ನೀವು ಟಿಪ್ಪು ಜಯಂತಿ ಮಾಡಿ ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ; ಕಾಂಗ್ರೆಸ್ ಗೆ ಆರಗ ಕೌಂಟರ್
Team Udayavani, Aug 23, 2024, 3:29 PM IST
ತೀರ್ಥಹಳ್ಳಿ : ನೀವು ಟಿಪ್ಪು ಜಯಂತಿ ಮಾಡಿ ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ. ನೀವು ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿ ನೋಡೋಣ, ಅದು ಆಗುವುದಿಲ್ಲ ಯಾಕೆಂದರೆ ನಿಮಗೆ ಚುನಾವಣೆಯ ಓಟ್ ಬಗ್ಗೆ ಭಯ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಆ. 23 ರ ಶುಕ್ರವಾರದಂದು ಪಟ್ಟಣದ ಸುವರ್ಣ ಸಹಕಾರ ಭವನದಲ್ಲಿ ನಡೆದ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಈ ಒಂದು ಕಾರ್ಯಕ್ರಮಕ್ಕೆ ಸಾವಿರಾರು ಮಹಿಳೆಯರು ಬರುತ್ತಿದ್ದಾರೆ. ನಮ್ಮ ನಿರೀಕ್ಷೆ ಮೀರಿ ಬರುವ ಕಾರಣ ಕೆಲವು ಗೊಂದಲಗಳು ಈ ಹಿಂದೆ ಆಗಿದೆ. ಕಳೆದ ಬಾರಿ ಆಗಿದ್ದ ಗೊಂದಲಗಳಿಂದ ನನಗೆ ಸ್ವಲ್ಪ ಭಯ ಕೂಡ ಇತ್ತು. ಆದರೆ ನಮ್ಮ ತಾಯಿಯಂದಿರು, ಅಕ್ಕ ತಂಗಿಯರು ಅದನ್ನೆಲ್ಲಾ ಕ್ಷಮಿಸಿ ಕಳೆದ ಚುನಾವಣೆಯಲ್ಲಿ ಅಧಿಕ ಮತ ನೀಡಿ ಗೆಲ್ಲಿಸಿದರು ಎಂದರು.
ಕಾಂಗ್ರೆಸ್ ಪಕ್ಷದವರು ಕಳೆದ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಹೇಳಿದ್ದರು. ಆದರೆ ನಮ್ಮ ಜನತೆ ಅವರ ಯೋಗ್ಯತೆ ನೋಡಿ ಯಾರಿಗೆ ಮತ ಹಾಕಬೇಕೆಂದು ಯೋಚಿಸಿ ಮತ ಹಾಕಿದ್ದಾರೆ.
ಭಾರತೀಯ ಪರಂಪರೆ ಶಿಥಿಲ ಆಯಿತೋ ಆಗ ಭಾರತ ಇಬ್ಬಾಗ ಆಯಿತು. ಭಾರತೀಯ ಪರಂಪರೆ ಸಂಸ್ಕೃತಿ ಎಲ್ಲಿ ಚೆನ್ನಾಗಿದೆಯೋ ಅಲ್ಲಿ ಎಲ್ಲವೂ ಚನ್ನಾಗಿದೆ. ಯಾರೋ ಬಂದು ನಮ್ಮ ಭಾರತದ ಮೇಲೆ ದಾಳಿ ಮಾಡಿದರೆ ಏನಾಗುವುದಿಲ್ಲ ಆದರೆ ನಮ್ಮ ಹೆಣ್ಣು ಮಕ್ಕಳು ಯಾವಾಗ ಸಂಸ್ಕೃತಿ, ಪರಂಪರೆ ಮರೆಯುತ್ತಾರೋ ಆಗ ನಮ್ಮ ದೇಶ ಹಾಳಾಗುತ್ತದೆ ಎಂದರು.
ಮಹಿಳೆಯರಿಗೆ ಬಾಗಿನ ಹಂಚಿಕೆ
ಈ ಬಾರಿ ವರಮಹಾಲಕ್ಷ್ಮಿ ಹಬ್ಬದ ಆಚರಣೆಯಲ್ಲಿ ಸರಿ ಸುಮಾರು 2000ಕ್ಕೂ ಹೆಚ್ಚು ಮಹಿಳೆಯರು ಆಗಮಿಸಿದ್ದರು. ಸಂಸದ ಬಿ ವೈ ರಾಘವೇಂದ್ರ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ಕಾರಣಾಂತರಗಳಿಂದ ಆಗಮಿಸಲಿಲ್ಲ. ಬಂದಂತಹ ಎಲ್ಲಾ ಮುತ್ತೈದೆಯರಿಗೂ ಬಾಗಿನ ವಿತರಣೆ ಮಾಡಲಾಯಿತು.
ಕಳೆದ ಎರಡು ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬ ಭಾರಿ ವಿಶೇಷವಾಗಿತ್ತು. ವಿಧಾನಸಭಾ ಚುನಾವಣೆಯ ಸಮಯವಾಗಿದ್ದ ಕಾರಣ ಒಂದು ಬಾರಿ ಬೆಳ್ಳಿ ಕಾಯಿನ್, ಸೀರೆ ವಿತರಣೆ ಮಾಡಿದ್ರೆ ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಹ ಸೀರೆ ವಿತರಣೆ ಮಾಡಲಾಗಿತ್ತು.
ಈ ಹಿನ್ನಲೆಯಲ್ಲಿ ಈ ಬಾರಿ ಸಿರೆ ಸಿಗುತ್ತದೆ ಎಂಬ ಕಾರಣದಿಂದ ಅನೇಕ ಮಹಿಳೆಯರು ತಂಡೊಪತಂಡವಾಗಿ ಆಗಮಿಸಿದ್ದರು.
ಇದನ್ನೂ ಓದಿ: Election: ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ… ಮಹಾಲಿಂಗಪುರ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.