![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 8, 2022, 7:57 PM IST
ತೀರ್ಥಹಳ್ಳಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗೃಹಸಚಿವರ ತವರೂರಾದ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ ನಾಲ್ಕು ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಂಡಗದ್ದೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.
ನಾನು ಉತ್ತಮ ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಶಿವಮೊಗ್ಗದಲ್ಲಿ ಹೇಳಿದ ಹೇಳಿಕೆ ಬಗ್ಗೆ ಮಾತನಾಡಿದ ಕಿಮ್ಮನೆ ನಾನು ಅಭಿವೃದ್ಧಿ ಮಾಡಿದ್ದನ್ನು ಇವರು ಶಂಕು ಸ್ಥಾಪನೆ, ಉದ್ಘಾಟನೆ ಮಾಡಿದ್ದೂ ಬಿಟ್ಟರೆ ಇವರು ಏನು ಮಾಡಿದ್ದಾರೆ ? ಶಿವಮೊಗ್ಗ – ತೀರ್ಥಹಳ್ಳಿ ರಸ್ತೆ ಮಾಡಿಸಿದ್ದು ನಾನು ಈಗ ಅವರು ಹೊಟ್ಟೆ ಹೊತ್ತುಕೊಂಡು ಓಡಾಡಲು ಅನುಕೂಲವಾಗಿದೆ ಎಂದರು. ತಲೆ ಮರೆಸಿಕೊಂಡಿರುವ ವ್ಯಕ್ತಿಗೆ ತಪ್ಪಿಸಿಕೊಂಡು ಹೋಗಿದ್ದಾನೆ ಎನ್ನಬೇಕು ಆದರೆ ಆರಗ ಜ್ಞಾನೇಂದ್ರ ಪ್ರವಾಸಕ್ಕೆ ಹೋಗಿದ್ದಾರೆ ಎಂದು ಹೇಳುತ್ತಾರೆ. ಅವರಿಗೆ ಕನ್ನಡ ಭಾಷೆಯಲ್ಲೇ ಸ್ವಲ್ಪ ಸಮಸ್ಯೆ ಇದೆ ಎಂದು ವ್ಯಂಗ್ಯವಾಗಿ ಟೀಕಿಸಿದರು.
ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳಿಂದ ವಿಭಜಿಸುವ ಕೆಲಸ: ಎಚ್.ಡಿ.ದೇವೇಗೌಡ
ನಾನೇ ಬಹುತೇಕ ಕಡೆ ರಸ್ತೆ ಮಾಡಿಸಿದ್ದು, ಅವರು 15 ವರ್ಷಗಳ ಕಾಲ ಶಾಸಕರಾಗಿದ್ದರು ಆ ಸಮಯದಲ್ಲಿ ರಸ್ತೆ ಮಾಡಿಸಬಹುದಿತ್ತಲ್ಲ. ನೀವೇ ಹೋಗಿ ಎಂಟು ಹೋಬಳಿಗಳಲ್ಲಿ ಕೇಳಿ ಕಿಮ್ಮನೆ ಬಂದ ಮೇಲೆ ರಸ್ತೆ ಆಗಿದ್ದು ಎನ್ನುತ್ತಾರೆ ಹೊರತು ಆರಗ ಜ್ಞಾನೇಂದ್ರರ ಹೆಸರು ಹೇಳುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಅವರು ಕಳೆದು ಹೋಗುತ್ತಾರೆ ಎಂದು ತಿಳಿಸಿದರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.