ಸಾಲು ಮರಗಳ ತೆರವಿಗೆ ಕಟ್ಟಬೇಕಾದುದುದು 395 ಕೋಟಿ, ಕಟ್ಟಿದ್ದು 43 ಲಕ್ಷ.!


Team Udayavani, Feb 28, 2022, 5:06 PM IST

ಸಾಲು ಮರಗಳ ತೆರವಿಗೆ ಕಟ್ಟಬೇಕಾದುದುದು 395 ಕೋಟಿ, ಕಟ್ಟಿದ್ದು 43 ಲಕ್ಷ.!

ಸಾಗರ: ನಗರದ ತ್ಯಾಗರ್ತಿ ಕ್ರಾಸಿನಿಂದ ಎಲ್‌ಬಿ ಕಾಲೇಜುವರೆಗಿನ ರಸ್ತೆ ಅಗಲೀಕರಣಕ್ಕಾಗಿ 488 ಮರಗಳನ್ನು ತೆರವುಗೊಳಿಸಲು ಸಾಗರದ ಉಪ ಅರಣ್ಯಸಂರಕ್ಷಣಾಧಿಕಾರಿಯಾದ ಮೋಹನ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 43.40 ಲಕ್ಷ ರೂ. ಹಣವನ್ನು ಕಟ್ಟಿಸಿಕೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯ ನಿಯಮಿಸಿದ ಸಮಿತಿಯ ವರದಿಯ ಪ್ರಕಾರ 365  ಕೋಟಿ ರೂಪಾಯಿಗಳನ್ನು ಕಟ್ಟಸಿಕೊಳ್ಳಬೇಕಿತ್ತು. ಈ ವರದಿಯ ಮಾನದಂಡದ ಪ್ರಕಾರ ಬಾಕಿ ಹಣವನ್ನು ವಸೂಲಿ ಮಾಡಬೇಕು ಎಂಬ ಮನವಿಯನ್ನು ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಳಿ ಅರಣ್ಯ ಇಲಾಖೆ ಡಿಎಫ್‌ಓ ಅವರಿಗೆ ಸೋಮವಾರ ನೀಡಿದರು.

ಸಾಲು ಮರಗಳಿಗೆ ನಿಗದಿ ಮಾಡಿದ ಪರಿಹಾರ ದರವು ತೀರಾ ಅವೈಜ್ಞಾನಿಕವಾಗಿದೆ. ಸರ್ವೋಚ್ಛ ನ್ಯಾಯಾಲಯ ನಿಯಮಿಸಿದ ಸಮಿತಿಯ ವರದಿಯ ಪ್ರಕಾರ ಮರಗಳು ನೀಡುವ ನೈಸರ್ಗಿಕ ಸೇವೆಗಳ ಮೊತ್ತದ ಅನ್ವಯ 365 ಕೋಟಿ ರೂ. ಕಟ್ಟಿಸಿಕೊಳ್ಳಬೇಕಿತ್ತು ಹಾಗೂ ಪಾರಂಪಾರಿಕ ಮರಗಳನ್ನು ತೆರವುಗೊಳಿಸಿದ ನಂತರದಲ್ಲಿ ಒಂದು ಮರಕ್ಕೆ ಕನಿಷ್ಠ ಐವತ್ತು ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಲು ಯೋಜನೆ ಹಾಕಿಕೊಳ್ಳಬೇಕಿತ್ತು. ಆದರೆ ಸಾಗರದ ಅರಣ್ಯ ಇಲಾಖೆಯವರು ಒಂದು ಮರಕ್ಕೆ ಹತ್ತು ಗಿಡಗಳನ್ನು ಮಾತ್ರ ನೆಡಲು ಯೋಜನೆ ರೂಪಿಸಿದೆ ಎಂದು ಆಗಿರುವ ಲೋಪಗಳತ್ತ ಅವರು ಬೆಳಕು ಚೆಲ್ಲಿದ್ದಾರೆ.

ಈ ಷರತ್ತನ್ನು ಬದಲಿಸಿ ಕಡಿದ ಒಂದು ಮರಕ್ಕೆ ಐವತ್ತು ಗಿಡಗಳನ್ನು ನೆಡಬೇಕು ಹಾಗೂ ರಾಷ್ಟ್ರೀಯ  ಹೆದ್ದಾರಿ ಇಲಾಖೆಯಿಂದ ಬಾಕಿ ಹಣವನ್ನು ವಸೂಲಿ ಮಾಡಬೇಕು ಎಂಬ ಮನವಿಯನ್ನು ನೀಡಲಾಯಿತು. ತಪ್ಪಿದಲ್ಲಿ ಈ ಮೊತ್ತವನ್ನು ಸಾಗರದ ಉಪ ಅರಣ್ಯಸಂರಕ್ಷಣಾಧಿಗಳು ಭರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಒಂದು ಬದಿಯ ಮರವನ್ನಾದರೂ ಉಳಿಸುವ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ಫೆಬ್ರುವರಿ 16 ರಂದು ದೆಹಲಿಗೆ ಹೋಗಿ ಹೆದ್ದಾರಿ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನೀಡಿದ ಭರವಸೆ ಹುಸಿಯಾಗಿದೆ. ಈ ಬಾಕಿ ಹಣ ಪಾವತಿ ಹಾಗೂ 50 ಗಿಡಗಳ ನೆಡುವ ಗುರಿ ಸಂಬಂಧ ಸುಪ್ರೀಂಕೋರ್ಟ್ ನಿಯಮಿಸಿದ ಸಮಿತಿ, ಕೇಂದ್ರ ಸರ್ಕಾರದ ಪರಿಸರ ಇಲಾಖೆ, ರಾಜ್ಯದ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಸಿಸಿಎಫ್ ಮೊದಲಾದವರಿಗೂ ಕಳುಹಿಸಿಕೊಡಲಾಗಿದೆ ಎಂದು ಅಖಿಲೇಶ್ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.