![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 15, 2020, 2:17 PM IST
ಶಿವಮೊಗ್ಗ: ಇಂದು ಪರಿಷತ್ ನಲ್ಲಿನಡೆದ ಘಟನೆ ದುರಾದೃಷ್ಟಕರ. ಎಂದೂ ಇಂಥ ಘಟನೆಗಳು ನಡೆಯಬಾರದು. ಇಂದಿನ ಘಟನೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಆರಂಭದಲ್ಲಿ ಮಾಡಿದ ತಪ್ಪಿನಿಂದಾಗಿ ಇಂಥ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಈ ರೀತಿಯ ಪ್ರವೃತ್ತಿ ನಡೆಸಿಕೊಂಡು ಬಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಕಲಾಪದಲ್ಲಿಂದು ನಡೆದ ತಳ್ಳಾಟ ಘಟನೆಯನ್ನು ಟೀಕಿಸಿದರು.
ಈ ಹಿಂದೆ ನಾನು ಸಭಾಪತಿಯಾಗಿದ್ದಾಗಲೂ ಇದೇ ಪರಿಸ್ಥಿತಿ ಅನುಭವಿಸಿದ್ದೆ. ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆಗ ನಾನು ಸಭಾಪತಿ ಸ್ಥಾನದಿಂದ ಕೆಳಗಿಳಿದು ಬಂದು ಕುಳಿತು ಆ ಸ್ಥಾನದಲ್ಲಿ ಉಪಸಭಾಪತಿಯನ್ನು ಕೂರಿಸಿದ್ದೆ. ಬಳಿಕ ಚುನಾವಣೆ ನಡೆದು ನನಗೆ ಬಹುಮತ ಸಿಕ್ಕಿದಾಗ ಮತ್ತೆ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೆ ಎಂದು ಇಂದಿನ ಬಿಜೆಪಿ ನಡೆಯನ್ನು ಸಮರ್ಥಿಸಿಕೊಂಡರು.
ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು
ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುವುದು ತಮ್ಮ ಆಜನ್ಮ ಸಿದ್ಧ ಹಕ್ಕು ಎಂದುಕೊಂಡಿದ್ದಾರೆ. ನೆಹರೂ ಕುಟುಂಬದವರು ಹಾಗೂ ವಂಶ ಪಾರಂಪರ್ಯವಾಗಿ ಅಧಿಕಾರ ನಡೆಸಬೇಕು ಎಂಬ ಮನೋಭಾವ ಕಾಂಗ್ರೆಸ್ ನವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.