ಬಿಜೆಪಿ ದೃಷ್ಟಿಯಲ್ಲಿ ದಲಿತರು ಹಿಂದೂಗಳಲ್ವಾ?: ಕಿಮ್ಮನೆ ಪ್ರೆಶ್ನೆ


Team Udayavani, Sep 7, 2022, 6:19 PM IST

1-sdsdsad

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರ ಜೊತೆ ಒಟ್ಟಾಗಿ ಹೋಗುತ್ತೇವೆ ಎಂದು ಹೇಳುವ ಕಾರಣಕ್ಕೆ ಜನ ನಂಬದೆ ಇರಬಹುದು ಆದರೆ ಬಿಜೆಪಿ ಪಕ್ಷ ನಮಗೆ ಆ ಸಮುದಾಯದ ಮತವೇ ಬೇಡ ಎಂದು ಹೇಳುತ್ತಾರೆ ಇದರಿಂದಾಗಿ ಕೋಮು ಗಲಭೆ ಹೆಚ್ಚುವುದಿಲ್ಲವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಹೋರಾಟ ಮಾಡುತ್ತಾರೆ ಈದ್ಗಾ ಮೈದಾನದಲ್ಲಿ ಗಣಪತಿ ವಿಚಾರಕ್ಕೆ ಹೋರಾಟ ಮಾಡ್ತಾರೆ ಅದರ ಅವಶ್ಯಕತೆ ಏನಿದೆ ? ಹಸಿವಿನಿಂದ ಜನರು ಸಾಯ್ತಾ ಇದ್ದಾರೆ, ಮಳೆಯಿಂದ ಜನರು ಸಂಕಷ್ಟಕ್ಕಿಡಾಗಿದ್ದಾರೆ ಇದಕ್ಕೆ ಬಿಜೆಪಿ ಹೋರಾಟ ಮಾಡುವುದಿಲ್ಲ ಯಾಕೆ ? ಹಲವು ದಿನಗಳಿಂದ ಕರ್ನಾಟಕದಲ್ಲಿ ಕೋಮುಗಲಭೆ ನೆಡೆಯುತ್ತಿದೆ ಇದರ ಬಗ್ಗೆ ಪ್ರಧಾನಿ ಮೋದಿ ಏನಾದರೂ ಮಾತನಾಡಿದರೆ ಎಂದು ಪ್ರೆಶ್ನಿಸಿದರು.

ಬಿಜೆಪಿಯವರು ಹಿಂದೂ ಮುಸ್ಲಿಂ ನಡುವೆ ಗಲಾಟೆ ಅಲ್ಲ ಅದು ದಲಿತರು ಮತ್ತು ಮುಸ್ಲಿಂ ಮದ್ಯೆ ಗಲಾಟೆ ಎನ್ನುತ್ತಾರೆ. ಹಾಗಾದರೆ ಬಿಜೆಪಿ ದೃಷ್ಟಿಯಲ್ಲಿ ದಲಿತರು ಹಿಂದೂಗಳಲ್ವಾ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿ ಪಕ್ಷವೇ ಉಳಿದುಕೊಂಡರೆ ಈ ದೇಶ ಒಂದು ದೇಶವಾಗಿ ಉಳಿಯುವುದಿಲ್ಲ. ಜಾತಿ, ಮತ ಎಂದು ವಿಭಜನೆ ಮಾಡುತ್ತಿರುವ ಪಕ್ಷವನ್ನು ಜನರು ಕಿತ್ತೊಗೆಯಬೇಕು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಎಚ್. ಎಸ್. ಸುಂದರೇಶ್ ಮಾತನಾಡಿ, ಈ ದೇಶದಲ್ಲಿ ಕೋಮು ಗಲಭೆಯನ್ನು ಹುಟ್ಟಿಸಿರುವ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ವಿಷಯಗಳ ಬಗ್ಗೆ ಜನರಿಗೆ ಸತ್ಯ ಸಂಗತಿಯನ್ನು ಮುಟ್ಟಿಸುವ ಸಲುವಾಗಿ ”ಭಾರತ್ ಜೋಡೋ” ಕಾರ್ಯಕ್ರಮ ಆರಂಭವಾಗಿದೆ. ಕನ್ಯಾಕುಮಾರಿ ಇಂದ ರಾಹುಲ್ ಗಾಂಧಿ ನೇತೃತ್ವದಲ್ಲಿ 350 ಕಿಮೀ ಪಾದಯಾತ್ರೆ ನೆಡೆಯಲಿದ್ದು ಹಲವು ಮುಖಂಡರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದುತಿಳಿಸಿದರು.

ದೇಶದ ಏಕತೆಗಾಗಿ ಈ ಭಾರತ್ ಜೋಡೋ ಕಾರ್ಯಕ್ರಮ ನೆಡೆಯಲಿದ್ದು ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಈ ಭಾರತ್ ಜೋಡೋ ಪಾದಯಾತ್ರೆ ನೆಡೆಯಲಿದೆ. ಗುಂಡ್ಲುಪೇಟೆಯಿಂದ ಆರಂಭವಾಗಿ ಬಳ್ಳಾರಿಯಲ್ಲಿ ಮುಗಿಯಲಿದೆ. ಇಡೀ ದೇಶದಲ್ಲಿ ಆರಾಜಕತೆ ಸೃಷ್ಟಿಯಾಗಿದ್ದು ಬಿಜೆಪಿ ಸರ್ಕಾರದ ಆಡಳಿತದಿಂದ ದೇಶದ ಜನ ಬೇಸತ್ತು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದರು.

ಪ್ರತಿ ಜಿಲ್ಲಾ ಮಟ್ಟದಲ್ಲಿ ಮಹಾತ್ಮಾ ಗಾಂಧಿ ಬಂದಂತಹ ಕ್ಷೇತ್ರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ತಿಳಿಸಿದ್ದರಿಂದ ತೀರ್ಥಹಳ್ಳಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಶಿವಮೊಗ್ಗದಲ್ಲೂ ಕೂಡ ಪಾದಯಾತ್ರೆ ನೆಡೆಯಲಿದೆ. ರಾಹುಲ್ ಗಾಂಧಿ ಅವರ ಜತೆ ಇಲ್ಲಿನ ಮುಖಂಡರು 25 ಕಿಮೀ ಪಾದಯಾತ್ರೆ ನೆಡೆಸಲಿದ್ದೇವೆ ಎಂದರು.

ಮಧು ಬಂಗಾರಪ್ಪ ಮಾತನಾಡಿ, ದೇಶಾದ್ಯಂತ ಒಂದು ಐತಿಹಾಸಿಕ ಕಾರ್ಯಕ್ರಮ ನೆಡೆಯುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದು ಇದೊಂದು ಒಳ್ಳೆ ಕಾರ್ಯಕ್ರಮವಾಗಿದೆ. ದೇಶದ ಪರಿಸ್ಥಿತಿ ನೋಡಿದರೆ ಈ ಜೋಡೋ ಕಾರ್ಯಕ್ರಮ ಅವಶ್ಯಕತೆ ಇದೆ. ಮಹಾತ್ಮಾ ಗಾಂಧಿ ಸ್ವಾತಂತ್ರ್ಯಕ್ಕಾಗಿ ಪಾದಯಾತ್ರೆ ಮಾಡಿದ್ದರು. ಈಗ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಪಾದಯಾತ್ರೆ ನೆಡೆಯಲಿದೆ. ಬಿಜೆಪಿ ಸರ್ಕಾರದ ಆಡಳಿತ ಸಂಪೂರ್ಣ ಹದಗೆಟ್ಟಿದೆ ಈ ಕಾರಣಕ್ಕೆ ಜನರಿಗೆ ಸ್ವಾತಂತ್ರ್ಯ ಇಲ್ಲದ ಹಾಗಾಗಿದೆ ಮತ್ತೊಮ್ಮೆ ಈ ಕಾರ್ಯಕ್ರಮದಿಂದಾಗಿ ಸ್ವಾತಂತ್ರ್ಯ ಸಿಗಲಿದೆ ಎಂಬ ವಿಶ್ವಾಸ ಇದೆ ಎಂದರು.

ಶಿವಮೊಗ್ಗ ಮಾಜಿ ಎಂ ಎಲ್ ಸಿ ಆರ್ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ಕೆಸ್ತೂರು ಮಂಜುನಾಥ್, ಕಡ್ತೂರು ದಿನೇಶ್, ಮೂಡುಬಾ ರಾಘವೇಂದ್ರ, ವಿಲಿಯಮ್ಸ್, ಪಟಮಕ್ಕಿ ಮಹಾಬಲೇಶ್, ಅಮರನಾಥ್ ಶೆಟ್ಟಿ, ಪುಟ್ಳೊಡು ರಾಘವೇಂದ್ರ, ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

16

Sagara: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

shimohga

Shimoga: ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.