ದಶಕ ಕಳೆದರೂ ಗಾಂಧಿ ಪ್ರತಿಮೆ ಅನಾಥ!


Team Udayavani, Oct 1, 2019, 5:02 PM IST

SM-TDY-1

ಸಾಗರ: ಗಾಂಧಿ ಪ್ರತಿಮೆ ಈಗಲೂ ಅನಾಥವಾಗಿ ಬಿದ್ದಿದ್ದರೂ ಯಾರೊಬ್ಬರೂ ಗಮನಿಸದ ಸ್ಥಿತಿ ಸಾಗರದಲ್ಲಿ ನಿರ್ಮಾಣವಾಗಿದೆ. ಒಂದು ವರ್ಷದ ಕೆಳಗೆ ಈ ಬಗ್ಗೆ “ಉದಯವಾಣಿ’ ಗಮನ ಸೆಳೆದಿದ್ದರೂ ಪರಿಸ್ಥಿತಿ ಎಳ್ಳಷ್ಟು ಬದಲಾಗಿಲ್ಲ!

ಈಗ ನಗರಸಭೆಯಾಗಿ ಬದಲಾಗಿದ್ದರೂ, 2006ರಲ್ಲಿದ್ದ ಪುರಸಭೆ ಆಡಳಿತ ನಗರದ ಗಾಂಧಿನಗರ ವೃತ್ತದಲ್ಲಿ ಗಾಂಧಿ  ಪ್ರತಿಮೆ ಸ್ಥಾಪಿಸಲು ಅಂದಿನ ಅಧ್ಯಕ್ಷೆ ಸಾಬಿರಾ ಯೂಸೂಫ್‌ ಅವಧಿಯಲ್ಲಿ ಕೌನ್ಸಿಲ್‌ನ ಸಾಮಾನ್ಯ ಸಭೆಯಲ್ಲಿ ನಡವಳಿಕೆ ಮೂಲಕವೇ ನಿರ್ಣಯ ಕೈಗೊಂಡಿತ್ತು. 27 ಜನ ವಾರ್ಡ್‌ ಸದಸ್ಯರಿದ್ದ ಪುರಸಭೆಯ 2006ರ ನವೆಂಬರ್‌ 30ರ ಕೌನ್ಸಿಲ್‌ ಸಾಮಾನ್ಯ ಸಭೆಯಲ್ಲಿ ವಿಷಯ ಸಂಖ್ಯೆ 129(4)ರಲ್ಲಿ ನಾಲ್ಕು ಪ್ರತಿಮೆಗಳ ಸ್ಥಾಪನೆಗೆ ನಡವಳಿಕೆ ದಾಖಲಾಗಿದೆ. ಡಾ. ಬಿ.ಆರ್‌.ಅಂಬೇಡ್ಕರ್‌, ಸುಭಾಷ್‌ ಚಂದ್ರಬೋಸ್, ಮಹಾತ್ಮಾ ಗಾಂಧಿ  ಮತ್ತು ಮೌಲಾನಾ ಅಬ್ದುಲ್‌ ಕಲಾಮ್‌ ಆಜಾದ್‌ ಅವರ ಪ್ರತಿಮೆಗಳ ಸ್ಥಾಪನೆಗೆ ಅಂದಿನ ಪುರಸಭೆ ತೀರ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಜೋಗ ರಸ್ತೆಯ ಕಲಾವಿದ ಹರೀಶ್‌ ಆಚಾರ್‌ ಅವರಿಗೆ ಶಿಲ್ಪ ತಯಾರಿಸಲು ಬಾಯಿ ಮಾತಿನಲ್ಲಿ ಸೂಚನೆ ನೀಡಲಾಗಿತ್ತು. ಆ ಕಾಲದಲ್ಲಿ ಟೆಂಡರ್‌, ಆದೇಶ ಪತ್ರದ ಗೋಜಿಗೆ ಹೋಗದ, ಪರಿಚಯದ ಆಧಾರದಲ್ಲಿ ಹರೀಶ್‌ ಕೃಷ್ಣಶಿಲೆ ಬಳಸಿ ಗಾಂಧಿ  ಪ್ರತಿಮೆ ರೂಪಿಸಿದರು. ಸಿದ್ಧವಾದ ಪ್ರತಿಮೆಗೆ ಸುಮಾರು 60 ಸಾವಿರ ರೂ. ಈಗಾಗಲೇ ಖರ್ಚಾಗಿದೆ.

