ಬಿಜೆಪಿ ಸರ್ಕಾರ ಪತನವಾಗುವವರೆಗೂ ಹೋರಾಟ: ಜಯಂತ್‌


Team Udayavani, Apr 1, 2022, 3:56 PM IST

bjp

ಸಾಗರ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳ ದರವನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಗುರುವಾರ ಕಾಂಗ್ರೆಸ್‌ ವತಿಯಿಂದ ಸಿಲಿಂಡರ್‌ಗೆ ಹಾರ ಹಾಕಿ ಪೂಜೆ ಮಾಡಿ, ಜಾಗಟೆ ಬಾರಿಸುವ ಮೂಲಕ ಸಾಗರ ಹೊಟೇಲ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಡಾ| ರಾಜನಂದಿನಿ, ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದಾಗಿ ಜನಸಾಮಾನ್ಯರು ಬದುಕು ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರೇಳು ದಿನಗಳಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಏಳೆಂಟು ರೂಪಾಯಿ ಹೆಚ್ಚಿದೆ. ಅಡುಗೆ ಅನಿಲ ಸಿಲಿಂಡರ್‌ ದರ ಸಾವಿರ ರೂಪಾಯಿ ಸಮೀಪಿಸುತ್ತಿದೆ. ನರೇಂದ್ರ ಮೋದಿಯವರದ್ದು ಬಂಡವಾಳಶಾಹಿಗಳ ಪರವಾದ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌. ಜಯಂತ್‌ ಮಾತನಾಡಿ, ಈ ದೇಶದಲ್ಲಿ ಬೆಲೆ ಏರಿಕೆ ಮಾತ್ರವಲ್ಲದೆ ಜನರು ಬದುಕಲು ಸಾಧ್ಯವಾಗದಂತೆ ಕೋಮುಭಾವನೆಯನ್ನು ಕೆರಳಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಮಾಡುತ್ತಿದೆ. ದೇಶವನ್ನು ಸಂಪೂರ್ಣ ಹಾಳು ಮಾಡಬೇಕಾದರೆ ಎರಡು ಕೋಮುಗಳ ನಡುವೆ ಕಿಚ್ಚು ಹೊತ್ತಿಸಿದರೆ ಸಾಕು ಎಂದು ಹಿರಿಯರು ಹೇಳಿದ್ದಾರೆ. ಬಿಜೆಪಿ ಸರ್ಕಾರ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್‌ ಇಂತಹದ್ದನ್ನು ಸಹಿಸಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ವತಿಯಿಂದ ಬಿಜೆಪಿ ಸರ್ಕಾರ ಪತನವಾಗುವವರೆಗೂ ಹೋರಾಟ ನಡೆಸಲಾಗುತ್ತದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ತೆರಿಗೆ ಹೆಚ್ಚಳ ಮಾಡಿದ್ದೇ ನರೇಂದ್ರ ಮೋದಿ ಸರ್ಕಾರದ ಹೆಗ್ಗಳಿಕೆಯಾಗಿದೆ. ಪದೇಪದೇ ಇಂಧನ, ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕಿಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದರು. ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್‌ ಅಧ್ಯಕ್ಷ ಐ.ಎನ್‌. ಸುರೇಶಬಾಬು, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ರಫೀಕ್‌ ಬಾಬಾಜಾನ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಮಧುಮಾಲತಿ, ಸುಮಂಗಲ ಇನ್ನಿತರರು ಇದ್ದರು.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.