![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-415x229.jpg)
Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ
Team Udayavani, Jun 29, 2024, 12:04 PM IST
![ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ](https://www.udayavani.com/wp-content/uploads/2024/06/raghavendra-620x342.jpg)
ಶಿವಮೊಗ್ಗ: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರ ಜೇಬಿಗೆ ಕೈ ಹಾಕಿ ಹಣ ಕಿತ್ತುಕೊಳ್ಳುವ ಕೆಲಸವಾಗಿದೆ. ಈಗಾಗಲೇ ಸಿಎಂ ಡಿಸಿಎಂ ಕುರ್ಚಿ ಬಗ್ಗೆ ಚರ್ಚೆ ಶುರುವಾಗಿದೆ. ರಾಜ್ಯದಲ್ಲಿ ಅಧಿಕಾರದ ತಿಕ್ಕಾಟ ಶುರುವಾಗಿದೆ. ಜನ ಎಲ್ಲವನ್ನು ನೋಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಡಗಿಯಲ್ಲಿ ನಡೆದ ಭೀಕರ ಅಪಘಾತ ದುಃಖ ತಂದಿದೆ. ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಸದಸ್ಯರು ಸಾವನಪ್ಪಿದ್ದಾರೆ. ಸರ್ಕಾರ ಈಗಾಗಲೇ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇನ್ನು ಹೆಚ್ಚಿನ ಪರಿಹಾರ ನೀಡಬೇಕು. ಕನಿಷ್ಠ ಒಬ್ಬರಿಗೆ 5 ಲಕ್ಷ ಪರಿಹಾರ ನೀಡಬೇಕು. ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಲು ಪಕ್ಷದಿಂದಲೂ ಪ್ರಯತ್ನ ಮಾಡುತ್ತೇವೆ. ಎಲ್ಲಾ ಜನಪ್ರತಿನಿಧಿಗಳು ಸೇರಿ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬುತ್ತೇವೆ.ಇನ್ನು ಒಂದು ಗಂಟೆಯಲ್ಲಿ ಎಲ್ಲರೂ ಮನೆ ಸೇರುತ್ತಿದ್ದರು. ಅಷ್ಟರಲ್ಲಿ ಹೀಗೆ ಆಗಿದೆ, ದೇವರ ಇಚ್ಚೆ ಇತ್ತು ಏನು ಗೊತ್ತಿಲ್ಲ. ವಾಹನ ಸವಾರರು ಇನ್ನಾದರೂ ಎಚ್ಚರಿಕೆಯಿಂದ ಇರಬೇಕು ಎಂದರು.
ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರವಾಗಿ ಮಾತನಾಡಿದ ರಾಘವೇಂದ್ರ, ಸಹಕಾರಿ ಪ್ರಕೋಷ್ಟದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅವರು ಸಾಕಷ್ಟು ವರ್ಷದಿಂದ ಅಧಿಕಾರಿದಲ್ಲಿದ್ದಾರೆ. ಅವರ ಪಕ್ಷವೇ ರಾಜ್ಯದಲ್ಲಿ ಅಧಿಕಾರಿದಲ್ಲಿದೆ. ಹಾಗಾಗಿ ಅವರು ಸಹಕಾರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. 51 ಅವರು ಗೆದ್ದಿದ್ದಾರೆ, ನಾವು 49 ಗೆದ್ದಿದ್ದೇವೆ. ಎಲ್ಲಾ ರೀತಿಯ ಪ್ರಯತ್ನ ಹಾಗೂ ಶಕ್ಷಿ ಮೀರಿ ನಮ್ಮ ಪಕ್ಷದ ಅಭ್ಯರ್ಥಿ ಗಳು ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹತ್ತಿರದಿಂದ ಸೋತಿದೆ ಅಷ್ಟೇ. ಬಿಜೆಪಿ ಅಭ್ಯರ್ಥಿ ಗಳು ತುಂಬಾ ಪೈಟ್ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![1-hdk](https://www.udayavani.com/wp-content/uploads/2024/06/1-hdk-1-150x88.jpg)
Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![1-weweewqwqewqewqe](https://www.udayavani.com/wp-content/uploads/2024/06/1-weweewqwqewqewqe-150x85.jpg)
Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು
![madhu](https://www.udayavani.com/wp-content/uploads/2024/06/madhu-150x83.jpg)
CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.