ಶಿಮುಲ್‌ ನೂತನ ಅಧ್ಯಕ್ಷರ ಆಯ್ಕೆ ಅನೂರ್ಜಿತ

ಅಮಾನತು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಇಬ್ಬರು ನಿರ್ದೇಶಕರು

Team Udayavani, Apr 30, 2022, 4:35 PM IST

suspension

ಶಿವಮೊಗ್ಗ: ಮಧ್ಯ ಕರ್ನಾಟಕದ ಪ್ರತಿಷ್ಠಿತ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ ಅಧ್ಯಕ್ಷರ ಆಯ್ಕೆಯನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಈ ಹಿಂದಿನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಸಂದರ್ಭದಲ್ಲೂ ಹಗ್ಗಜಗ್ಗಾಟ ನಡೆದಿತ್ತು. ಆ ಪ್ರಕರಣ ಸಹ ನ್ಯಾಯಾಲಯದ ಮೆಟ್ಟಿಲೇರಿ ಅವಿಶ್ವಾಸ ಮಂಡನೆಗೆ ಹಲವು ಬಾರಿ ತಡೆ ತರಲಾಗಿತ್ತು. ಕೊನೆಗೂ ಮುಹೂರ್ತ ಫಿಕ್ಸ್‌ ಆಗಿ ಅವಿಶ್ವಾಸ ಮಂಡನೆ ನಡೆದು ಅಧ್ಯಕ್ಷರನ್ನು ಕೆಳಗಿಳಿಸಲಾಗಿತ್ತು. ಇದಾದ ಬಳಿಕವೂ ಹೊಸ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲೂ ರಾಜಕೀಯ ಮೇಲಾಟ ನಡೆದು ಮತ್ತೆ ಗೊಂದಲ ಸೃಷ್ಟಿಯಾಗಿ ಇಬ್ಬರು ನಿರ್ದೇಶಕರು ನ್ಯಾಯಾಲಯದ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಈಗ ಅಧ್ಯಕ್ಷರ ಆಯ್ಕೆಯನ್ನೇ ಅನೂರ್ಜಿತಗೊಳಿಸಿದೆ.

ಏನಿದು ಪ್ರಕರಣ

ಜ.1ರಂದು ಶಿಮುಲ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆ ಹಿಂದಿನ ದಿನ ಇಬ್ಬರು ನಿರ್ದೇಶಕರನ್ನು ಹಾಲಿನ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ಅಮಾನತುಗೊಳಿಸಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿತ್ತು. ಇದನ್ನು ಪ್ರಶ್ನಿಸಿ ಹಾಲಿ ಉಪಾಧ್ಯಕ್ಷ ಎಚ್‌.ಕೆ. ಬಸಪ್ಪ ಹಾಗೂ ಶಿವಶಂಕರಪ್ಪ ಅವರು ಕೋರ್ಟ್‌ ಮೆಟ್ಟಿಲೇರಿ, ಶಿಮುಲ್‌ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸದಂತೆ ರಾಜಕೀಯ ಮಾಡಿ ಕಾರಣ ಇಲ್ಲದೆ ಅಮಾನತು ಮಾಡಲಾಗಿದೆ ಎಂದು ದೂರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಸೊಸೈಟಿಯಲ್ಲಿ ನಡೆದಿರುವ ವ್ಯವಹಾರಗಳಿಗೆ ಸಂಬಂಧಿಸಿದಂತೆ ಅನಗತ್ಯವಾಗಿ ಅಮಾನತು ಮಾಡಲಾಗಿದೆ. ಆದ್ದರಿಂದ ಅಧ್ಯಕ್ಷರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಅಮಾನತು ಮಾಡಿದ ಮೂವರು ಅಧಿಕಾರಿಗಳಿಗೆ ದಂಡ ವಿಧಿಸಿದೆ. ಅಲ್ಲದೆ ಮುಂದಿನ ಆರು ವಾರದೊಳಗೆ ಹೊಸ ಅಧ್ಯಕ್ಷರ ಆಯ್ಕೆ ಮಾಡುವಂತೆ ಸೂಚನೆ ನೀಡಿದೆ.

ಮೇಲ್ಮನವಿ ಸಲ್ಲಿಸುವೆ

ಜ.1ರಂದು ಶಿಮುಲ್‌ ಚುನಾವಣೆ ನಡೆದಿದ್ದು ಬಹುಮತ ಪಡೆದು ಆಯ್ಕೆಯಾಗಿದ್ದೇನೆ. ಅವರಿಬ್ಬರು ಅಮಾನತು ಮಾಡಿದ್ದ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಅನಗತ್ಯವಾಗಿ ಇದನ್ನು ಎಳೆತರಲಾಗಿದೆ. ನಷ್ಟದಲ್ಲಿದ್ದ ಶಿಮುಲ್‌ ಅನ್ನು ಲಾಭಕ್ಕೆ ಮರಳಿಸಿದ್ದೇವೆ. ರೈತರಿಗೆ ಉತ್ತಮ ದರ ನೀಡಿದ್ದೇವೆ. ಇದನ್ನೆಲ್ಲ ಸಹಿಸದೆ ರಾಜಕೀಯ ಮಾಡಲಾಗುತ್ತಿದೆ. ಕೋರ್ಟ್‌ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವೆ. ಕಾನೂನಿಗೆ ಗೌರವ ಕೊಟ್ಟು ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದಿದ್ದು ಉಪಾಧ್ಯಕ್ಷರಿಗೆ ಜವಾಬ್ದಾರಿ ಹಸ್ತಾಂತರಿಸಲಾಗಿದೆ ಎಂದು ಶ್ರೀಪಾದ ಹೆಗಡೆ ನಿಸರಾಣಿ ತಿಳಿಸಿದ್ದಾರೆ.

ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಇಬ್ಬರು ನಿರ್ದೇಶಕರನ್ನು ಅಮಾನತು ಮಾಡಲಾಗಿತ್ತು. ಇದು ಸರಿಯಲ್ಲ ಎಂದು ಪ್ರಶ್ನೆ ಮಾಡಿದ್ದೆವು. ಹೈಕೋರ್ಟ್‌ ಸಹ ಅಮಾನತು ಮಾಡಿದ ಅಧಿಕಾರಿಗಳಿಗೆ ದಂಡ ವಿಧಿಸಿದೆ. ಜತೆಗೆ ಅವರ ಮೇಲೆ ಇಲಾಖೆ ತನಿಖೆಗೆ ಸೂಚನೆ ನೀಡಿದೆ. ಅಧ್ಯಕ್ಷರ ಆಯ್ಕೆಯನ್ನು ರದ್ದುಗೊಳಿಸಿದೆ. ಆರು ವಾರದೊಳಗೆ ಚುನಾವಣೆ ನಡೆಸಲು ಸೂಚಿಸಿದೆ. ನಮ್ಮ ಮೇಲೆ ಗುರುತರವಾದ ಆರೋಪಗಳು ಇರಲಿಲ್ಲ. ರಾಜಕೀಯ ಉದ್ದೇಶದಿಂದ ಈ ರೀತಿ ನಮ್ಮನ್ನು ನಡೆಸಿಕೊಂಡರು. ಹಣ ದುರುಪಯೋಗ ಆಗಿರಲಿಲ್ಲ. ರಿಸರ್ವ್‌ ಫಂಡ್‌ ಅನ್ನು ಪ್ರತ್ಯೇಕವಾಗಿ ಇರಿಸಿಲ್ಲ. ಕಟ್ಟಡಕ್ಕೆ ಅನುಮತಿ ಪಡೆದಿಲ್ಲ. ಹಾಲು ಉತ್ಪಾಕದರ ಹಣ ಪಾವತಿಯನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ನಡೆಸಲು ಸಹಕಾರ ಇಲಾಖೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಿದ್ದರು. ಇದರಲ್ಲಿ ಯಾವುದೇ ದುರುಪಯೋಗ ಆಗಿರಲಿಲ್ಲ. ಕಾನೂನು ಪಾಲನೆ ಮಾಡಲು ನೋಟಿಸ್‌ ಮೂಲಕ ತಿಳಿಸಬಹುದಿತ್ತು. ಆದರೂ ನಮ್ಮನ್ನು ದುರುದ್ದೇಶ ಪೂರ್ವಕವಾಗಿ ಅಮಾನತು ಮಾಡಲಾಗಿದೆ ಎಂದು ನಿರ್ದೇಶಕ ಶಿವಶಂಕರಪ್ಪ ತಿಳಿಸಿದ್ದಾರೆ.

ರಾಜಕೀಯ ಮೇಲಾಟ

ಶಿಮುಲ್‌ ಅಧಿಕಾರ ಗದ್ದುಗೆ ಎಂಬುದು ಹಾವು ಏಣಿ ಆಟವಾಗಿದ್ದು ಅಧಿಕಾರಕ್ಕಾಗಿ ಪರಸ್ಪರ ಕಾಲೆಳೆಯುವ ಪ್ರವೃತ್ತಿಯಿಂದ ಶಿಮುಲ್‌ ಅಭಿವೃದ್ಧಿಗೆ ಕಂಟಕವಾಗಿದೆ ಎಂದು ಒಕ್ಕೂಟದ ಸದಸ್ಯರು ಆರೋಪಿಸಿದ್ದಾರೆ. ಹಿಂದಿನ ಅಧ್ಯಕ್ಷರನ್ನು ಅವಿಶ್ವಾಸ ಮಂಡಿಸಿ ಒತ್ತಡದಿಂದ ಕೆಳಗಿಳಿಸಲಾಯಿತು. ಹೊಸ ಅಧ್ಯಕ್ಷರಾಗಲು ಪ್ರತಿಸ್ಪರ್ಧಿಗಳನ್ನು ಅಮಾನತು ಮಾಡಿಸಲಾಯಿತು. ನಾಲ್ಕೇ ತಿಂಗಳಿಗೆ ಅವರ ಅಧಿಕಾರ ಮುಗಿದಿದೆ. ಹೀಗೆ ಆದರೆ ಹಾಲು ಉತ್ಪಾದಕರು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಅಲವತ್ತುಕೊಂಡಿದ್ದಾರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.