ಪಾದಯಾತ್ರೆಯಿಂದ ಜನಕ್ಕೆ ನೀರು ಸಿಗಲ್ಲ, ಕೋವಿಡ್ ಸಿಗುತ್ತದೆ: ಸಚಿವ ಈಶ್ವರಪ್ಪ
Team Udayavani, Jan 10, 2022, 2:43 PM IST
ಶಿವಮೊಗ್ಗ: ಕಾಂಗ್ರೆಸ್ ನವರ ಈ ಪಾದಯಾತ್ರೆಯಿಂದ ಜನರಿಗೆ ಒಳ್ಳೆಯದಾಗುವುದಿಲ್ಲ. ನೀರು ಸಿಗಲ್ಲ ಆದರೆ ಕೋವಿಡ್ ಸಿಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ತಾನು ಚಾಂಪಿಯನ್ ಆಗಬೇಕು, ಸಿಎಂ ಅಗಬೇಕು ಎನ್ನುವ ಲೆಕ್ಕದಲ್ಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೂ ಕೋವಿಡ್ ಹೆಚ್ಚುವ ಅಧಿಕಾರವನ್ನು ಸೋನಿಯಾ ಗಾಂಧಿ ಕೊಟ್ರಾ? ನೀವು ಸಿಎಂ ಆಗುವ ಭ್ರಮೆಯಲ್ಲಿ ರಾಜ್ಯದ ಜನರಿಗೆ ಕೋವಿಡ್ ಹರಡುವ ಪ್ರಯತ್ನ ಒಳ್ಳೆಯದು ಮಾಡಲ್ಲ. ಮೊದಲನೆಯದಾಗಿ ನೀವು ಸಿಎಂ ಆಗುವುದೇ ಕನಸು ಎಂದು ವ್ಯಂಗ್ಯವಾಡಿದರು.
ನೀರು ಕೊಡುವ ಬದಲು ರಾಜ್ಯದ ಜನರಿಗೆ ಕೋವಿಡ್ ಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಜ್ವರ ಅಂತಾ ಸುಸ್ತಾಗಿ ವಾಪಾಸ್ ಬಂದಿದ್ದಾರೆ. ಅವರು ಯಾವುದೇ ಪಕ್ಷದವರು ಇರಬಹುದು. ಆರೋಗ್ಯ ಬಹಳ ಮುಖ್ಯ. ಇದೇ ಉದ್ದೇಶದಿಂದಲೇ ಕಾಂಗ್ರೆಸ್ ನವರಿಗೆ ಪ್ರಾರ್ಥನೆ ಮಾಡುತ್ತಾ ಬಂದಿದ್ದೇನೆ. ಅವರಿಗೆ ರಾಜಕೀಯವೇ ಮುಖ್ಯವಾಗಿದೆ. ರಾಜ್ಯದ ಜನರಿಗೆ ಕೋವಿಡ್ ಹರಡುವುದನ್ನು ನಾನು ಖಂಡಿಸುತ್ತೇನೆ ಎಂದರು.
ಇದನ್ನೂ ಓದಿ:ಮೇಕೆದಾಟು ಪಾದಯಾತ್ರೆ ವೇಳೆ ನೂಕು ನುಗ್ಗಲು; ಬಸವಳಿದ ಡಿಕೆ ಶಿವಕುಮಾರ್
ಮೇಕೆದಾಟು ಹೆಸರಿನಲ್ಲಿ ಮಾಡುತ್ತಿರುವರಾಜಕಾರಣದಲ್ಲಿ ಜನಜಾತ್ರೆಯಾಗುತ್ತಿದೆ. ಜಿ.ಪಂ., ತಾಪಂ, ಅಸೆಂಬ್ಲಿ ಚುನಾವಣೆ ಟಿಕೆಟ್ ಗಾಗಿ ಡಿಕೆ ಶಿವಕುಮಾರ್ ಮುಂದೆ ಶೋ ತೋರಿಸಲು ಹೋಗಿದ್ದಾರೆ. ಇಂತಹ ಭ್ರಮೆಯಲ್ಲಿ ಏಳೆಂಟು ಸಾವಿರ ಜನರು ರಾಜ್ಯದ ಎಲ್ಲಾ ಭಾಗದಿಂದ ಹೋಗಿದ್ದಾರೆ. ಪಾದಯಾತ್ರೆಗೆ ಹೋಗಿ ಬಂದವರು ಇಡೀ ರಾಜ್ಯಕ್ಕೆ ಕೋವಿಡ್ ಹಚ್ಚುತ್ತಾರೆ. ಸ್ವತಃ ಡಿ.ಕೆ.ಶಿವಕುಮಾರ್ ಮಾಸ್ಕ್ ಹಾಕುತ್ತಿಲ್ಲ. ಅಂತರ ಇಲ್ಲ. ನೀತಿ- ನಿಯಮ ಪಾಲಿಸುತ್ತಿಲ್ಲ. ಇದರ ಮಧ್ಯ ಅರೇಸ್ಟ್ ಮಾಡ್ಕೋಳ್ಳಿ ಎಂದು ಪೌರುಷದ ಮಾತು ಬೇರೆ ಆಡುತ್ತಾರೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.