ಸರಕಾರದ ವಿರುದ್ಧ ಸಮರ ನಿಲ್ಲಲ್ಲ


Team Udayavani, Mar 21, 2021, 7:22 PM IST

ಹಗಹಗಹಬವಬ

ಶಿವಮೊಗ್ಗ: ಸರಕಾರದ ವಿರುದ್ಧ ರೈತರ ಹೋರಾಟ ನಿಲ್ಲುವುದಿಲ್ಲ. ಕೇವಲ ಮೂರು ಕಾಯ್ದೆಗಳಿಗಷ್ಟೇ ಇದು ಸೀಮಿತವಲ್ಲ. ಹೋರಾಟ ನಿರಂತರವಾಗಿರಲಿದೆ ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಅಧ್ಯಕ್ಷ ರಾಕೇಶ್‌ ಸಿಂಗ್‌ ಟಿಕಾಯತ್‌ ಘೋಷಿಸಿದರು.

ಅವರು ನಗರದಲ್ಲಿ ಶನಿವಾರ ಬೃಹತ್‌ ರೈತ ಮಹಾಪಂಚಾಯತ್‌ ಸಭೆಯಲ್ಲಿ ಮಾತನಾಡಿದರು. ರೈತ ವಿರೋ ಧಿ ಕಾನೂನುಗಳ ವಿರುದ್ಧ ಹೋರಾಟ ಮಾಡಲು ನೀವು ದೆಹಲಿಗೆ ಬರಬೇಕಿಲ್ಲ. ಬೆಂಗಳೂರನ್ನೇ ನಾಲ್ಕು ಕಡೆಗಳಿಂದ ಸುತ್ತುವರೆದು ಪ್ರತಿಭಟನೆ ನಡೆಸಿ. ಬೆಂಗಳೂರನ್ನೇ ದೆಹಲಿ ಮಾಡಬೇಕು. ಮೂರು ಕಾಯ್ದೆಗಳು ವಾಪಾಸ್‌ ಆಗುವವರೆಗೂ ಹೋರಾಟ ನಡೆಯಬೇಕು ಎಂದರು. ಡೀಸೆಲ್‌ ವಾಹನಗಳಿಗೆ 10 ವರ್ಷ ನಿಗದಿಪಡಿಸಿ ರೈತರ ಟ್ರ್ಯಕ್ಟರ್‌ಗಳನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ. ಮಾರುಕಟ್ಟೆ ಹೊರಗೆ ನಿಮ್ಮ ಉತ್ಪನ್ನ ಮಾರಬಹುದು ಎಂದು ಹೇಳುತ್ತಿದ್ದಾರೆ. ಸರಕಾರ ನಿಗದಿಪಡಿಸಿದ ದರಕ್ಕೆ ಖರೀದಿ ಮಾಡಿ ಎಂದರೆ ಬೇಡ ಎನ್ನುತ್ತಾರೆ.

ಇಂತಹ ಕಾನೂನು ವಾಪಾಸ್‌ ಪಡೆಯಲು ನಾವು ಹೋರಾಟ ಮಾಡಬೇಕು. ಕೇವಲ ಮೂರು ಕಾನೂನುಗಳಿಗಾಗಿ ಮಾತ್ರ ನಾವು ಹೋರಾಟ ಮಾಡಿದರೆ ಸಾಲದು. ಹಾಲು, ಬೀಜ, ರಸಗೊಬ್ಬರ, ವಿದ್ಯುತ್ಛಕ್ತಿಯ ಮೇಲಿನ ಕಾಯ್ದೆ ಬರಲಿದೆ. ಅದಕ್ಕಾಗಿ ನಮ್ಮ ಹೋರಾಟ ಸುದೀರ್ಘ‌ವಾಗಿರಲಿದೆ ಎಂದರು. ರೈತರ ಹೋರಾಟದ ಮೂಲಕ ಯುವಕರನ್ನು ನಾವು ವರ್ಷಾನುಗಟ್ಟಲೆ ಕಾಪಾಡಿಕೊಂಡು ಬಂದ ಭೂಮಿಯೊಂದಿಗೆ ಬೆಸೆಯುವ ಕೆಲಸ ಸಹ ಆಗಬೇಕಿದೆ.

