Guarantee ಬಡವರ್ಗವನ್ನು ಆರ್ಥಿಕವಾಗಿ ಸದೃಢಗೊಳಿಸಲು ಪೂರಕ: ಸಚಿವ ಮಧು


Team Udayavani, Feb 9, 2024, 5:28 PM IST

1-sasdsad

ಸಾಗರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ್ಗವನ್ನು ಆರ್ಥಿಕವಾಗಿ ಸದೃಢಗೊಳಿಸಲು ಅತ್ಯಂತ ಪೂರಕವಾದ ಯೋಜನೆಗಳಾಗಿವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುತ್ತಿರುವ ಅನುದಾನ ತೀರ ಕಡಿಮೆಯಾಗಿದೆ. ರಾಜ್ಯ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಬಡವರ ಕಲ್ಯಾಣಕ್ಕೆ ಹಾಕಿಕೊಂಡಿರುವ ಯಾವ ಯೋಜನೆಗಳು ಅನುದಾನದ ಲೋಪ ಆಗದಂತೆ ನೋಡಿಕೊಳ್ಳುತ್ತಿದೆ. ಶಿಕ್ಷಣ ಇಲಾಖೆ ಮೂಲಕ ಈಗಾಗಲೇ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲಾಗುತ್ತಿದೆ. ಮುಂದಿನ ವಾರ ಹದಿನೈದು ದಿನದೊಳಗೆ ರಾಜ್ಯದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿಮಾಲ್ಟ್ ಕೊಡಲಾಗುತ್ತಿದೆ. ಕೇಂದ್ರ ಸರ್ಕಾರ ಶೈಕ್ಷಣಿಕವಾಗಿ ಯೋಜನೆ ಜಾರಿಗೆ ತರುತ್ತೇವೆ ಎಂದು ಮೋಸ ಮಾಡುತ್ತಿತ್ತು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಿನ ಐದು ವರ್ಷಗಳೂ ಎಲ್ಲ ಐದು ಗ್ಯಾರಂಟಿಯನ್ನು ಜನರಿಗೆ ನೀಡುತ್ತದೆ. ಯಾವ ಸರ್ಕಾರ ನಿಮ್ಮ ಪರವಾಗಿ ಇರುತ್ತದೆಯೋ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಜನರ ಮೇಲೆ ಇದೆ. ಮುಂದಿನ ದಿನಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಬಂದಾಗ ನಮ್ಮ ಸರ್ಕಾರವನ್ನು ಮರೆಯಬೇಡಿ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿದೆ. ಸರ್ಕಾರದ ಐದು ಗ್ಯಾರಂಟಿ ದೇಶದ ರಾಜಕೀಯ ಇತಿಹಾಸದಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೇಸ್ ಪಕ್ಷ ಐದು ಗ್ಯಾರಂಟಿ ಘೋಷಣೆ ಮಾಡಿ, ಪ್ರತಿಮನೆಗೆ ಗ್ಯಾರಂಟಿ ಕಾರ್ಡ್ ನೀಡಿತ್ತು. ಪಕ್ಷ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಐದೂ ಗ್ಯಾರಂಟಿಯನ್ನು ಅನುಷ್ಟಾನಕ್ಕೆ ತರುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದರು.

ಗ್ಯಾರಂಟಿ ಕಾರ್ಡ್ ಬಗ್ಗೆ ವಿರೋಧ ಪಕ್ಷಗಳು ಆರಂಭದಲ್ಲಿ ಟೀಕೆ ಮಾಡಲು ಪ್ರಾರಂಭಿಸಿತ್ತು. ಟೀಕೆ ಮಾಡುವ ವಿಪಕ್ಷದವರಿಗೆ ಫಲಾನುಭವಿಗಳೇ ತಕ್ಕ ಉತ್ತರ ನೀಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲ ಜಾತಿಧರ್ಮಗಳಿಗೂ ಸಮಾನವಾಗಿ ಗ್ಯಾರಂಟಿ ಯೋಜನೆ ತಲುಪುತ್ತಿದೆ. ಸರ್ಕಾರ ಗ್ಯಾರಂಟಿ ಯೋಜನೆ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಸಮಿತಿಯನ್ನು ಸಹ ಮಾಡಲು ಮುಂದಾಗಿದೆ. ಯಾರೂ ಯೋಜನೆಯಿಂದ ವಂಚಿತರಾಗಬಾರದು. ಐದೂ ಗ್ಯಾರಂಟಿಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಪ್ರಾಮಾಣಿಕವಾಗಿ ನಡೆಯಬೇಕು ಎಂದರು.

ಐದು ಲಕ್ಷ ಪರಿಹಾರದ ಭರವಸೆ: ಜಿಲ್ಲೆಯಲ್ಲಿ ಶಂಕಿತ ಮಂಗನ ಕಾಯಿಲೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ಕೆಎಫ್‌ಡಿಯಿಂದ ಮೃತಪಟ್ಟರೆ ಎರಡು ಲಕ್ಷ ರೂ. ಪರಿಹಾರ ಕೊಡಲಾಗುತ್ತಿತ್ತು. ಅದನ್ನು ಐದು ಲಕ್ಷಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದು ಬೇಳೂರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಪರಮೇಶ್ವರಪ್ಪ, ವೆಂಕಟೇಶ್, ಶ್ರೀಧರ ಮೂರ್ತಿ, ಪರಶುರಾಮಪ್ಪ, ಉಮಾವತಿ, ನಾಗೇಶ್ ಬ್ಯಾಲಾಳ್ ಇನ್ನಿತರರು ಹಾಜರಿದ್ದರು. ಚಂದ್ರಶೇಖರ ನಾಯ್ಕ್ ಸ್ವಾಗತಿಸಿದರು. ಶ್ರಾವ್ಯ ಸಾಗರ್ ನಿರೂಪಿಸಿದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.