125ಕ್ಕೂ ಹೆಚ್ಚು ಕುರಿಗಳ ಸಾವು-ಪರಿಶೀಲನೆ
ಬಡ ಕುರಿಗಾಹಿಗಳಿಗೆ ಅನ್ಯಾಯವಾಗಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.
Team Udayavani, Oct 27, 2021, 8:05 PM IST
ಶಿವಮೊಗ್ಗ: ನಗರದ ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಮುಂಭಾಗ ಚಿಕ್ಕೋಡಿ ಭಾಗದ ಸಂಚಾರಿ ಕುರುಬರು ಟೆಂಟ್ಗಳನ್ನು ಹಾಕಿಕೊಂಡಿದ್ದು, ಕಳೆದೆರಡು ದಿನಗಳಿಂದ ಸುಮಾರು 125ಕ್ಕೂ ಹೆಚ್ಚು ಕುರಿಗಳು ನಿಗೂಢ ಕಾರಣದಿಂದ ಸಾವು ಕಂಡಿದ್ದು, ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸತ್ತ ಕುರಿಗಳ ರಕ್ತದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ನಷ್ಟಕ್ಕೊಳಗಾದ ಕುರಿಗಾಹಿಗಳಿಗೆ ಸಾಂತ್ವನ ಹೇಳಿದರು. ನಂತರ ಪ್ರತಿಕ್ರಿಯಿಸಿದ ಅವರು, ಕುರಿಗಳ ಸಾವಿನಿಂದ ಕುರಿಗಾಹಿಗಳಾದ ವಾಸಪ್ಪ ಮಾನೆ ಮತ್ತು ಅವರ ಕುಟುಂಬ ಆತಂಕಕ್ಕೀಡಾಗಿದ್ದು, ನಿನ್ನೆ ಅಧಿ ಕಾರಿಗಳ ಗಮನಕ್ಕೆ ತಂದರೂ ಯಾರೂ ಸ್ಪಂದಿಸಿರಲಿಲ್ಲ. ಇದರಿಂದ ಬಡ ಕುರಿಗಾಹಿಗಳಿಗೆ ಅನ್ಯಾಯವಾಗಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದಾರೆ.
ಹಿಂದೆ ಸರ್ಕಾರದ ಅನುಗ್ರಹ ಯೋಜನೆಯಲ್ಲಿ ಮೃತಪಟ್ಟ ಕುರಿಗಳಿಗೆ 5 ಸಾವಿರ ರೂ. ಪರಿಹಾರ ದೊರಕುತ್ತಿತ್ತು. ಈಗಿನ ಸರ್ಕಾರ ಈ ಯೋಜನೆಯನ್ನು ರದ್ದುಗೊಳಿಸಿದ್ದು ಕುರಿಗಾಹಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕುರಿಗಳ ನಿಗೂಢ ಸಾವಿಗೆ ನಿಖರ ಕಾರಣವನ್ನು ತಿಳಿದುಕೊಂಡು ಎಲ್ಲ ಪಶು ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡಬೇಕು. ಸತ್ತ ಕುರಿಗಳಿಗೆ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಸಿಎಂ ಜೊತೆ ಮಾತನಾಡುವುದಾಗಿ ಹೇಳಿದ ಅವರು, ಕೂಡಲೇ ಅನುಗ್ರಹ ಯೋಜನೆಯನ್ನು ಪುನರ್ ಪ್ರಾರಂಭಿಸುವಂತೆ ಆಗ್ರಹಿಸಿದರು. ಹಾಲುಮತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ| ಡಿ.ಟಿ. ಪ್ರಶಾಂತ್, ಜಿಲ್ಲಾಧ್ಯಕ್ಷ ದಾನೇಶ್, ಜಿಲ್ಲಾ ಕಾರ್ಯಾಧ್ಯಕ್ಷ ಗಣೇಶ್ ಬಿಳಿಗಿ, ಮುಖಂಡ ಅರುಣ್ ಮತ್ತು ಕುರಿಗಾಹಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ
Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು; ಬೇಳೂರು
Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ
Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.