ನಮ್ಮ ಭೂಮಿಯ ಹಿಂದೆ ಸರ್ಕಾರ ಕಾನೂನು ತರುವ ಮೂಲಕ ಖಾಸಗಿ ಸಂಸ್ಥೆಗೆ ಮಾರಲಾಗುತ್ತಿದೆ. ಇದನ್ನು ಉಳಿಸಬೇಕಿದೆ. ಇದನ್ನು ಯುವಕರಿಗೆ ತಿಳಿಸಿ ಕೃಷಿಗೆ ಅವರನ್ನು ಕರೆದುಕೊಳ್ಳಬೇಕಿದೆ ಎಂದರು. ದೇಶವನ್ನು ಲೂಟಿ ಹೊಡೆಯುತ್ತಿರುವ ಕಂಪನಿಗಳ ನಾಯಕರು ಇವತ್ತು ಸರಕಾರವನ್ನು ನಡೆಸುತ್ತಿದ್ದಾರೆ. ಅದಕ್ಕಾಗಿ ರೈತರ ಜತೆ ಮಾತುಕತೆ ಆಗುತ್ತಿಲ್ಲ. ನಮಗೆ ಜಯ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಕೇವಲ ಜೈ ಭೀಮ್‌ ಘೋಷಣೆಯಿಂದ ಗುರಿ ಮುಟ್ಟಲು ಸಾಧ್ಯವಿಲ್ಲ.

ಜೈ ಭೀಮ್‌ ಮತ್ತು ಜೈ ರಾಮ್‌ ಜೊತೆ ಜೊತೆಯಲ್ಲಿ ಹೋದಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಹೇಳಿದರು. ಸರಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ಸರಕಾರಿ ನೌಕರರಿಗೆ ಇದ್ದ ಪೆನÒನ್‌ ತೆಗೆದು ಎಂಎಲ್‌ಎ, ಎಂಪಿಗಳಿಗೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಪೊಲೀಸರು, ಯೋಧರು ಅನೇಕ ಸಮಸ್ಯೆಗಳ ಈಡೇರಿಕೆಗಾಗಿ ಸಂಘಟಿತರಾಗಿ ಹೋರಾಡಲು ಸಾಧ್ಯವಿಲ್ಲ. ಅವರ ಪರವಾಗಿಯೂ ನಾವು ಹೋರಾಟ ಮಾಡಬೇಕಿದೆ ಎಂದರು.

ಸಂಯುಕ್ತ ಕಿಸಾನ್‌ ಮೋರ್ಚಾ ಹೋರಾಟವನ್ನು ಇಂದು ನಾವು ತೀರ್ಮಾನ ಮಾಡುತ್ತಿದ್ದೇವೆ. ಸರಕಾರ ಅಲ್ಲ. ನಮ್ಮ 40 ಜನರ ಕಮಿಟಿಯಲ್ಲಿ ಯಾರಲ್ಲಾದರೂ ಕೊರತೆ ಸಿಕ್ಕರೆ ಅವರನ್ನು ಹೇಗಾದರೂ ಮುಗಿಸಬೇಕೆಂಬ ಪ್ರಯತ್ನ ಸರಕಾರದಿಂದ ನಡೆಯಿತು. ಅವರಿಗೆ ಏನೂ ಸಿಗಲಿಲ್ಲ. ಹಾಗಾಗಿ ಯುವಕರು ಇಂದು ಕಾಯ್ದೆ ವಾಪಾಸ್‌ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಸರಕಾರ ವಾಪಾಸಾತಿ ಬಗ್ಗೆ ಮಾತನಾಡಿದರೆ ಏನಾಗಬಹುದು ಎಂಬುದರ ಬಗ್ಗೆ ಸರಕಾರ ಆಲೋಚಿಸಬೇಕು.

ಯುವಸಮೂಹ ಸರಕಾರದ ವಿರುದ್ಧ ಮುಗಿಬೀಳುವ ಮೊದಲು ರೈತ ಮುಖಂಡರ ಜತೆ ಮಾತುಕತೆ ನಡೆಸಲಿ ಎಂದರು. ಹಸಿವಿನ ಉದ್ದಿಮೆ ನಡೆಯಬಾರದು, ಹಸಿವಿನ ಮೇಲೂ ಉದ್ದಿಮೆ ನಡೆಸಬಾರದು. ನಾವು ಬೆಳೆದ ಬೆಳೆಯನ್ನು ಅನ್ನ ಮಾಡಿಕೊಳ್ಳುತ್ತೇವೆ. ಈ ಅನ್ನವನ್ನು ಕಾನೂನಿನ ಮೂಲಕ ಲಾಕರ್‌ನಲ್ಲಿ ಬೀಗ ಹಾಕಲು ಸರ್ಕಾರ ಮುಂದಾಗಿದೆ. ಕೃಷಿ ಕಾಯ್ದೆ ಅಡಿ ಪ್ರತಿಭಟನೆ ನಡೆಯದಿದ್ದರೆ 20 ವರ್ಷಗಳಲ್ಲಿ ರೈತರು ಜಮೀನು ಕಳೆದುಕೊಳ್ಳಲಿದ್ದಾರೆ ಎಂದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.