Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


Team Udayavani, Jul 4, 2024, 6:56 PM IST

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಶಾಸಕ ಹರತಾಳು ಹಾಲಪ್ಪ ಕೊಡುಗೆ ಶೂನ್ಯವಾಗಿದೆ. ಕಾಗೋಡು ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ ಅವಧಿ ಮುಗಿಸಿದ್ದಾರೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಲ್ಲಿನ ಎಪಿಎಂಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ಗ್ರಂಥಾಲಯ ಕಟ್ಟಡ ಹಾಗೂ ಸಬ್‌ಜೈಲ್ ಕಾಂಪೌಂಡ್ ಕಾಮಗಾರಿಯನ್ನು ಗುರುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾಲೂಕು ಕಚೇರಿ, ಮೀನು ಮಾರುಕಟ್ಟೆ, ತಾಯಿಮಗು ಆಸ್ಪತ್ರೆ, ಎಪಿಎಂಸಿ, ಸಬ್‌ಜೈಲ್ ಹೀಗೆ ಎಲ್ಲಾ ಕಾಮಗಾರಿಗಳಿಗೂ ನಾನು ಶಾಸಕನಾದ ಮೇಲೆ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ. ಬಿಜೆಪಿಗರು ತಮ್ಮ ಶಾಸಕರು ಅನುದಾನ ತಂದಿದ್ದರು ಎಂದು ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಮಗಾರಿ ಮಂಜೂರು ಮಾಡಿಸಿರುವುದೇ ಅಭಿವೃದ್ಧಿ ಅಲ್ಲ. ಹಣ ಬಿಡುಗಡೆ ಮಾಡಿಸಿ ಕಾಮಗಾರಿ ಪೂರ್ಣಗೊಳಿಸಿದಾಗ ಅಭಿವೃದ್ಧಿ ಎನಿಸಿಕೊಳ್ಳುತ್ತದೆ.

ಜೋಗ ಅಭಿವೃದ್ಧಿಗೆ ಯಡಿಯೂರಪ್ಪ 180 ಕೋಟಿ ರೂ. ವೆಚ್ಚದಲ್ಲಿ ಚಾಲನೆ ನೀಡಿದರು. ಆದರೆ ಹಣ ಕೊಟ್ಟಿಲ್ಲ. 72 ಕೋಟಿ ರೂ. ನಮ್ಮ ಸರ್ಕಾರ ಕೊಟ್ಟಿದೆ. ಜೋಗ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ, ರಾಘವೇಂದ್ರ, ಹಾಲಪ್ಪ ಕೊಡುಗೆ ಏನೂ ಇಲ್ಲ. ನಮ್ಮ ಸರ್ಕಾರ ಹಣ ನೀಡಿದೆ.

ಸದ್ಯದಲ್ಲಿಯೇ ಜೋಗವನ್ನು ವಿಶ್ವದರ್ಜೆ ಪ್ರವಾಸಿ ತಾಣವಾಗಿಸುವ ಯೋಜನೆ ರೂಪಿಸಲಾಗಿದೆ. ರೈನ್‌ಡ್ಯಾನ್ಸ್, ಈಜುಕೊಳ, ಜಿಪ್‌ವೇ, ಸ್ಕೂಬಾ ಡ್ರೈವ್, ರೋಪ್‌ವೇ ಸೇರಿದಂತೆ ಪ್ರವಾಸಿ ಆಕರ್ಷಕ ಸೌಲಭ್ಯ ನೀಡಲಾಗುತ್ತದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಮಲ ಮಾದರಿಯ ಪ್ರವಾಸಿದ್ವಾರ ನಿರ್ಮಿಸಲು ಚಿಂತನೆ ನಡೆಸಲಾಗಿತ್ತು. ಅದನ್ನು ತೆಗೆದು ಸುಂದರವಾದ ಕಮಾನು ರೂಪಿಸಲಾಗುತ್ತಿದೆ ಎಂದರು.

2008-09ರಲ್ಲಿ ನಾನು ಶಾಸಕನಾಗಿದ್ದಾಗ ಒಳಚರಂಡಿ ಕಾಮಗಾರಿಗೆ 70 ಕೋಟಿ ರೂ. ಅನುದಾನ ತಂದಿದ್ದೆ. ನಂತರ ಯಾರೂ ಒಳಚರಂಡಿ ಕಾಮಗಾರಿ ಬಗ್ಗೆ ಆಸಕ್ತಿ ವಹಿಸಿಲ್ಲ. ಮತ್ತೆ ಸರ್ಕಾರದ ಮೇಲೆ ಒತ್ತಡ ಹೇರಿ 34ಕೋಟಿ ರೂ. ಮಂಜೂರು ಮಾಡಿಸಲಾಗಿದೆ. ಇದರ ಜೊತೆಗೆ ಜೋಗದ ಯೂತ್ ಹಾಸ್ಟೆಲ್ ಅಭಿವೃದ್ಧಿಗೆ 90 ಲಕ್ಷ ರೂ. ಮಂಜೂರಾಗಿದೆ.

ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಮಂಜೂರಾಗಿದ್ದು ಜಾಗ ಗುರುತಿಸಲಾಗುತ್ತಿದೆ. ಜೈಲ್ ಗೋಡೆ ನಿರ್ಮಾಣಕ್ಕೆ 1.30 ಕೋಟಿ ರೂ., ಎಪಿಎಂಸಿ ಪ್ರಾಂಗಣದಲ್ಲಿ ರಸ್ತೆ ಚರಂಡಿ ನಿರ್ಮಾಣಕ್ಕೆ 2.50 ಕೋಟಿ ರೂ., ಗ್ರಂಥಾಲಯ ಅಭಿವೃದ್ಧಿಗೆ 50 ಲಕ್ಷ ರೂ., ಮೀನು ಮಾರುಕಟ್ಟೆ ಅಭಿವೃದ್ಧಿಗೆ 1.20 ಕೋಟಿ ರೂ., ಈಜುಕೊಳ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರಾಗಿದೆ.

ಬಿಜೆಪಿಯವರು ಹೇಳುವಂತೆ ಈ ಯಾವ ಅನುದಾನವೂ ಹಿಂದಿನ ಶಾಸಕರ ಅವಧಿಯಲ್ಲಿ ಮಂಜೂರಾಗಿದ್ದಲ್ಲ. ಅನುದಾನದ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿತಪ್ಪಿಸುವ ಕೆಲಸ ಬಿಜೆಪಿ ಮಾಡಬಾರದು ಎಂದರು.

ಈ ಸಂದರ್ಭದಲ್ಲಿ ಸೋಮಶೇಖರ ಲ್ಯಾವಿಗೆರೆ, ಚೇತನರಾಜ್ ಕಣ್ಣೂರು, ಗಣಪತಿ ಮಂಡಗಳಲೆ, ಕೆ.ಹೊಳೆಯಪ್ಪ, ಕಲಸೆ ಚಂದ್ರಪ್ಪ, ಆನಂದ್ ಭೀಮನೇರಿ, ಟಿ.ಪಿ.ರಮೇಶ್, ಬಸವರಾಜ ಸೈದೂರು, ಯಶವಂತ ಪಣಿ, ಐ.ಜಿ.ಸ್ವರೂಪ್, ತಾರಾಮೂರ್ತಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.