Sagara: ರೈತ ಸಂಘದವರಿಗೆ ಅಗೌರವ; ಗ್ರಾಮಾಂತರ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Nov 17, 2023, 3:51 PM IST
ಸಾಗರ: ರೈತ ಸಂಘದ ಪದಾಧಿಕಾರಿಗಳನ್ನು ಅಗೌರವದಿಂದ ನಡೆಸಿಕೊಂಡಿರುವ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ರೈತ ಸಂಘದ ಡಾ. ಎಚ್.ಗಣಪತಿಯಪ್ಪ ಬಣದ ವತಿಯಿಂದ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಗ್ರಾಮಾಂತರ ಠಾಣೆ ಅಧಿಕಾರಿಗಳ ವರ್ತನೆ ರೈತ ವಿರೋಧಿಯಾಗಿದೆ. ರೈತರಿಗೆ ಅಗೌರವ ತರುವ ರೀತಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ನಡೆದುಕೊಂಡಿದ್ದಾರೆ. ಈಚೆಗೆ ಚಿಕ್ಕನೆಲ್ಲೂರು ಸಂತೋಷ್ ಅಣ್ಣೋಜಿರಾವ್ ಎಂಬುವವರಿಗೆ ಆಗಿರುವ ಅನ್ಯಾಯದ ವಿರುದ್ಧ ನ್ಯಾಯ ಕೊಡಿಸಲು ರೈತ ಸಂಘ ಗ್ರಾಮಾಂತರ ಠಾಣೆಗೆ ಹೋಗಲಾಗಿತ್ತು. ಅ. 30ರಂದು ಠಾಣೆಗೆ ಹೋಗಿದ್ದಾಗ ಪೊಲೀಸ್ ಅಧಿಕಾರಿಗಳು ರೈತ ಸಂಘದ ಜೊತೆ ದಬ್ಬಾಳಿಕೆ ರೀತಿಯಲ್ಲಿ ವರ್ತನೆ ಮಾಡಿದ್ದಾರೆ ಎಂದು ದೂರಿದರು.
ಸಂತೋಷ್ ಅಣ್ಣೋಜಿರಾವ್ ಅವರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ರೈತ ಸಂಘದ ಪದಾಧಿಕಾರಿಗಳು ಏಕೆ ಬಂದಿದ್ದೀರಿ ಎಂದು ಪೊಲೀಸ್ ಅಧಿಕಾರಿಗಳು ದಬಾಯಿಸಿದ್ದಾರೆ. ಹಾಗಾದರೆ ತಮ್ಮ ಸಂಘಟನೆಯಲ್ಲಿ ಸಕ್ರಿಯವಾಗಿರುವ ಪದಾಧಿಕಾರಿಗಳಿಗೆ ಅನ್ಯಾಯವಾದಾಗ ಠಾಣೆಗೆ ಹೋಗುವುದೇ ತಪ್ಪೇ ಎಂದು ಪ್ರಶ್ನಿಸಿದ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ತಾಲೂಕಿನಲ್ಲಿ ರೈತರಿಗೆ ಪೊಲೀಸ್ ಅಧಿಕಾರಿಗಳಿಂದ ಆಗುತ್ತಿರುವ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ತಕ್ಷಣ ಪೊಲೀಸ್ ಅಧಿಕಾರಿ ರೈತರ ಬಳಿ ಕ್ಷಮೆಯಾಚನೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ರೈತ ಸಂಘವು ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ಪ್ರಮುಖರಾದ ರಮೇಶ್ ಈ. ಕೆಳದಿ, ಹೊಯ್ಸಳ ಗಣಪತಿಯಪ್ಪ ಮಾತನಾಡಿದರು. ಪ್ರತಿಭಟನೆಯಲ್ಲಿ ಡಾ. ರಾಮಚಂದ್ರಪ್ಪ ಮನೆಘಟ್ಟ, ಭದ್ರೇಶ್ ಬಾಳಗೋಡು, ಚಂದ್ರು ಆಲಳ್ಳಿ, ಶಿವು ಮೈಲಾರಿಕೊಪ್ಪ, ಚಂದ್ರು ಪೂಜಾರಿ, ಚಂದ್ರು ಶಿರವಂತೆ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.