Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


Team Udayavani, Apr 30, 2024, 5:16 PM IST

4-

ತೀರ್ಥಹಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೆಜೆಎಂ ಯೋಜನೆಯಡಿ ತಾಲೂಕಿನಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಕೇಂದ್ರೀಕೃತ, ಅವೈಜ್ಞಾನಿಕ, ಜನ ವಿರೋಧಿ ಮತ್ತು ಪ್ರಕೃತಿ ವಿರೋಧಿ ಯೋಜನೆಯಾಗಿದೆ. ಇದರ ಕುರಿತು ಕಳೆದ ಸುಮಾರು 6 ತಿಂಗಳಿಂದ ಮನವಿ, ಪ್ರತಿಭಟನೆ, ಆಹೋರಾತ್ರಿ ಧರಣಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆಗಿನ ಸಭೆ, ಗಂಜಿ ಚಳವಳಿ ಹೀಗೆ ನಾನಾ ರೀತಿಯಲ್ಲಿ ನಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿಕೊಂಡು ಬಂದರೂ ಸಮಸ್ಯೆ ಪರಿಹಾರ ಆಗದ ಕಾರಣ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ಮಂಗಳವಾರ ಚುನಾವಣಾ ಅಧಿಕಾರಿಗಳನ್ನು ಭೇಟಿಯಾಗಿ ತಾಲೂಕಿನ ಕೋಡ್ಲು, ಅಲಗೇರಿ, ಗುಡ್ಡೆಕೊಪ್ಪ ಕಾಸರವಳ್ಳಿ, ಹಾರೋಗೋಳಿಗೆ, ಹುಣಸವಳ್ಳಿ ಗ್ರಾಮಗಳ 1 ಸಾವಿರಕ್ಕೂ ಅಧಿಕ ಗ್ರಾಮಸ್ಥರು ಸ್ವ ಇಚ್ಛೆಯಿಂದ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಸಹಿ ಹಾಕಿ ಪತ್ರ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯೋಜನೆಗಳು ಜನರ ಹೆಸರಿನಲ್ಲಿ ಜಾರಿಯಾಗುತ್ತವೆ. ಆದರೆ ಜನರು ವಿರೋಧ ಬಂದ ಮೇಲೂ ಅನುಷ್ಠಾನಕ್ಕೆ ತಾವುಗಳು ಪೊಲೀಸ್ ಬಲ ಪ್ರಯೋಗ ಬಳಸಿಕೊಂಡಿದ್ದೀರಿ, ಯೋಜನೆಯ ರೂಪು-ರೇಷೆಗಳನ್ನು ಮನಸೋ ಇಚ್ಛೆ ಬದಲಾಯಿಸಿಕೊಂಡಿದ್ದೀರಿ, ಕಾಡನ್ನು ನಾಶಗೊಳಿಸಿದ್ದೀರಿ, ಮಲೆನಾಡಿನ ಪರಿಸರವನ್ನು ಹಾಳುಗೆಡವಿದ್ದೀರಿ, ಜನರ ಯಾವ ಪ್ರತಿರೋಧವನ್ನೂ ಲೆಕ್ಕಿಸದೆ, ಈ ನೆಲದ ಕಾನೂನನ್ನು ಗಾಳಿಗೆ ತೂರಿ ಬಲಿಷ್ಠರಿಗೆ ಅನುಕೂಲವನ್ನು ಮಾಡಿ ಕೊಟ್ಟಿದ್ದೀರಿ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜನರು ರಾಜ್ಯ ಹೈಕೋರ್ಟ್‌ ಮೆಟ್ಟಿಲೇರಿದಾಗಲೂ ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿದೆ ಎಂದು ನ್ಯಾಯಾಲಯ ಗಮನಿಸಿ, ಆದೇಶ ನೀಡಿದೆ. ಹೀಗಿದ್ದರೂ ತಾವುಗಳು ಸಾರ್ವಜನಿಕರ ಹಿತವನ್ನು ಬದಿಗೊತ್ತಿ, ಬಲಪ್ರಯೋಗದ ಮೂಲಕ ಪರಿಸರದ ಮೇಲೆ ಎರಗಿದ್ದೀರಿ. ಇದರ ಜೊತೆಗೆ ಈ ಭಾಗದ ತೂಗು ಸೇತುವೆ ದುರಸ್ತಿಗೆ ನೀವುಗಳು ತೋರಿಸುತ್ತಿರುವ ತಾತ್ಸಾರ, ಗುಣಮಟ್ಟವಿಲ್ಲದೆ ಹಾಕಿದ ರಸ್ತೆಗಳಿಂದಾಗಿ ಜನರಿಗೆ ವಿಶ್ವಾಸ ಕಡಿಮೆಯಾಗಿದೆ. ಹೀಗಿರುವಾಗ, ಲೋಕಸಭಾ ಚುನಾವಣೆ 2024ರ ಮತದಾನದಲ್ಲಿ ಭಾಗವಹಿಸುವ ಯಾವ ಆಸಕ್ತಿಯೂ ನಮಗೆ ಉಳಿದಿಲ್ಲ ಎಂದಿದ್ದಾರೆ.

ಇಡೀ ವ್ಯವಸ್ಥೆಯೇ ಕಣ್ ಕಟ್ಟಾಗಿರುವಾಗ ನಮ್ಮ ಮತವನ್ನು ಮಾತ್ರ ನೀವು ಪವಿತ್ರ ಎನ್ನುತ್ತಿರುವುದು ಸಂವಿಧಾನಕ್ಕೆ ನೀವೆಲ್ಲರೂ ಸೇರಿ ಎಸಗುತ್ತಿರುವ ಅಪಚಾರವಾಗಿದೆ. ವಿಕೇಂದ್ರಿಕರಣ ವ್ಯವಸ್ಥೆಯನ್ನು ಸಂವಿಧಾನದ ಆಶಯಗಳನ್ನು ಕಡೆಗಣಿಸಿರುವುದರಿಂದ ನಮಗೆ ಸಂವಿಧಾನವನ್ನು ಅನುಷ್ಠಾನಗೊಳಸುತ್ತಿರುವ ನಿಮ್ಮಗಳ ಮೇಲೆ ಇದ್ದ ನಂಬಿಕೆ, ವಿಶ್ವಾಸ ಕಡಿಮೆಯಾಗಿದೆ. ಬಂಡವಾಳಶಾಯಿ ವ್ಯವಸ್ಥೆಯ ಸರ್ವಾಧಿಕಾರಿ ಧೋರಣೆ ಆಡಳಿತ ಮತ್ತು ಸರ್ಕಾರ ನಿಮ್ಮದು ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ ಎಂದರು.

ಇದರಿಂದಾಗಿ ಭಾರತದ ಸಂವಿಧಾನದ ಮಹಾಹಬ್ಬ 2024ರ ಲೋಕಸಭೆ ಚುನಾವಣೆಯ ಮತದಾನದಲ್ಲಿ ನಾವು/ನಮ್ಮ ಕುಟುಂಬ ಭಾಗವಹಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿರುತ್ತೇವೆ ಎಂದು ಸಹಿ ಹಾಕಿರುವ ಪತ್ರದ ಮೂಲಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.