![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Oct 13, 2020, 6:45 PM IST
ಭದ್ರಾವತಿ: ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ನಿರಾವರಿ ನಿಗಮದ ಬಿಆರ್ಎಲ್ಬಿಸಿ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಮತ್ತು ಗುತ್ತಿಗೆ ನೌಕರರು ಮಿಲ್ಟ್ರಿ ಕ್ಯಾಂಪ್ನಲ್ಲಿರುವ ನೀರಾವರಿ ಇಲಾಖೆ ಕಚೇರಿ ಮುಂದೆ ಸೋಮವಾರ ಧರಣಿ ನಡೆಸಿದರು.
ನಾಲ್ಕು ವಿಭಾಗಗಳಲ್ಲಿ 500 ಮಂದಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದಿನ ಗುತ್ತಿಗೆದಾರ ಎರಡು ತಿಂಗಳ ವೇತನ ನೀಡದ ಕಾರಣ ನಡೆಸಿದ ಹೋರಾಟದ ಪರಿಣಾಮವಾಗಿ ಹೊಸ ಗುತ್ತಿಗೆ ನೇಮಕ ಮಾಡಲಾಗಿದೆ. ಈ ಹೊಸ ಗುತ್ತಿಗೆದಾರ ಇಎಸ್ಐ, ಪಿಎಫ್ ಕಂತು ಹಾಗೂ ವೇತನ ವ್ಯತ್ಯಾಸದ ಹಣವನ್ನು ತುಂಬಿಲ್ಲ. ಇದರಿಂದ ವೇತನವಿಲ್ಲದೆ ದಿನಗೂಲಿ ನೌಕರರ ಬದುಕು ದುಸ್ತರವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಹಳೆ ಗುತ್ತಿಗೆದಾರ ಎರಡು ತಿಂಗಳ ವೇತನವನ್ನು ತಕ್ಷಣ ನೀಡಬೇಕು ಮತ್ತು ಹೊಸ ಗುತ್ತಿಗೆದಾರರು ಇಎಸ್ಐ, ಪಿಎಫ್ಕಂತಿನ ಹಣ ತುಂಬಿಕೊಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಕಾರ್ಯಪಾಲಕ ಇಂಜಿನಿಯರ್ ರವಿಚಂದ್ರನ್, ಗುತ್ತಿಗೆದಾರರನ್ನು ಕರೆಸಿ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
ನೀರಾವರಿ ಇಲಾಖೆ ದಿನಗೂಲಿ ಹಾಗೂ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಹರೀಶ್, ಪ್ರಕಾಶ್ಕುಮಾರ್, ಕರಿಬಸಪ್ಪ, ಬೊಮ್ಮನಕಟ್ಟೆ ಪ್ರಕಾಶ್,ದೇವೇಂದ್ರಪ್ಪ ಅಸ್ಮಾಬಾನು, ಮೇರಿ, ಶೋಭಾ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.