ಗ್ರಾಮ ಪಂಚಾಯತ್ ಕದನ: 4111 ನಾಮಪತ್ರ ಸಲ್ಲಿಕೆ
Team Udayavani, Dec 13, 2020, 5:02 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಪಂ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು ಮೂರು ತಾಲೂಕಿನ 112 ಗ್ರಾಪಂನ 1212 ಕ್ಷೇತ್ರಗಳಿಗೆ 4111 ನಾಮಪತ್ರ ಸಲ್ಲಿಕೆಯಾಗಿವೆ.
ಡಿ.12ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು 14ರಂದು ಉಮೇದುವಾರಿಕೆ ಹಿಂಪಡೆಯಲುಕಡೇ ದಿನವಾಗಿರುತ್ತದೆ. ಬಳಿಕವಷ್ಟೇ ಮೊದಲ ಹಂತದ ಚುನಾವಣಾ ಕಣದ ಸ್ಪಷ್ಟ ಚಿತ್ರಣ ಸಿಗಲಿದೆ. 14ರ ಮಧ್ಯಾಹ್ನ 3ರ ಬಳಿಕ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ.
ಎರಡನೇ ಹಂತದಲ್ಲಿ ನಾಲ್ಕು ತಾಲೂಕು ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆಗೆ ಶುಕ್ರವಾರ ನಾಮಪತ್ರಸಲ್ಲಿಕೆ ಆರಂಭವಾಗಿದೆ. ಮೊದಲ ದಿನನಾಲ್ಕು ತಾಲೂಕುಗಳಿಂದ ಒಟ್ಟು 378 ನಾಮಪತ್ರ ಸಲ್ಲಿಕೆಯಾಗಿವೆ. ಶಿಕಾರಿಪುರ,ಸೊರಬ, ಸಾಗರ ಹಾಗೂ ಹೊಸನಗರ ತಾಲೂಕಿನ ಒಟ್ಟು 131 ಗ್ರಾಪಂಗಳ 1,397 ಸ್ಥಾನಗಳಿಗೆ ಡಿ.27ರಂದು ಚುನಾವಣೆ ನಡೆಯಲಿದೆ. ಮೊದಲ ದಿನ ಶಿಕಾರಿಪುರತಾಲೂಕಿನಲ್ಲಿ 77, ಸೊರಬ 92, ಸಾಗರ 114 ಹಾಗೂ ಹೊಸನಗರದಲ್ಲಿ 95 ನಾಮಪತ್ರಗಳ ಸಲ್ಲಿಕೆಯಾಗಿದೆ. ಶಿಕಾರಿಪುರ ತಾಲೂಕಿನ ಮೊದಲ ದಿನವಾದ ಶುಕ್ರವಾರ 77 ನಾಮಪತ್ರಗಳು ಸಲ್ಲಿಕೆಯಾಗಿದ್ದು ಶನಿವಾರ ಇನ್ನೂ ಹೆಚ್ಚಿನ ನಾಮಪತ್ರಗಳು ಸಲ್ಲಿಕೆಯಾಗುವ ಸಾಧ್ಯತೆಗಳಿವೆ.
11 ಸ್ಥಾನಗಳಿಗೆ ಉಮೇದುವಾರಿಕೆಯೇ ಇಲ್ಲ :
ಶುಕ್ರವಾರ ಅಂತ್ಯಗೊಂಡ ಮೊದಲ ಹಂತದ ಗ್ರಾಪಂ ಚುನಾವಣೆಯಲ್ಲಿ 11 ಸ್ಥಾನಗಳಿಗೆ ಯಾರೂ ಉಮೇದುವಾರಿಕೆ ಸಲ್ಲಿಸಿಲ್ಲ. ಈ ಎಲ್ಲ 11 ಸ್ಥಾನಗಳು ಶಿವಮೊಗ್ಗ ತಾಲೂಕಿಗೆ ಒಳಪಟ್ಟಿವೆ. ಭದ್ರಾವತಿ ಹಾಗೂ ತೀರ್ಥಹಳ್ಳಿಯಲ್ಲಿ ಶೇ.100ರಷ್ಟು ಉಮೇದುವಾರಿಕೆಸಲ್ಲಿಕೆಯಾಗಿದೆ. ಹೊಸಹಳ್ಳಿಯ 1 ಸ್ಥಾನ, ಕಡೇಕಲ್ 1, ಹೊಳೆಬೆನವಳ್ಳಿ 1, ಶೆಟ್ಟಿಹಳ್ಳಿ 1, ಸೂಗೂರು 1, ಹೊಳಲೂರು 1, ತಮ್ಮಡಿಹಳ್ಳಿ 1, ಕೊಮ್ಮನಾಳು 1, ಕುಂಚೇನಹಳ್ಳಿ 1, ಮುದ್ದಿನಕೊಪ್ಪ 1, ಕೊನಗವಳ್ಳಿ 1 ಸೇರಿ ಒಟ್ಟು 11 ಸ್ಥಾನಗಳಿಗೆ ಉಮೇದುವಾರಿಕೆ ಸಲ್ಲಿಕೆಯಾಗಿಲ್ಲ. ಮೀಸಲಾತಿ ವ್ಯತ್ಯಾಸದಿಂದ ಯಾರೂ ಮುಂದೆ ಬಂದಿಲ್ಲ ಎಂದು ಹೇಳಲಾಗುತ್ತಿದೆ
ಗ್ರಾಪಂ ಚುನಾವಣೆ ಕಂಟ್ರೋಲ್ ರೂಂ :
ಗ್ರಾಪಂ ಚುನಾವಣೆ ಅಕ್ರಮಗಳಿಗೆ ಸಂಬಂಧಿ ಸಿ ತಾಲೂಕು ವ್ಯಾಪ್ತಿಯ ದೂರು ಸ್ವೀಕರಿಸಲು ಕಂಟ್ರೋಲ್ ರೂಂ ತೆರೆದಿದ್ದು ಯಾವುದೇ ಸಮಯದಲ್ಲಿ (08182-279311) ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ತಹಶೀಲ್ದಾರ್ ಎಸ್.ಜೆ. ನಾಗರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.