆಗೆ ಅಲೆದಾಡಿದರೂ ಸಿಗದ ಫಾರಂ ನಂ. 3 ಒಬ್ಬ ಮೇಸ್ತ್ರಿ ತಂದು ನಮ್ಮ ವಾರ್ಡ್‌ನ ಖಾತೆದಾರರಿಗೆ ಕೊಟ್ಟಿದ್ದಾರೆ. ಹಾಗಾದರೆ ನಗರಸಭೆ ಸದಸ್ಯರ ಮಾತಿಗೆ ಬೆಲೆ ಇಲ್ಲವೆ ಎಂದು ಪ್ರಶ್ನಿಸಿದ ಅವರು, ನಗರಸಭೆಯಲ್ಲಿ ಹಣ ಕೊಟ್ಟರೆ ಏನು ಬೇಕಾದರೂ ಮಾಡಿ ಕೊಡುತ್ತಾರೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆ ಇಲ್ಲದಂತೆ ಆಗಿದೆ. ಸದಸ್ಯರಿಗೆ ಆಗುತ್ತಿರುವ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರು ಮತ್ತು ನಗರಸಭೆ ಅಧ್ಯಕ್ಷರು ಸ್ಥಳಕ್ಕೆ ಬಂದು ನ್ಯಾಯ ಕೊಡಿಸುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದು ಕುಳಿತುಕೊಂಡರು.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ

ಕ್ರಮದ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಚುನಾಯಿತ ಪ್ರತಿನಿಧಿಗಳಿಗೆ ಅಗೌರವ ತರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಮುಂದೆ ಇಂತಹ ಘಟನೆ ನಡೆಯದಂತೆ ಗಮನ ಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ನಗರಸಭೆ ಸದಸ್ಯರಾದ ಸೈಯದ್ ಜಾಕೀರ್, ಶಂಕರ್ ಅಳ್ವಿಕೋಡು, ಭಾವನಾ ಸಂತೋಷ್, ಸತೀಶ್ ಕೆ., ಪೌರಾಯುಕ್ತ ರಾಜು ಬಣಕಾರ್, ಪ್ರಮುಖರಾದ ಅನ್ವರ್ ಭಾಷಾ, ತಾರಾಮೂರ್ತಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.