ಆದರೆ ಅದಾಗಿ ಎರಡೇ ತಿಂಗಳಲ್ಲಿ ಕಾಂಗ್ರೆಸ್‌ ಅವಧಿ  ಮುಗಿದಿತ್ತು. ಪುರಸಭೆ ಹೋಗಿ ನಗರಸಭೆಯಾದ ಹಂತದಲ್ಲಿನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಇಂತಹದ್ದೊಂದು ತೀರ್ಮಾನದ ಕುರಿತು ಜನಪ್ರತಿನಿ ಧಿಗಳಾಗಲಿ, ಅಧಿಕಾರಿಗಳಾಗಲಿ ಗಂಭೀರವಾಗಿ ಪರಿಗಣಿಸಿಲ್ಲ. ಇತ್ತ ಒಂದೆರಡು ಬಾರಿ ಕಚೇರಿಗೆ ಹೋಗಿ ತಾವು ಕೆತ್ತಿದ ಶಿಲ್ಪದ ಕುರಿತು ಹರೀಶ್‌ ಮಾಹಿತಿ ನೀಡಿದರೂ ಆಡಳಿತ ಅಲುಗಾಡಲಿಲ್ಲ. ಕಾಲಚಕ್ರ ತಿರುಗಿ ಬಿಜೆಪಿ ಆಡಳಿತ ಹೋಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೂ ಪರಿಸ್ಥಿತಿ ಬದಲಾಗಲಿಲ್ಲ. ಖುದ್ದು ಕಾಂಗ್ರೆಸ್‌ರಿಗೆ, ಅವತ್ತು ಕೂಡ ಪುರಸಭೆಯ ಸದಸ್ಯರಾಗಿದ್ದ ತೀ.ನ. ಶ್ರೀನಿವಾಸ್‌ ಅಂತಹವರಿಗೆ ವಿಷಯ ಮರೆತು ಹೋಗಿದೆ. ಗಾಂಧಿ ಪ್ರತಿಮೆ ವಿಷಯದಲ್ಲಿನ ನಿರ್ಲಕ್ಷ ಸಲ್ಲದು. ಆ ಬಗ್ಗೆ ಸೂಕ್ತ ಕ್ರಮಕ್ಕೆ ಮುಂದಾಗುವಂತೆ ಸೂಚನೆ ನೀಡುತ್ತೇನೆ.

ಆದಷ್ಟು ಶೀಘ್ರ ಕಲಾವಿದರಿಂದ ಗಾಂಧಿ ಮೂರ್ತಿ ಪಡೆದುಕೊಂಡು ನಿಗದಿಯಾದ ಸ್ಥಳದಲ್ಲಿ ಸ್ಥಾಪನೆ ಮಾಡಲು ಸೂಚನೆ ನೀಡುತ್ತೇನೆ ಎಂದು ತೀ.ನ. ಪ್ರತಿಕ್ರಿಯಿಸಿದರೂ ನೆಲಕ್ಕೆ ಒರಗಿದ್ದ ಗಾಂಧಿ  ಪ್ರತಿಮೆಗೆ ಒಂದು ಅಡಿ ಆಚೀಚೆ ಚಲಿಸುವ ಭಾಗ್ಯವೂ ಸಿಗಲಿಲ್ಲ. ಆದರೆ ಆಡಳಿತ ಮಾತ್ರ ಬದಲಾಗಿ ಬಿಜೆಪಿಗೆ ಬಹುಮತ ಲಭಿಸಿದೆ. ವಾಸ್ತವವಾಗಿ ಬೇಸ್‌ಮೆಂಟ್‌ ಮತ್ತು ಸಣ್ಣಪುಟ್ಟ ಕೆಲಸ ಎಲ್ಲ ಮುಗಿಸಿದರೆ ಇನ್ನೂ 20-30 ಸಾವಿರ ರೂ.ಗಳಲ್ಲಿ ಪ್ರತಿಮೆ ಸ್ಥಾಪನೆಯ ಕೆಲಸ ಮುಗಿದು ಹೋಗುತ್ತದೆ. ಆದರೆ ಕಲಾವಿದರು ಕೆಲಸ ಮಾಡುವ ಶೆಡ್‌ ಬಳಿ ಆಕಾಶ ನೋಡುತ್ತ ಒರಗಿರುವ ಗಾಂಧಿ  ಶಿಲ್ಪದ ಮುಖದಲ್ಲಿ ಮಾತ್ರ ಮಾಸದ ನಗುವಿರುವುದು ಗಾಂಧಿ ಜಯಂತಿಯ ಭಾಷಣಗಳ ಸಂದರ್ಭದಲ್ಲಿ ಬೇರೆಯದೇ ಅರ್ಥ ಕೊಡುವಂತಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.